
ನವದೆಹಲಿ(ಫೆ.09): ದೆಹಲಿ ವಿಧಾನಸಭೆ ಚುನಾವಣೆಯ ಮತದಾನದ ಶೇಕಡಾವಾರು ಅಂಕಿ ಅಂಶವನ್ನು ಪ್ರಕಟಿಸದ ಚುನಾವಣಾ ಆಯೋಗದ ನಡೆಯನ್ನು ಸಿಎಂ ಅರವಿಂದ್ ಕೇಜ್ರಿವಾಲ್ ಟೀಕಿಸಿದ್ದಾರೆ.
ಮತದಾನದ ಶೇಕಡಾವಾರು ಮತದಾನದ ಅಂಕಿ-ಅಂಶ ಪ್ರಕಟಿಸಲು ವಿಳಂಬ ಮಾಡುತ್ತಿರುವ ಆಯೋಗದ ಕ್ರಮಕ್ಕೆ ಅರವಿಂದ್ ಕೇಜ್ರಿವಾಲ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮತದಾನ ಪ್ರಕ್ರಿಯೆ ಮುಕ್ತಾಯಗೊಂಡು ಒಂದು ದಿನವೇ ಕಳೆದಿದ್ದರೂ ಚುನಾವಣಾ ಆಯೋಗ ಏಕೆ ಶೇಕಡಾವಾರು ಮತದಾನದ ಅಂಕಿ-ಅಂಶ ಪ್ರಕಟಿಸುತ್ತಿಲ್ಲ ಎಂದು ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.
ಮುಗಿದ ದೆಹಲಿ ದಂಗಲ್: ರಾಜಧಾನಿ ಈಗ ಸಮೀಕ್ಷೆಗಳ ಜಂಗಲ್!
ಈ ಕುರಿತು ಟ್ವೀಟ್ ಮಾಡಿರುವ ಕೇಜ್ರಿವಾಲ್, ಶೇಕಡಾವಾರು ಮತದಾನದ ಅಂಕಿ ಅಂಶ ಪ್ರಕಟಿಸದಿರುವ ಚುನಾವಣಾ ಆಯೋಗದ ನಡೆ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ ಎಂದು ಹರಿಹಾಯ್ದಿದ್ದಾರೆ.
ನಿನ್ನೆ(ಶನಿವಾರ)ಚುನಾವಣಾ ಆಯೋಗ ಪ್ರಕಟಿಸಿರುವ ಅಂಕಿ-ಅಂಶಗಳ ಪ್ರಕಾರ ದೆಹಲಿಯಲ್ಲಿ ಶೇ.61.46 ರಷ್ಟು ಮತದಾನ ನಡೆದಿತ್ತು. ಆದರೆ ಅಂತಿಮ ಅಂಕಿ ಅಂಶಗಳನ್ನು ಆಯೋಗ ಇದುವರೆಗೂ ಪ್ರಕಟಿಸಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ