
ನವದೆಹಲಿ(ಆ.10): ಹಿಂದಿ ಮಾತನಾಡಲು ಬರುವುದಿಲ್ಲ ಎಂದು ಹೇಳಿದ ಡಿಎಂಕೆ ಸಂಸದೆ ಕನಿಮೋಳಿ ಅವರಿಗೆ ಚೆನ್ನೈ ವಿಮಾನ ನಿಲ್ದಾಣದಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಅಧಿಕಾರಿಯೊಬ್ಬ ‘ನೀವು ಭಾರತೀಯರಾ’ ಎಂದು ಕೇಳಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ. ಇದು ಹಿಂದಿ ಹೇರಿಕೆ ಎಂದು ಕನಿಮೋಳಿ ಅವರು ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ, ಅಧಿಕಾರಿ ವಿರುದ್ಧ ಸೂಕ್ರ ಕ್ರಮ ಜರುಗಿಸುವುದಾಗಿ ಸಿಐಎಸ್ಎಫ್ ಸ್ಪಷ್ಟನೆ ನೀಡಿದೆ.
ಹೊಸ ಶಿಕ್ಷಣ ನೀತಿ ನವಭಾರತಕ್ಕೆ ಭವ್ಯ ಮುನ್ನುಡಿ
ದೆಹಲಿಗೆ ತೆರಳುವ ಸಲುವಾಗಿ ಕನಿಮೋಳಿ ಅವರು ಚೆನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಭಾನುವಾರ ತೆರಳಿದ್ದರು. ಭದ್ರತಾ ಸಿಬ್ಬಂದಿ ಹಿಂದಿಯಲ್ಲಿ ಮಾತನಾಡುತ್ತಿದ್ದ ಕಾರಣ, ‘ತಮಿಳು ಅಥವಾ ಇಂಗ್ಲಿಷ್ನಲ್ಲಿ ಮಾತನಾಡಿ. ಏಕೆಂದರೆ, ನನಗೆ ಹಿಂದಿ ಬರುವುದಿಲ್ಲ’ ಎಂದು ಹೇಳಿದರು. ಆ ವೇಳೆ ಸಿಐಎಸ್ಎಫ್ ಅಧಿಕಾರಿ, ‘ನೀವು ಭಾರತೀಯರಾ?’ ಎಂದು ಪ್ರಶ್ನೆ ಮಾಡಿದ್ದಾನೆ.
ಇದನ್ನು ಟ್ವೀಟ್ ಮೂಲಕ ತಿಳಿಸಿ ಖಂಡಿಸಿರುವ ಕನಿಮೋಳಿ, ಭಾರತೀಯತೆಗೆ ಹಿಂದಿ ತಿಳಿದಿರುವುದು ಎಂದಿನಿಂದ ಸರಿಸಮಾನವಾಯಿತು ಎಂದು ಪ್ರಶ್ನಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ