
ನವದೆಹಲಿ (ಸೆ.26): ಸಕಲ ಹಿಂದೂಗಳ ಅಸ್ಮಿತೆಯಂತಿರುವ ಅಯೋಧ್ಯೆಯ ಶ್ರೀರಾಮಚಂದ್ರನ ಜನ್ಮಭೂಮಿಯಲ್ಲಿ ರಾಮನ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ 2024ರ ಜನವರಿ 22 ರಂದು ನಡೆಯಲಿದೆ. ಈ ಬಗ್ಗೆ ಸರ್ಕಾರ ಅಧಿಕೃತವಾಗಿ ಘೋಷಣೆ ಮಾಡಿದೆ. ಜನವರಿ 22 ರಂದು ಪ್ರಾಣಪ್ರತಿಷ್ಠಾಪನೆ ಕಾರ್ಯ ನಡೆಯಲಿದ್ದರೆ, ಜನವರಿ 20 ರಿಂದ 24ರವರೆಗೆ ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿಯೇ ಇರಲಿದ್ದಾರೆ. ವಿವಿಧ ಧಾರ್ಮಿಕ ಕಾರ್ಯಗಳಲ್ಲಿ ಅವರು ಭಾಗಿಯಾಗಲಿದ್ದಾರೆ. ಏಷ್ಯಾನೆಟ್ ಗ್ರೂಪ್ನ ಕಾರ್ಯನಿರ್ವಾಹಕ ಚೇರ್ಮನ್ ರಾಜೇಶ್ ಕಾಲ್ರಾ ಅವರೊಂದಿಗಿನ ಸಂದರ್ಶನದ ವೇಳೆ ಶ್ರೀರಾಮ ಜನ್ಮಭೂಮಿಯ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿರುವ ನೃಪೇಂದ್ರ ಮಿಶ್ರಾ ಎಕ್ಸ್ಕ್ಲೂಸಿವ್ ಆಗಿ ಈ ಮಾಹಿತಿ ನೀಡಿದ್ದರು. 'ಜನವರಿ 15 ರಿಂದ 24 ರವರೆಗೆ ‘ಅನುಷ್ಠಾನ’ ನಡೆಯಲಿದ್ದು, ಈ ವೇಳೆ ‘ಪ್ರಾಣ ಪ್ರತಿಷ್ಠೆ’ ಕೂಡ ನಡೆಯಲಿದೆ. ಪ್ರಧಾನಿ ಮೋದಿ ಆಗಮನದ ದಿನಾಂಕ ಕೂಡ ನಿಗದಯಾಗಿದೆ. ಜನವರಿ 22ರಂದು ಬರಲಿದ್ದು, ಜನವರಿ 22ರಂದು ‘ಪ್ರಾಣ ಪ್ರತಿಷ್ಠೆ’ ಕೂಡ ನಡೆಯಲಿದೆ. ಇದಕ್ಕಾಗಿ ಎಲ್ಲರಿಗೂ ಆಹ್ವಾನ ನೀಡುತ್ತಿದ್ದೇವೆ ಎಂದು ಅಯೋಧ್ಯೆಯ ರಾಮಜನ್ಮಭೂಮಿ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ತಿಳಿಸಿದ್ದಾರೆ.
Ayodhya Temple: ತಿರುಪತಿ ಸೇರಿ ದೇಶದ ವಿವಿಧ ತೀರ್ಥಕ್ಷೇತ್ರಗಳಿಂದ ಅಯೋಧ್ಯೆಗೆ ನೇರ ರೈಲು ಸೇವೆ!
ಇತ್ತೀಚೆಗೆ ಏಷ್ಯಾನೆಟ್ ಗ್ರೂಪ್ ಜೊತೆಗಿನ ಸಂದರ್ಶನದ ವೇಳೆ ವಿವರವಾಗಿ ಮಾತನಾಡಿದ್ದ ನೃಪೇಂದ್ರ ಮಿಶ್ರಾ, ರಾಮಜನ್ಮಭೂಮಿಯ ಬಗ್ಗೆ ಸಂಪೂರ್ನ ವಿವರಗಳನ್ನು ನೀಡಿದ್ದರು. ಇದೇ ವೇಳೆ ಬಹುತೇಕವಾಗಿ ಜನವರಿ 22 ರಂದು ಪ್ರಾಣ ಪ್ರತಿಷ್ಠಾಪನೆ ನಡೆಯಬಹುದು ಎಂದು ತಿಳಿಸಿದ್ದರು. ಪ್ರಧಾನಮಂತ್ರಿ ಕಾರ್ಯಾಲಯಕ್ಕೆ ಬರೆದಿದ್ದ ಪತ್ರಕ್ಕೆ ಉತ್ತರ ಸಿಕ್ಕಿದ್ದು, ಜನವರಿ 22ರ ದಿನವನ್ನೇ ನಿಗದಿ ಮಾಡುವಂತೆ ಸೂಚನೆ ನೀಡಲಾಗಿದೆ. ಅದರೊಂದಿಗೆ ಭವ್ಯ ಶ್ರೀರಾಮಮಂದರಿ ಜನವರಿ 22 ರಿಂದ ಸಾರ್ವಜನಿಕರ ದರ್ಶನಕ್ಕೆ ಮುಕ್ತವಾಗಲಿದೆ.
Ayodhya Temple: ಜ.14ರಿಂದ ಪೂಜೆ ಪ್ರಾರಂಭ, ರಾಮಲಲ್ಲಾನ ಮೂರ್ತಿಗೂ ಪ್ರಾಣ ಪ್ರತಿಷ್ಠಾಪನೆ!
ಶ್ರೀರಾಮಮಂದಿರದ ಗ್ರೌಂಡ್ ಫ್ಲೋರ್ 2023ರ ಡಿಸೆಂಬರ್ ವೇಳೆಗೆ ಅಂತ್ಯಗೊಳ್ಳಲಿದೆ. ಉದ್ಘಾಟನೆ ಹಾಗೂ ಪ್ರಾಣಪ್ರತಿಷ್ಟಾಪನೆ ಬಳಿಕ ಇನ್ನೂ ಕೆಲ ಕೆಲಸಗಳು ಮುಂದುವರಿಯಲಿದೆ. ಆದರೆ, ಪ್ರಾಣಪ್ರತಿಷ್ಠಾಪನೆ ಆದ ಬಳಿಕ, ಭಕ್ತಾದಿಗಳು ಮಂದಿರಕ್ಕೆ ಭೇಟಿ ನೀಡುವ ಅವಕಾಶ ನೀಡಲಾಗುತ್ತದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ