
ಶ್ರೀನಗರ(ಮೇ.11): COVID-19 ರ ಎರಡನೇ ಅಲೆಯಲ್ಲಿ ಭಾರತ ತತ್ತರಿಸುತ್ತಿದೆ. ಹೆಚ್ಚುತ್ತಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ಆರೋಗ್ಯ ವ್ಯವಸ್ಥೆಯೇ ಕುಸಿಯುತ್ತಿರುವಾಗ, ದೇಶವು ಇನ್ನೂ ಧೈರ್ಯವಾಗಿ ವೈರಸ್ ಜೊತೆ ಹೋರಾಡುತ್ತಿದೆ.
ಹಾಸಿಗೆಗಳು, ಆಮ್ಲಜನಕ, ಔಷಧಿಗಳು, ಪ್ಲಾಸ್ಮಾ ದಾನಿಗಳು ಮತ್ತು ಆಂಬ್ಯುಲೆನ್ಸ್ ಸೇವೆಗಳ ಕೊರತೆಯು ಈ ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸುತ್ತಿದೆ. ಜೀವ ಉಳಿಸುವ ಆಕ್ಸಿಜನ್ ಕೊರತೆಯು ವೈರಸ್ ವಿರುದ್ಧದ ಹೋರಾಟವನ್ನು ಕುಗ್ಗಿಸುತ್ತಿದೆ. ಆದರೆ ಅವ್ಯವಸ್ಥೆಯ ಮಧ್ಯೆ, ಬಹಳಷ್ಟು ಜನ ಅಗತ್ಯವಿರುವವರಿಗೆ ಸಹಾಯ ಮಾಡುತ್ತಿದ್ದಾರೆ.
ಇತರರಿಗೆ ಆಕ್ಸಿಜನ್ ಕೊಳ್ಳೋಕೆ ಒಡವೆ ಮಾರಿದ ದಂಪತಿಗೆ ಜನ ಥ್ಯಾಂಕ್ಸ್ ಹೇಳಿದ್ದು ಹೀಗೆ
ಕಾಶ್ಮೀರದ ಬುಡ್ಗಾಮ್ ಜಿಲ್ಲೆಯ ಮಂಜೂರ್ ಅಹ್ಮದ್, ಆಸ್ತಮಾ ರೋಗಿಯಾಗಿದ್ದು, ಕಳೆದ ಮೂರು ವರ್ಷಗಳಿಂದ ಆಮ್ಲಜನಕದ ಬೆಂಬಲವದೊಂದಿಗೇ ಬದುಕುತ್ತಿದ್ದಾರೆ. ಹೀಗಿದ್ದರೂ ಅಗತ್ಯವಿರುವ COVID ಪಾಸಿಟಿವ್ ರೋಗಿಗಳಿಗೆ ಆಮ್ಲಜನಕ ಸಿಲಿಂಡರ್ಗಳನ್ನು ತಲುಪಿಸುವ ಕೆಲಸ ಮಾಡುತ್ತಿದ್ದಾರೆ. ತನ್ನ ಸಣ್ಣ ಟ್ರಕ್ ಚಾಲನೆ ಮಾಡುತ್ತಿರುವ ಅವರು ನಿಸ್ವಾರ್ಥವಾಗಿ ಜನರಿಗೆ ಸಾಕಷ್ಟು ಆಮ್ಲಜನಕ ಪೋರೈಕೆ ಮಾಡುವ ಕೆಲಸ ಮಾಡುತ್ತಿದ್ದಾರೆ.
ಟಿಫಿನ್ ಬಾಕ್ಸ್ನಲ್ಲಿ ಚಿನ್ನದ ಬಳೆ: ಸೋಂಕಿತರಾಗಿದ್ದಾಗ ಊಟ ಕೊಟ್ಟಿದ್ದಕ್ಕೆ ಥ್ಯಾಂಕ್ಸ್ ಹೇಳಿದ್ದು ಹೀಗೆ
ಮಾನವೀಯತೆಗಾಗಿ, ನಾನು ಯಾರಿಗಾದರೂ ಆಮ್ಲಜನಕವನ್ನು ತಲುಪಿಸಲು ಮತ್ತು ಅವರ ಜೀವವನ್ನು ಉಳಿಸಲು ಅಥವಾ ಅವರಿಗೆ ಉಪಕಾರವಾದರೆ ಅದು ನನಗೆ ದೊಡ್ಡ ನೆಮ್ಮದಿ. ನಾನೇ ಆಸ್ತಮಾ ರೋಗಿಯಾಗಿದ್ದೇನೆ ಮತ್ತು ರೋಗಿಗಳಿಗೆ ಆಮ್ಲಜನಕ ಎಷ್ಟು ಮುಖ್ಯ ಎಂಬುದು ನನಗೆ ತಿಳಿದಿದೆ ಎನ್ನುತ್ತಾರೆ ಮನ್ಸೂರ್.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCoron
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ