
ಚಂಡಿಗಢ: ಪಂಜಾಬ್ನಲ್ಲಿ ಅ.15ಕ್ಕೆ ಗ್ರಾಮ ಪಂಚಾಯತ್ ಚುನಾವಣೆಗಳು ನಡೆಯಲಿದ್ದು, ಸರಪಂಚ್ ಹುದ್ದೆಗೆ ಭರ್ಜರಿ ಹರಾಜು ಪ್ರಕ್ರಿಯೆ ನಡೆಯುತ್ತಿದೆ.
ರಾಜ್ಯದ ಹಲವು ಗ್ರಾಮಗಳಲ್ಲಿ ಅತಿ ಹೆಚ್ಚು ಹಣವನ್ನು ಬಿಡ್ ಮಾಡಿ ಗೆದ್ದವರನ್ನು ಆಯ್ಕೆ ಮಾಡುವ ಸಂಪ್ರದಾಯ ಹಲವು ವರ್ಷಗಳಿಂದ ಪಾಲನೆಯಾಗುತ್ತಿದೆ. ಹೀಗೆ ನೀಡಿದ ಹಣವನ್ನು ಗ್ರಾಮದ ಅಭಿವೃದ್ಧಿಗೆ ಬಳಸಲಾಗುವುದು. ಇದೇ ಮಾದರಿಯಲ್ಲಿ ಗುರುದಾಸ್ಪುರ ಜಿಲ್ಲೆಯ ಹರ್ದೋವಲ್ ಕಲಾನ್ ಎಂಬ ಗ್ರಾಮದಲ್ಲಿ ಬರೋಬ್ಬರಿ 2 ಕೋಟಿ ರು. ವರೆಗೂ ಬಿಡ್ಡಿಂಗ್ ನಡೆದಿದೆ. ಸ್ಥಳೀಯ ಬಿಜೆಪಿ ನಾಯಕ ಆತ್ಮಸಿಂಗ್ ಅವರು 2 ಕೋಟಿ. ರು. ಚೆಕ್ ಮೂಲಕ ಬಿಡ್ಡಿಂಗ್ ಮಾಡಿದ್ದಾರೆ. ಬಠಿಂಡಾದ ಗೆಹ್ರಿ ಬಟ್ಟಾರ್ ಗ್ರಾಮದಲ್ಲಿ ಇದೇ ರೀತಿಯ ಬಿಡ್ಡಿಂಗ್ ನಡೆಸಿದ್ದು, ಆಕಾಕ್ಷಿಂಗಳಲ್ಲಿ ಒಬ್ಬ 60 ಲಕ್ಷ ರು. ಬಿಡ್ ಮಾಡಿದ್ದಾರೆ.
ದೇಗುಲಗಳಿಂದ ಸಾಯಿಬಾಬಾ ಪ್ರತಿಮೆ ತೆರವು; ಕಾಶೀಲಿ ಶಿವನಿಗಷ್ಟೇ ಪೂಜೆ ಎಂದ ಸನಾತನ ದಳ
ಈ ಹರಾಜು ವಿಧಾನವನ್ನು ಕೆಲ ರಾಜಕೀಯ ಮುಖಂಡರು ಖಂಡಿಸಿದ್ದು, ಪ್ರಜಾಪ್ರಭುತ್ವ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ಕಿಡಿಕಾರಿದ್ದಾರೆ. ಕಾಂಗ್ರೆಸ್ ನಾಯಕ ಪ್ರತಾಪ್ ಸಿಂಗ್ ಬಾಜ್ವಾ ಹರಾಜಿನ ಆಯೋಜಕರನ್ನು ಜೈಲಿಗೆ ಹಾಕಬೇಕು ಎಂದು ಒತ್ತಾಯಿಸಿದ್ದಾರೆ.
ತಿರುಪತಿ ಲಡ್ಡು ವಿವಾದ: ಆಂಧ್ರ ಸರ್ಕಾರಕ್ಕೆ ಸುಪ್ರೀಂ ಚಾಟಿ ಬೀಸಿದ ಬೆನ್ನಲ್ಲೇ ಎಸ್ಐಟಿ ತನಿಖೆಗೆ ತಡೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ