
ಗುವಾಹಟಿ(ನ.07): ಅಸ್ಸಾಂ ಮತ್ತು ಮಿಜೋರಂ ನಡುವಿನ ಗಡಿವಿವಾದ ಮತ್ತಷ್ಟುಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರ ಸ್ಥಳಕ್ಕೆ ಹೆಚ್ಚುವರಿ ಅರೆಸೇನಾ ಪಡೆ ನಿಯೋಜಿಸುವ ಮೂಲಕ ಪರಿಸ್ಥಿತಿ ನಿಯಂತ್ರಣಕ್ಕೆ ಮುಂದಾಗಿದೆ.
ಉಭಯ ರಾಜ್ಯಗಳು 164.6 ಕಿ.ಮೀ ಗಡಿ ಹಂಚಿಕೊಂಡಿದೆ. ಆದರೆ ತನಗೆ ಸೇರಿದ 509 ಚದರ ಮೈಲು ಜಾಗ ಅಸ್ಸಾಂ ಅತಿಕ್ರಮಿಸಿಕೊಂಡಿದೆ ಎಂದು 50 ವರ್ಷಗಳಿಂದಲೂ ಮಿಜೋರಾಂ ಆರೋಪಿಸುತ್ತಲೇ ಇದೆ. ಇದೇ ವಿಷಯ ಸಂಬಂಧ ತಿಂಗಳ ಹಿಂದೆ ಗಡಿಯಲ್ಲಿ ಸಣ್ಣದಾಗಿ ಗುಂಪು ಘರ್ಷಣೆ ನಡೆದಿತ್ತು.
ಈ ವೇಳೆ ಓರ್ವ ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದರು. ಅಂದಿನಿಂದಲೂ ಸ್ಥಳದಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸ್ಥಳಕ್ಕೆ ಹೆಚ್ಚುವರಿ ಪಡೆ ನಿಯೋಜಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ