ಮುಸ್ಲಿಂ ಮೌಲ್ವಿಗಳ ವಿರುದ್ಧ ಹರಿಹಾಯ್ದ ಒವೈಸಿ: ಕಾರಣ?

Suvarna News   | Asianet News
Published : Dec 21, 2019, 03:01 PM ISTUpdated : Dec 21, 2019, 05:16 PM IST
ಮುಸ್ಲಿಂ ಮೌಲ್ವಿಗಳ ವಿರುದ್ಧ ಹರಿಹಾಯ್ದ ಒವೈಸಿ: ಕಾರಣ?

ಸಾರಾಂಶ

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ಹಿನ್ನೆಲೆ| CAA ಬೆಂಬಲಿಸಿದ ಮೌಲ್ವಿಗಳ ವಿರುದ್ಧ ಹರಿಹಾಯ್ದ ಅಸದುದ್ದೀನ್ ಒವೈಸಿ| ಕೆಲವು  ಮುಸ್ಲಿಂ ಮೌಲ್ವಿಗಳು ತಮ್ಮದೇ ಭ್ರಮೆಯಲ್ಲಿದ್ದರೆ ಎಂದ ಎಐಎಂಐಎಂ ಮುಖ್ಯಸ್ಥ|'ಇಡೀ ದೇಶ ಒಂದು ದಿಕ್ಕಿನಲ್ಲಿ ಚಲಿಸುತ್ತಿದ್ದರೆ ಕೆಲವು ಮೌಲ್ವಿಗಳಿಕೆ ಇದು ಲೆಕ್ಕವಿಲ್ಲ'| ಶಾಂತಿಯುತ ಪ್ರತಿಭಟನೆಗೆ ಮನವಿ ಮಾಡಿದ ಅಸದುದ್ದೀನ್ ಒವೈಸಿ|

ಹೈದರಾಬಾದ್(ಡಿ.21): ಪೌರತ್ವ ಕಾಯ್ದೆ ತಿದ್ದುಪಡಿಗೆ ಬೆಂಬಲ ನೀಡುತ್ತಿರುವ ಮುಸ್ಲಿಂ ಮೌಲ್ವಿಗಳ ವಿರದ್ಧ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕಿಡಿಕಾರಿದ್ದಾರೆ. 

ಇಡೀ ದೇಶವೇ ಪೌರತ್ವ ಕಾಯ್ದೆ ತಿದ್ದುಪಡಿ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ. ಆದರೆ ಕೆಲವು ಮೌಲ್ವಿಗಳು ಕಾಯ್ದೆಯನ್ನು ಬೆಂಬಲಿಸುವ ಮೂಲಕ  ತಮ್ಮ ಅಜ್ಞಾನವನ್ನು ಹೊರಗಡೆವಿದ್ದಾರೆ ಎಂದು ಒವೈಸಿ ಹರಿಹಾಯ್ದಿದ್ದಾರೆ.

ನೀವು 1987ಕ್ಕಿಂತ ಮೊದಲು ಜನಿಸಿದ್ದರೆ...ಇವು ಪೌರತ್ವ ನಿಯಮಗಳು!

ಇಡೀ ದೇಶ ಒಂದು ದಿಕ್ಕಿನಲ್ಲಿ ಚಲಿಸುತ್ತಿದೆ. ದೇಶಾದ್ಯಂತ ವಿದ್ಯಾರ್ಥಿಗಳು ಎಲ್ಲೆಡೆ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಕೆಲವು  ಮುಸ್ಲಿಂ ಮೌಲ್ವಿಗಳು ತಮ್ಮದೇ ಭ್ರಮೆಯಲ್ಲಿದ್ದು, ಇದ್ಯಾವುದು ಅವರಿಗೆ ಲೆಕ್ಕವಿಲ್ಲ ಎಂದು ಒವೈಸಿ ಗುಡುಗಿದ್ದಾರೆ.

ಇದೇ ವೇಳೆ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಶಾಂತಿಯುತ ಪ್ರತಿಭಟನೆ ನಡೆಸಬೇಕು ಎಂದು ಒವೈಸಿ ಮನವಿ ಮಾಡಿದ್ದಾರೆ. ಸರ್ಕಾರ ಪೊಲೀಸ್ ಬಲದ ಮೂಲಕ ಪ್ರತಿಭಟನೆಯನ್ನು ಹತ್ತಿಕ್ಕಲು ಪ್ರಯತ್ನಿಸಿದರೂ, ಯಾರೂ ಹಿಂಸೆಯ ಮಾರ್ಗದಲ್ಲಿ ಪ್ರತಿಭಟನೆ ಮಾಡಬಾರದು ಎಂದು ಅವರು ಸಲಹೆ ನೀಡಿದ್ದಾರೆ.

ಡಿ.21ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮೆಹೆಂದಿಯಾಗಿತ್ತು, ಆದರೆ ಮದುವೆಯಾಗಲ್ಲ: ಕೊನೆಗೂ Palash Muchhal ಜೊತೆಗಿನ ಸಂಬಂಧಕ್ಕೆ ತೆರೆ ಎಳೆದ Smriti Mandhana
ಮನೆಯಲ್ಲಿ ಒಂದು ರೂಪಾಯಿ ಇಲ್ಲ ಆದ್ರೂ ಸಿಸಿಟಿವಿ ಯಾಕೆ ಹಾಕಿದ್ರಿ: ಸಿಕ್ಕಿದ್ದನ್ನು ದೋಚಿ ಪತ್ರ ಬರೆದಿಟ್ಟು ಹೋದ ಕಳ್ಳ