ರಾಮಮಂದಿರ ನಿರ್ಮಾಣ ಎಲ್ಲಿಗೆ ಬಂತು? ಸಣ್ಣ ಅಪ್ಡೇಟ್

Published : Jun 26, 2020, 09:24 PM ISTUpdated : Jun 26, 2020, 09:25 PM IST
ರಾಮಮಂದಿರ ನಿರ್ಮಾಣ ಎಲ್ಲಿಗೆ ಬಂತು? ಸಣ್ಣ ಅಪ್ಡೇಟ್

ಸಾರಾಂಶ

ರಾಮಮಂದಿರ ನಿರ್ಮಾಣ ಕಾರ್ಯ ಪ್ರಗತಿಯಲ್ಲಿ/ ಕಲ್ಲಿನ ಕೆತ್ತನೆಗಳ ಸ್ವಚ್ಛತಾ ಕಾರ್ಯ ಆರಂಭ/ ದೆಹಲಿಯಿಂದ ಆಗಮಿಸಿರುವ ತಂಡ/ 90  ದಶಕದಿಂದಲೂ ಮಾಡಿಟ್ಟಿರುವ ಕೆತ್ತನೆ

ಅಯೋಧ್ಯಾ (ಜೂ. 26) ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭವಾಗಿದೆ. ದೆಹಲಿಯಿಂದ ಆಗಮಿಸಸಿರುವ  15 ಜನರ ತಂಡ ರಾಮಮಂದಿರಕ್ಕಾಗಿ ಕೆತ್ತನೆ ಮಾಡಿಟ್ಟಿರುವ ಕಲ್ಲುಗಳ ಸ್ವಚ್ಛತಾ ಕಾರ್ಯದಲ್ಲಿ ನಿರತವಾಗಿದೆ.

90 ರ ದಶಕದಿಂದಲೂ ಕೆತ್ತನೆ ಮಾಡಿರುವ ಕಲ್ಲುಗಳು ಇಲ್ಲಿಯೇ ಇದ್ದವು. ಬಾಬ್ರಿ ಮಸೀದಿ ಧ್ವಂಸಕ್ಕೂ ಎರಡು ವರ್ಷ ಮುನ್ನವೇ ಕಲ್ಲುಗಳ ಕೆತ್ತನೆ ಆರಂಭವಾಗಿತ್ತು.

ಕಲ್ಲುಗಳನ್ನು ಗುಜರಾತ್ ನಿಂದ ಅಯೋಧ್ಯೆಗೆ ತರಲಾಗಿತ್ತು. ಸಂಜಯ್ ಜೇಡಿಯಾ ಎನ್ನುವವರು ಈ ಕಲ್ಲುಗಳ ಸ್ವಚ್ಛತೆ ಮೇಲುಸ್ತುವಾರಿ ವಹಿಸಿಕೊಂಡಿದ್ದಾರೆ. ಕಲ್ಲುಗಳೂ ಹೊಳಪಿಗೆ ಬರಲು ಸುಮಾರು ನಾಲ್ಕು ತಿಂಗಳು ಹಿಡಿಯಬಹುದು ಎಂದು ಅವರು ತಿಳಿಸಿದ್ದಾರೆ.

ರಾಮಮಂದಿರ ನಿರ್ಮಾಣವಾದ ಮೇಲೆ ಹೇಗಿರಲಿದೆ?

ಬಿಜೆಪಿ ಹೊರತುಪಡಿಸಿ ಮುಲಾಯಂ ಸಿಂಗ್ ಯಾದವ್, ಅಖಿಲೇಶ್ ಯಾದವ್ ಮತ್ತು ಮಾಯಾವತಿ ಸರ್ಕಾರ ಇದ್ದಾಗಲೂ ಕೆಲಸ ನಡೆದೇ ಇತ್ತು. ರಾಮಜನ್ಮಭೂಮಿ  ಮಹಾತೀರ್ಪಿಗೆ ಒಂದು ತಿಂಗಳು ಇರುವಾಗ ಕೆಲಸ ನಿಲ್ಲಿಸಲಾಗಿತ್ತು ಎಂದು ರಾಮಜನ್ಮಭೂಮಿ ಟ್ರಸ್ಟ್ ನ ತ್ರಿಲೋಕಿನಾಥ್ ಪಾಂಡೆ ತಿಳಿಸುತ್ತಾರೆ.

ದಶಕಗಳ ಕಾಲ ವಿಚಾರಣೆ ನಡೆದಿದ್ದ ಅಯೋಧ್ಯೆ ರಾಮಜನ್ಮಭೂಮಿ ವಿಚಾರಕ್ಕೆ ಸುಪ್ರೀಂ ಕೋರ್ಟ್ ಮಹಾತೀರ್ಪು ನೀಡಿತ್ತು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಾರ್‌ನಲ್ಲಿ ಜೋಡಿ 'ಸರಸ' ಸೆರೆಹಿಡಿದ ಟೋಲ್‌ ಮ್ಯಾನೇಜರ್‌, ಸಿಸಿಟಿವಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್‌!
ವಿಶ್ವದ ಟಾಪ್ 10 ಬೊಟಾನಿಕಲ್ ಗಾರ್ಡನ್ ಲಿಸ್ಟ್‌ನಲ್ಲಿ ನಂ.1 ನಮ್ಮ ಲಾಲ್‌ಬಾಗ್