ನಿನ್ನ ಬಿಟ್ಟಿರಲಾರೆ: ಮಡದಿ ಸಾವಿನ ನೋವಲ್ಲಿ ಐಪಿಎಸ್ ಅಧಿಕಾರಿಯೂ ಆತ್ಮಹತ್ಯೆ!

Published : Jun 19, 2024, 12:40 PM ISTUpdated : Jun 19, 2024, 12:42 PM IST
ನಿನ್ನ ಬಿಟ್ಟಿರಲಾರೆ: ಮಡದಿ ಸಾವಿನ ನೋವಲ್ಲಿ ಐಪಿಎಸ್ ಅಧಿಕಾರಿಯೂ ಆತ್ಮಹತ್ಯೆ!

ಸಾರಾಂಶ

ಪತ್ನಿ ಸಾವನ್ನಪ್ಪಿದ ಕೆಲವೇ ಕ್ಷಣಗಳಲ್ಲಿ ಶಿಲಾದಿತ್ಯ ಚೇಟಿಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವಿಷಯ ತಿಳಿಯುತ್ತಲೇ ಪೊಲೀಸ್ ಇಲಾಖೆಯಲ್ಲಿ ಸೂತಕದ ಛಾಯೆ ಆವರಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ದಿಸ್ಪುರ: ಪತ್ನಿ ಸಾವನ್ನಪ್ಪಿದ ವಿಷಯ ತಿಳಿಯುತ್ತಿದ್ದಂತೆ ಗಂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಸ್ಸಾಂನ ಗೃಹ ಮತ್ತು ರಾಜಕೀಯ ಸರ್ಕಾರದ ಕಾರ್ಯದರ್ಶಿ ಐಪಿಎಸ್ ಅಧಿಕಾರಿ ಶಿಲಾದಿತ್ಯ ಚೇಟಿಯಾ ಆತ್ಮಹತ್ಯೆಗೆ ಶರಣಾದ ಅಧಿಕಾರಿ. ಪತ್ನಿಯ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಸ್ಸಾಂ ಪೊಲೀಸರು ಮಾಹಿತಿ ನೀಡಿದ್ದಾರೆ. ಶಿಲಾದಿತ್ಯ ಚೇಟಿಯಾ ಪತ್ನಿ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಸ್ಸಾಂನ ಪೊಲೀಸ್ ಮಹಾನಿರ್ದೇಶಕ ಜಿಪಿ ಸಿಂಗ್, ಅಸ್ಸಾಂನ ಗೃಹ ಮತ್ತು ರಾಜಕೀಯ ಸರ್ಕಾರದ ಕಾರ್ಯದರ್ಶಿ ಶ್ರೀ ಶಿಲಾದಿತ್ಯ ಚೇಟಿಯಾ 2009ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದರು. ಪತ್ನಿ ಸಾವನ್ನಪ್ಪಿದ ಕೆಲವೇ ಕ್ಷಣಗಳಲ್ಲಿ ಶಿಲಾದಿತ್ಯ ಚೇಟಿಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವಿಷಯ ತಿಳಿಯುತ್ತಲೇ ಪೊಲೀಸ್ ಇಲಾಖೆಯಲ್ಲಿ ಸೂತಕದ ಛಾಯೆ ಆವರಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ಪತ್ನಿಯ ಅನಾರೋಗ್ಯದ ಹಿನ್ನೆಲೆ ಶಿಲಾದಿತ್ಯ ಚೇಟಿಯಾ ನಾಲ್ಕು ತಿಂಗಳು ರಜೆಯಲ್ಲಿದ್ದರು. ಕೆಲ ದಿನಗಳ ಹಿಂದೆಯಷ್ಟೇ ಶಿಲಾದಿತ್ಯ ಕರ್ತವ್ಯಕ್ಕೆ ಹಿಂದಿರುಗಿದ್ದರು. ಆತ್ಮಹತ್ಯೆಗೆ ಶರಣಾಗುತ್ತಿದ್ದಂತೆ ಶಿಲಾದಿತ್ಯರನ್ನು ಆಸ್ಪತ್ರೆಗೆ ರವಾನಿಸಲಾಗಿತ್ತು. ವೈದ್ಯರು ಶಿಲಾದಿತ್ಯ ಮೃತರಾಗಿರೋದನ್ನು ಖಚಿತಪಡಿಸಿದ್ದಾರೆ.

ಅಸ್ಸಾಂ ಸರ್ಕಾರದಲ್ಲಿ ಕಾರ್ಯದರ್ಶಿಯಾಗುವ ಮೊದಲು, ಶಿಲಾದಿತ್ಯ ಚೇಟಿಯಾ  ರಾಜ್ಯದ ಟಿನ್ಸುಕಿಯಾ ಮತ್ತು ಸೋನಿತ್‌ಪುರ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಯಾಗಿ (ಎಸ್‌ಪಿ) ಸೇವೆ ಸಲ್ಲಿಸಿದ್ದರು. ಶಿಲಾದಿತ್ಯ ಆತ್ಮಹತ್ಯೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವಿದ್ಯುತ್ ತಂತಿ ಮೇಲೆ ಟವೆಲ್ ಹಾಕಿ ವ್ಯಕ್ತಿ ಸಾವು; ರಕ್ಷಣೆಗೆ ಹೋದ ತಾಯಿ-ಮಗನ ಪ್ರಾಣಪಕ್ಷಿಯೂ ಹಾರಿ ಹೋಯ್ತು!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನದಿ ಸಮೀಪ ಡೆತ್ನೋಟ್ ಬರೆದಿಟ್ಟು ರೇ*ಪ್ ಆರೋಪಿ ಎಸ್ಕೇಪ್: ಆತನಿಗಾಗಿ ನದಿಯಲ್ಲಿ 3 ದಿನ ಹುಡುಕಿದ ಪೊಲೀಸರು
ಕರ್ನಾಟಕ ಸಂಸದರ ಬಗ್ಗೆ ಪ್ರಧಾನಿ ಮೋದಿ ಅಸಮಾಧಾನ, ತೀವ್ರ ಕ್ಲಾಸ್, ಆ 45 ನಿಮಿಷ ಸಭೆಯಲ್ಲಿ ಹೇಳಿದ್ದೇನು?