Anti-Marathi Remarks: ಮರಾಠಿ ನಿಂದಿಸಿದ ಆಟೋ ಚಾಲಕನಿಗೆ ಶಿವಸೇನೆ ಕಾರ್ಯಕರ್ತರಿಂದ ಥಳಿತ

Ravi Janekal   | Kannada Prabha
Published : Jul 14, 2025, 06:51 AM ISTUpdated : Jul 14, 2025, 10:07 AM IST
maharashtra news

ಸಾರಾಂಶ

ಮಹಾರಾಷ್ಟ್ರದಲ್ಲಿ ಮರಾಠಿ ಭಾಷೆ ಮತ್ತು ಮಹಾರಾಷ್ಟ್ರವನ್ನು ನಿಂದಿಸಿದ ಆಟೋ ಚಾಲಕನಿಗೆ ಶಿವಸೇನಾ (ಯುಬಿಟಿ) ಕಾರ್ಯಕರ್ತರು ಥಳಿಸಿದ್ದಾರೆ. ಈ ಘಟನೆಯನ್ನು ಶಿವಸೇನಾ ಸ್ಥಳೀಯ ಮುಖಂಡರು ಸಮರ್ಥಿಸಿಕೊಂಡಿದ್ದಾರೆ.

ಪಾಲಘರ್ (ಜುಲೈ.14): ಮಹಾರಾಷ್ಟ್ರದಲ್ಲಿ ಮರಾಠಿಯೇತರ ಭಾಷಿಕರ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚುತ್ತಿರುವ ನಡುವೆಯೇ, ಮಹಾರಾಷ್ಟ್ರ ಹಾಗೂ ಮರಾಠಿ ಭಾಷೆಯನ್ನು ನಿಂದಿಸಿದ್ದಕ್ಕಾಗಿ ಆಟೋರಕ್ಷಾ ಚಾಲಕನ ಮೇಲೆ ಶಿವಸೇನಾ (UBT) ಕಾರ್ಯಕರ್ತರು ಥಳಿಸಿದ ಘಟನೆ ನಡೆದಿದೆ.

ಘಟನೆಯನ್ನು ಶಿವಸೇನಾ (ಯುಬಿಟಿ) ಸ್ಥಳೀಯ ಮುಖಂಡ ಉದಯ್ ಜಾಧವ್ ಸಮರ್ಥಿಸಿಕೊಂಡಿದ್ದು, ‘ಆತನಿಗೆ ತಕ್ಕ ಪಾಠ ಕಲಿಸಿದ್ದೇವೆ. ಮರಾಠಿ ಭಾಷೆ, ಮಹಾರಾಷ್ಟ್ರ ಅಥವಾ ಮಹಾರಾಷ್ಟ್ರದ ಜನರನ್ನು ಯಾರಾದರೂ ನಿಂದಿಸಿದರೆ ಅವರಿಗೆ ಶಿವಸೇನಾ ಸ್ಟೈಲ್‌ನಲ್ಲಿ ಉತ್ತರ ನೀಡಲಾಗುವುದು’ ಎಂದಿದ್ದಾರೆ.

ಆಗಿದ್ದೇನು?:

ವಿರಾರ್ ಪ್ರದೇಶದಲ್ಲಿ ಆಟೋ ಓಡಿಸಿಕೊಂಡಿದ್ದ ಬೇರೆ ರಾಜ್ಯದ ಚಾಲಕ ಕೆಲ ದಿನಗಳ ಹಿಂದೆ ಮರಾಠಿ ಹಾಗೂ ಮರಾಠಿ ಸಾಧಕರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ. ಇದರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಅದರ ಬೆನ್ನಲ್ಲೆ, ಒಬ್ಬ ಮಹಿಳೆ ಸೇರಿದಂತೆ ಶಿವಸೇನಾ ಕಾರ್ಯಕರ್ತರು ರಸ್ತೆಯಲ್ಲಿಯೇ ಆಟೋ ಚಾಲಕನಿಗೆ ಥಳಿಸಿದ್ದಾರೆ. ಅಲ್ಲದೆ, ಮಹಾರಾಷ್ಟ್ರದ ಜನತೆಯಲ್ಲಿ ಕ್ಷಮೆ ಯಾಚಿಸುವಂತೆ ಮಾಡಿದ್ದಾರೆ.

ಕೆಲದಿನಗಳ ಹಿಂದಷ್ಟೆ ಎಂಎನ್‌ಎಸ್ ಕಾರ್ಯಕರ್ತರು ಮರಾಠಿ ಮಾತಾಡದ ಹೋಟೆಲ್ ಮಾಲೀಕನ ಮೇಲೆ ಹಲ್ಲೆ ನಡೆಸಿದ್ದರು. ಶಿವಸೇನಾ (ಯುಬಿಟಿ) ನಾಯಕ ರಾಜನ್ ವಿಚಾರೆ ಹಿಂದಿಭಾಷಿಕ ವ್ಯಾಪಾರಿಗಳನ್ನು ಕಚೇರಿಗೆ ಕರೆಸಿ ಕಪಾಳಮೋಕ್ಷ ಮಾಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪುಟಿನ್ ಔತಣಕೂಟಕ್ಕೆ ರಾಹುಲ್ ಗಾಂಧಿ-ಖರ್ಗೆಗಿಲ್ಲ ಆಮಂತ್ರಣ, ಶಶಿ ತರೂರ್‌ಗೆ ಜಾಕ್‌ಪಾಟ್
ರತನ್ ಟಾಟಾ ಮಲತಾಯಿ, ಲ್ಯಾಕ್‌ಮೆ ಫ್ಯಾಶನ್ ಸಂಸ್ಥಾಪಕಿ ಸೈಮನ್ ಟಾಟಾ ನಿಧನ