
ಹೈದರಾಬಾದ್ (ಮೇ.13): ಪ್ರಸಕ್ತ ಲೋಕಸಭಾ ಚುನಾವಣೆಯ ಪ್ರಚಾರದ ವೇಳೆ ಧರ್ಮದ ಕುರಿತು ಸಾಕಷ್ಟು ಚರ್ಚೆ ನಡೆದಿರುವ ಹೊತ್ತಿನಲ್ಲೇ, ಈ ಶ್ರೇಷ್ಠ ದೇಶವನ್ನು ಒಂದಲ್ಲಾ ಒಂದು ದಿನ ಹಿಜಾಬ್ ಧರಿಸಿದ ಮಹಿಳೆ ಪ್ರಧಾನಿಯಾಗಿ ಆಳಲಿದ್ದಾಳೆ ಎಂದು ಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಪತ್ರಿಕೆಯೊಂದಕ್ಕೆ ಸಂದರ್ಶನ ನೀಡಿರುವ ಒವೈಸಿಗೆ ಭಾರತ ಯಾವಾಗ ಮೊದಲ ಮುಸ್ಲಿಂ ಪ್ರಧಾನಿಯನ್ನು ಕಾಣಬಹುದು ಎಂಬ ಪ್ರಶ್ನೆ ಕೇಳಲಾಗಿತ್ತು.
ಅದಕ್ಕೆ ಉತ್ತರಿಸಿರುವ ಒವೈಸಿ, ‘ದೇವರ ದಯೆಯಿಂದ, ಭಾರತದಲ್ಲಿ ಮೊದಲ ಮುಸ್ಲಿಂ ಪ್ರಧಾನಮಂತ್ರಿಯಾಗಿ ಹಿಜಬ್ ಧರಿಸಿದ ಮಹಿಳೆಯೇ ಪೀಠವನ್ನೇರುತ್ತಾಳೆ. ಆ ಸಂದರ್ಭ ಬಂದಾಗ ನಾನು ಬದುಕಿರದೇ ಇರಬಹುದು. ಆದರೆ ಅಲ್ಲಾನ ದಯೆಯಿಂದ ಅಂತಹ ಕಾಲ ಭಾರತದಲ್ಲಿ ಬಂದೇ ಬರುತ್ತದೆ’ ಎಂದು ತಿಳಿಸಿದ್ದಾರೆ. ಅಸಾದುದ್ದೀನ್ ಓವೈಸಿ ಹೈದರಾಬಾದ್ ಕ್ಷೇತ್ರದಿಂದ ನಾಲ್ಕು ಬಾರಿ ಸಂಸದರಾಗಿದ್ದು, ಈ ಬಾರಿ ಸತತ ಐದನೇ ಬಾರಿಗೆ ಕಣದಲ್ಲಿದ್ದಾರೆ. ಇವರಿಗೆ ಪ್ರತಿಸ್ಪರ್ಧಿಯಾಗಿ ಬಿಜೆಪಿಯಿಂದ ಮಾಧವಿ ಲತಾ ಸೆಣಸುತ್ತಿದ್ದು, ಹೈದರಾಬಾದ್ ಲೋಕಸಭಾ ಕ್ಷೇತ್ರಕ್ಕೆ ಮೇ 13ರಂದು ಚುನಾವಣೆ ನಡೆಯಲಿದೆ.
ನಮಗೆ ಬರೀ 15 ಸೆಕೆಂಡ್ ಸಾಕು: 100 ಕೋಟಿ ಹಿಂದೂಗಳ ಫಿನಿಷ್ ಎಂದಿದ್ದ ಒವೈಸಿಗೆ ನವನೀತ್ ಸವಾಲ್
ಮುಸ್ಲಿಮರೇ ಹೆಚ್ಚೆಚ್ಚು ಕಾಂಡೋಂ ಬಳಸೋದು: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನಸಾಮಾನ್ಯ ಆಸ್ತಿ ಕಸಿದು, ಅದನ್ನು ಹೆಚ್ಚು ಮಕ್ಕಳು ಹೆರುವ ಕುಟುಂಬಗಳಿಗೆ ನೀಡುತ್ತಾರೆ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಎಂಐಎಂ ಪಕ್ಷದ ನಾಯಕ ಅಸಾದುದ್ದೀನ್ ಒವೈಸಿ ತಿರುಗೇಟು ನೀಡಿದ್ದಾರೆ. ಇಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಒವೈಸಿ ‘ಪ್ರಧಾನಿ ನರೇಂದ್ರ ಮೋದಿ ಮುಸ್ಲಿಮರು ಹೆಚ್ಚು ಮಕ್ಕಳನ್ನು ಹೊಂದುತ್ತಾರೆ ಎಂದು ಹಿಂದೂಗಳಲ್ಲಿ ದ್ವೇಷ ಭಾವನೆ ಬಿತ್ತುತ್ತಿದ್ದಾರೆ. ಆದರೆ ಅವರ ಸರ್ಕಾರದ ಅಂಕಿ ಅಂಶವೇ ಹೇಳುವಂತೆ ಮುಸ್ಲಿಮರ ಜನನ ಪ್ರಮಾಣ ಕಡಿಮೆಯಾಗಿದೆ. ಜೊತೆಗೆ ಮುಸ್ಲಿಮರೇ ಹೆಚ್ಚು ಕಾಂಡೋಂ ಬಳಕೆ ಮಾಡುತ್ತಾರೆ ಎಂದು ಹೇಳಲು ನನಗೆ ಯಾವುದೇ ಸಂಕೋಚವಿಲ್ಲ’ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ