ಮತ್ತೆ ಲಾಕ್‌ಡೌನ್‌ ಭೀತಿ: ತವರಿನತ್ತ ಕೂಲಿ ಕಾರ್ಮಿಕರ ದೌಡು!

Published : Apr 06, 2021, 07:46 AM IST
ಮತ್ತೆ ಲಾಕ್‌ಡೌನ್‌ ಭೀತಿ: ತವರಿನತ್ತ ಕೂಲಿ ಕಾರ್ಮಿಕರ ದೌಡು!

ಸಾರಾಂಶ

ಮತ್ತೆ ಲಾಕ್‌ಡೌನ್‌ ಭೀತಿ: ತವರಿನತ್ತ ಕೂಲಿ ಕಾರ್ಮಿಕರ ದೌಡು| ಬಸ್‌ ನಿಲ್ದಾಣ, ರೈಲ್ವೆ ನಿಲ್ದಾಣಗಳಲ್ಲಿ ಏಕಾಏಕಿ ಹೆಚ್ಚಿದ ಜನಸಂದಣಿ

ನವದೆಹಲಿ/ಮುಂಬೈ(ಏ.06): ದೇಶಾದ್ಯಂತ ಕೊರೋನಾ 2ನೇ ಅಲೆ ಹೆಚ್ಚಾಗಿ, ಮತ್ತೆ ಲಾಕ್ಡೌನ್‌ ಆತಂಕ ಕವಿಯುತ್ತಿರುವ ಬೆನ್ನಲ್ಲೇ, ವಲಸೆ ಕಾರ್ಮಿಕರು ಮತ್ತೆ ಆತಂಕಕ್ಕೆ ಗುರಿಯಾಗಿದ್ದಾರೆ. ಕಳೆದ ಲಾಕ್ಡೌನ್‌ ವೇಳೆ ಇನ್ನಿಲ್ಲದ ಸಂಕಷ್ಟಎದುರಿಸಿ ನೂರಾರು ಕಿ.ಮೀ ನಡೆದೇ ತವರಿಗೆ ತಲುಪಿದ್ದು ವಲಸೆ ಕಾರ್ಮಿಕರು ಮತ್ತೆ ಅಂಥ ಪರಿಸ್ಥಿತಿ ಎದುರಾಗುವುದನ್ನು ತಡೆಯಲು ಈಗಲೇ ತವರಿನತ್ತಿ ಮುಖಮಾಡುವ ಕೆಲಸ ಆರಂಭಿಸಿದ್ದಾರೆ.

ಅತಿ ಹೆಚ್ಚು ವಲಸೆ ಕಾರ್ಮಿಕರನ್ನು ಹೊಂದಿರುವ ಮುಂಬೈ ಸೇರಿದಂತೆ ದೇಶದ ಹಲವು ಪ್ರಮುಖ ನಗರಗಳಲ್ಲಿ ವಲಸೆ ಕಾರ್ಮಿಕರು ಮತ್ತೆ ಭಾರೀ ಪ್ರಮಾಣದಲ್ಲಿ ತವರಿನತ್ತ ತೆರಳುತ್ತಿರುವ ಬೆಳವಣಿಗೆ ಕಂಡುಬಂದಿದೆ. ಪರಿಣಾಮ ಬಸ್‌ ಮತ್ತು ರೈಲ್ವೆ ನಿಲ್ದಾಣಗಳಲ್ಲಿ ಏಕಾಏಕಿ ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ.

ಈಗಾಗಲೇ ಮಹಾರಾಷ್ಟ್ರ ಸೇರಿದಂತೆ ಕೆಲ ರಾಜ್ಯಗಳಲ್ಲಿ ನಾನಾ ರೀತಿಯ ಕೋವಿಡ್‌ ನಿಯಂತ್ರಣ ಕ್ರಮ ಘೋಷಿಸಲಾಗಿದೆ. ಮತ್ತೊಂದೆಡೆ ಪ್ರಧಾನಿ ಮೋದಿ ಅವರು ಏ.8ರಂದು ಸಭೆ ಕರೆದಿರುವುದು ಕೂಡಾ ಜನರಲ್ಲಿ ಆತಂಕ ಹೆಚ್ಚಿಸಿದೆ ಎನ್ನಲಾಗುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಕ್ಷಿಸಲು ಹೋದವನನ್ನೇ ಕೆಳಗೆ ತಳ್ಳಿದ ಮಾನಸಿಕ ಅಸ್ವಸ್ಥ: ಜೀವ ಉಳಿಸಲು ಹೋಗಿ ಕೈಕಾಲು ಮುರಿದುಕೊಂಡ ಯುವಕ
ಉದ್ಯಮಿಗೆ ಲವ್‌ ಟ್ರ್ಯಾಪ್‌, ವೈರಲ್‌ ಆದ ಡಿಎಸ್‌ಪಿ ಕಲ್ಪನಾ ವರ್ಮಾ ಚಾಟ್‌..!