
ನವದೆಹಲಿ[ನ.28]: ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಪಿ.ಚಿದಂಬರಂ ಅವರಿಗೆ ಪದೇ ಪದೇ ಜಾಮೀನು ನಿರಾಕರಿಸುತ್ತಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ವಕೀಲ ಕಪಿಲ್ ಸಿಬಲ್, ಹೀಗೆ ಜಾಮೀನು ನಿರಾಕರಿಸಲು ಇಬ್ಬರು ಮಕ್ಕಳ ಅಪಹರಣ ಕೊಲೆ ಕೇಸಲ್ಲಿ 1978ರಲ್ಲಿ ಗಲ್ಲು ಶಿಕ್ಷೆಗೆ ಗುರಿಯಾದ ಬಿಲ್ಲಾ-ರಂಗಾ ಅಲ್ಲ ಎಂದು ವಾದಿಸಿದ ಘಟನೆ ಬುಧವಾರ ಸುಪ್ರೀಂಕೋರ್ಟ್ನಲ್ಲಿ ನಡೆಯಿತು.
ಆದರೆ ಈ ವಾದದ ಹೊರತಾಗಿಯೂ ಕೋರ್ಟ್ ಚಿದು ಅವರ ನ್ಯಾಯಾಂಗ ವಶವನ್ನು ಡಿ.11ರವರೆಗೆ ವಿಸ್ತರಿಸಿತು. ಈ ನಡುವೆ ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಬುಧವಾರ ಭೇಟಿಯಾಗಿದ್ದು, ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ.
ಒಬ್ಬ ವ್ಯಕ್ತಿಯನ್ನು 99 ದಿನಗಳ ಕಾಲ ಬಂಧನದಲ್ಲಿ ಇರಿಸಿರುವುದು ನ್ಯಾಯಸಮ್ಮತವಲ್ಲ ಎಂದರು. ಇದೇ ವೇಳೆ ಐಎನ್ಎಕ್ಸ್ ಮೀಡಿಯಾ ಕೇಸಲ್ಲಿ ಚಿದು ಅವರ ನ್ಯಾಯಾಂಗ ವಶವನ್ನು ಡಿ.11ರವರೆಗೂ ಸುಪ್ರೀಂಕೋರ್ಟ್ ವಿಸ್ತರಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ