
ಕೋಲ್ಕತಾ(ನ.14): ಬಿಹಾರ ವಿಧಾನಸಭೆ ಚುನಾವಣೆಯಲ್ಲಿ 5 ಸ್ಥಾನ ಗೆದ್ದು, ಮುಸ್ಲಿಂ ಮತ ವಿಭಜಿಸುವ ಮೂಲಕ ಮಹಾಗಠಬಂಧನ ಸೋಲಿಗೆ ಕಾರಣಕರ್ತರಾದರು ಎಂದು ವಿಶ್ಲೇಷಿಸಲಾಗುತ್ತಿರುವ ಹೈದರಾಬಾದ್ ಸಂಸದ ಒವೈಸಿ ಪಕ್ಷ ಎಐಎಂಐಎಂ ಇದೀಗ ಬಂಗಾಳ ವಿಧಾನಸಭೆ ಚುನಾವಣೆಗೂ ಸ್ಪರ್ಧಿಸುವುದಾಗಿ ಘೋಷಿಸಿದೆ.
ಇದರಿಂದಾಗಿ ಮುಸ್ಲಿಂ ಮತಗಳನ್ನು ನೆಚ್ಚಿಕೊಂಡಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ಸಿಗೆ ನಡುಕ ಆರಂಭವಾಗಿದೆ.
ಬಂಗಾಳದ ಜನಸಂಖ್ಯೆಯಲ್ಲಿ ಶೇ.30ರಷ್ಟುಮುಸ್ಲಿಂ ಮತದಾರರಿದ್ದು, 294 ಕ್ಷೇತ್ರಗಳ ಪೈಕಿ 100ರಿಂದ 110 ಕ್ಷೇತ್ರಗಳಲ್ಲಿ ನಿರ್ಣಾಯಕರಾಗಿದ್ದಾರೆ. ಮುಸ್ಲಿಮರು ಹಾಲಿ ತೃಣಮೂಲ ಕಾಂಗ್ರೆಸ್ಸನ್ನು ಬೆಂಬಲಿಸುತ್ತಿದ್ದಾರೆ.
ಈಗ ಒವೈಸಿ ಮತ ವಿಭಜಿಸಿದರೆ, ಬಂಗಾಳದಲ್ಲಿ ಕಮಲ ಅರಳಿಸಲು ಯತ್ನಿಸುತ್ತಿರುವ ಬಿಜೆಪಿಗೆ ಪರೋಕ್ಷವಾಗಿ ಲಾಭವಾಗಲಿದೆ ಎಂದು ಹೇಳಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ