500 ವರ್ಷಗಳ ಬಳಿಕ ಅಯೋಧ್ಯೆಯಲ್ಲಿ ವಿಶ್ವದಾಖಲೆಯ ದೀಪಾವಳಿ!

Published : Oct 31, 2024, 09:57 AM IST
500 ವರ್ಷಗಳ ಬಳಿಕ ಅಯೋಧ್ಯೆಯಲ್ಲಿ ವಿಶ್ವದಾಖಲೆಯ ದೀಪಾವಳಿ!

ಸಾರಾಂಶ

ನೂತನ ರಾಮಮಂದಿರದಲ್ಲಿ ರಾಮಲಲ್ಲಾ ವಿರಾಜಮಾನನಾದ ಬಳಿಕ ಮೊದಲ ದೀಪಾವಳಿ ಹಿನ್ನೆಲೆಯಲ್ಲಿ ಬುಧವಾರ ಸರಯೂ ನದಿ ತೀರದಲ್ಲಿ ಏಕಕಾಲಕ್ಕೆ 25 ಲಕ್ಷಕ್ಕೂ ಹೆಚ್ಚು ದೀಪ ಬೆಳಗಿ ಮತ್ತು ಏಕಕಾಲಕ್ಕೆ 1121 ಮಂದಿಯಿಂದ ದೀಪಾರತಿ ಮಾಡುವ ಮೂಲಕ ಹೊಸ ಗಿನ್ನೆಸ್‌ ದಾಖಲೆ ರಚನೆಯಾಗಿದೆ.

ಅಯೋಧ್ಯೆ (ಅ.31): ನೂತನ ರಾಮಮಂದಿರದಲ್ಲಿ ರಾಮಲಲ್ಲಾ ವಿರಾಜಮಾನನಾದ ಬಳಿಕ ಮೊದಲ ದೀಪಾವಳಿಗೆ ಅಯೋಧ್ಯೆ ಸಾಕ್ಷಿಯಾಗಿದೆ. ರಾಮಲಲ್ಲಾನ ಮೊದಲ ದೀಪಾವಳಿ ಹಿನ್ನೆಲೆಯಲ್ಲಿ ಬುಧವಾರ ಸರಯೂ ನದಿ ತೀರದಲ್ಲಿ ಏಕಕಾಲಕ್ಕೆ 25 ಲಕ್ಷಕ್ಕೂ ಹೆಚ್ಚು ದೀಪ ಬೆಳಗಿ ಮತ್ತು ಏಕಕಾಲಕ್ಕೆ 1121 ಮಂದಿಯಿಂದ ದೀಪಾರತಿ ಮಾಡುವ ಮೂಲಕ ಹೊಸ ಗಿನ್ನೆಸ್‌ ದಾಖಲೆ ರಚನೆಯಾಗಿದೆ.

500 ವರ್ಷಗಳ ಸುದೀರ್ಘ ಕಾಯುವಿಕೆ ಬಳಿಕ ಅಯೋಧ್ಯೆಯಲ್ಲಿ ರಾಮಮಂದಿರದ ಕನಸು ಸಾಕಾರಗೊಂಡಿದ್ದು, ರಾಮಮಂದಿರದ ದೀಪೋತ್ಸವ ಹಲವು ವಿಶೇಷತೆಗಳಿಗೆ ಬುಧವಾರ ಸಾಕ್ಷಿಯಾಗಿತ್ತು. ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ತಮ್ಮ ಸಚಿವ ಸಂಪುಟದ ಸಹದ್ಯೋಗಿಗಳ ಜೊತೆಗೆ ದೀಪೋತ್ಸವಕ್ಕೆ ಚಾಲನೆ ನೀಡಿದರು. ಇದೇ ವೇಳೆ ರಾಮಲಲ್ಲಾ ಎದುರು ಯೋಗಿ ದೀಪ ಬೆಳಗಿಸಿದರು. ದೀಪೋತ್ಸವದ ಅಂಗವಾಗಿ ಪೌರಾಣಿಕ ಪಾತ್ರಗಳನ್ನು ಹೊತ್ತ ಅದ್ಧೂರಿ ಮೆರವಣಿಗೆ , ಸ್ತಬ್ಧ ಚಿತ್ರಗಳ ಮೆರವಣಿಗೆಯೂ ನಡೆಯಿತು.

ಆಯೋಧ್ಯೆ ಮಂಗಗಳ ಆಹಾರಕ್ಕೆ ದುಬಾರಿ ಮೊತ್ತ ದೇಣಿಗೆ ನೀಡಿದ ನಟ ಅಕ್ಷಯ್ ಕುಮಾರ್!

ಅಯೋಧ್ಯೆಯ ಬೀದಿ ಬೀದಿಗಳು ಬೆಳಕಿನ ಅಲಂಕಾರಗಳಿಂದ ಕಂಗೊಳಿಸುತ್ತಿತ್ತು. ಸಂಗೀತ ಕಾರ್ಯಕ್ರಮಗಳು ದೀಪಾವಳಿ ಮೆರುಗನ್ನು ಹೆಚ್ಚಿಸಿತ್ತು. ಇನ್ನು ದೀಪೋತ್ಸವದಲ್ಲಿ ಮಯನ್ಮಾರ್‌, ನೇಪಾಳ, ಥಾಯ್ಲೆಂಡ್‌, ಮಲೇಷ್ಯಾ, ಕಾಂಬೋಡಿಯಾ, ಇಂಡೋನೇಷ್ಯಾದ ಕಲಾವಿದರ ಪ್ರದರ್ಶನಗಳನ್ನು ಕೂಡ ಆಯೋಜಿಸಲಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 6 !
ಇನ್ನೂ 3 ದಿನ ತಗ್ಗುವುದಿಲ್ಲ ಇಂಡಿಗೋಳು! - ನಿನ್ನೆ ಮತ್ತೆ 650 ವಿಮಾನ ರದ್ದು