ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!

ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!

Published : Jul 10, 2026, 03:42 PM IST
ಅಯೋಧ್ಯೆ ರಾಮ ಮಂದಿರದ ಕಾಣಿಕೆ ಹುಂಡಿ ಲೂಟಿ ಪ್ರಕರಣದ ಪ್ರಮುಖ ಆರೋಪಿ ಅವಿನಾಶ್ ಶುಕ್ಲಾನನ್ನು ಬಂಧಿಸಲಾಗಿದೆ. ಕದ್ದ ಹಣದಲ್ಲಿ ಗೆಳತಿಗೆ ಐಫೋನ್, ನಗದು ಉಡುಗೊರೆ ನೀಡಿ ಐಷಾರಾಮಿ ಜೀವನ ನಡೆಸುತ್ತಿದ್ದ ಈತನ ಮದುವೆಯೂ ಮುರಿದುಬಿದ್ದಿದೆ. ಎಸ್‌ಐಟಿ ತನಿಖೆಯಿಂದ ಮತ್ತಷ್ಟು ಆಘಾತಕಾರಿ ಸತ್ಯಗಳು ಬಯಲಾಗುತ್ತಿವೆ.

ಅಯೋಧ್ಯೆ: ಅಯೋಧ್ಯೆಯ ಭವ್ಯ ರಾಮ ಮಂದಿರದ ಕಾಣಿಕೆ ಹುಂಡಿ ಲೂಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ವಿಶೇಷ ತನಿಖಾ ತಂಡ (SIT) ನಡೆಸುತ್ತಿರುವ ತನಿಖೆ ತೀವ್ರ ಚುರುಕುಗೊಂಡಿದೆ. ಈ ಮಹಾ ಲೂಟಿ ಪ್ರಕರಣದ ಪ್ರಮುಖ ಆರೋಪಿಯಾದ ಅವಿನಾಶ್ ಶುಕ್ಲಾನನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, ಆತನಿಂದ ಸಾಲು ಸಾಲು ಆಘಾತಕಾರಿ ಸತ್ಯಗಳು ತನಿಖೆಯ ವೇಳೆ ಹೊರಬರುತ್ತಿವೆ. ದೇವಸ್ಥಾನದ ಪವಿತ್ರ ಹಣವನ್ನು ಕದ್ದು ಐಷಾರಾಮಿ ಜೀವನ ನಡೆಸುತ್ತಿದ್ದ ಈ ಕಳ್ಳನ ಕರಾಳ ಮುಖ ಬಯಲಾಗುತ್ತಿದ್ದಂತೆ, ಇತ್ತೀಚೆಗೆ ಆತನ ಮದುವೆಯೂ ಮುರಿದು ಬಿದ್ದಿದೆ.

ಗೆಳತಿಗೆ ಐಫೋನ್, 2.5 ಲಕ್ಷ ಗಿಫ್ಟ್!

ಪೊಲೀಸ್ ವಿಚಾರಣೆಯ ವೇಳೆ ಆರೋಪಿ ಅವಿನಾಶ್ ಶುಕ್ಲಾ ಮಾಡಿರುವ ಖರ್ಚುಗಳ ಪಟ್ಟಿಯನ್ನು ಕಂಡು ಸ್ವತಃ ತನಿಖಾಧಿಕಾರಿಗಳೇ ಬೆಚ್ಚಿಬಿದ್ದಿದ್ದಾರೆ. ರಾಮನ ಹುಂಡಿಯಿಂದ ಕಳ್ಳತನ ಮಾಡಿದ ಹಣದಲ್ಲಿ ಈತ ತನ್ನ ಗೆಳತಿಗೆ ಅತ್ಯಂತ ದುಬಾರಿ ಬೆಲೆಯ ಐಫೋನ್ (iPhone) ಮೊಬೈಲ್ ಹಾಗೂ ಬರೋಬ್ಬರಿ 2.5 ಲಕ್ಷ ರೂಪಾಯಿ ನಗದು ಹಣವನ್ನು ಉಡುಗೊರೆಯಾಗಿ ನೀಡಿದ್ದ ಎನ್ನಲಾಗಿದೆ.

ಅವಿನಾಶ್ ಪಾಲಿಗೆ ಹುಂಡಿಯೇ ಎಟಿಎಂ!

ತನಿಖೆಯ ವೇಳೆ ಪೊಲೀಸರಿಗೆ ಲಭ್ಯವಾಗಿರುವ ಮಾಹಿತಿಯ ಪ್ರಕಾರ, ಅವಿನಾಶ್ ಶುಕ್ಲಾನಿಗೆ ರಾಮ ಮಂದಿರದ ಕಾಣಿಕೆ ಹುಂಡಿಯೇ ಒಂದು ಎಟಿಎಂ (ATM) ಯಂತ್ರದಂತಾಗಿತ್ತು. ತನಗೆ ಹಣದ ಅಗತ್ಯ ಬಿದ್ದಾಗಲೆಲ್ಲಾ ಈತ ಹುಂಡಿಗೆ ಕೈ ಹಾಕುತ್ತಿದ್ದ ಎನ್ನುವ ಕಹಿ ಸತ್ಯ ತನಿಖೆಯಲ್ಲಿ ಬಹಿರಂಗಗೊಂಡಿದೆ. ಕದ್ದ ಹಣದಿಂದ ತನ್ನ ಕುಟುಂಬಸ್ಥರಿಗೂ ಈತ ಲಕ್ಷ ಲಕ್ಷ ಹಣವನ್ನು ಹಂಚಿದ್ದಾನೆ.

20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more