ರಾಮಮಂದಿರ ತೀರ್ಪು ಭಾರತದ ಜಾತ್ಯತೀತತೆ ಪ್ರತಿಬಿಂಬ: ಅಮಿತ್ ಶಾ

Published : Feb 12, 2024, 05:43 AM IST
ರಾಮಮಂದಿರ ತೀರ್ಪು ಭಾರತದ ಜಾತ್ಯತೀತತೆ ಪ್ರತಿಬಿಂಬ: ಅಮಿತ್ ಶಾ

ಸಾರಾಂಶ

‘ರಾಮ ಮಂದಿರ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಮಾಜದ ಎಲ್ಲಾ ವರ್ಗದವರನ್ನು ಒಂದಾಗಿ ಕೊಂಡೊಯ್ಯುವ ಕೆಲಸ ಮಾಡಿದ್ದಾರೆ ಹಾಗೂ ಸುಪ್ರೀಂ ಕೋರ್ಟ್ ತೀರ್ಪು, ಭಾರತದ ಜಾತ್ಯತೀತ ಗುಣವನ್ನು ಜಗತ್ತಿಗೆ ತೋರಿಸಿದೆ’ ಎಂದು ಗೃಹ ಸಚಿವ ಅಮಿತ್ ಶಾ ಪ್ರತಿಪಾದಿಸಿದ್ದಾರೆ. 

ನವದೆಹಲಿ (ಫೆ.12): ‘ರಾಮ ಮಂದಿರ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಮಾಜದ ಎಲ್ಲಾ ವರ್ಗದವರನ್ನು ಒಂದಾಗಿ ಕೊಂಡೊಯ್ಯುವ ಕೆಲಸ ಮಾಡಿದ್ದಾರೆ ಹಾಗೂ ಸುಪ್ರೀಂ ಕೋರ್ಟ್ ತೀರ್ಪು, ಭಾರತದ ಜಾತ್ಯತೀತ ಗುಣವನ್ನು ಜಗತ್ತಿಗೆ ತೋರಿಸಿದೆ’ ಎಂದು ಗೃಹ ಸಚಿವ ಅಮಿತ್ ಶಾ ಪ್ರತಿಪಾದಿಸಿದ್ದಾರೆ. ಅಯೋಧ್ಯೆ ರಾಮಮಂದಿರ ನಿರ್ಮಾಣ ಹಾಗೂ ಪ್ರಾಣ ಪ್ರತಿಷ್ಠಾಪನೆ ಕುರಿತ ಚರ್ಚೆಯಲ್ಲಿ ಭಾಗವಹಿಸಿ ಲೋಕಸಭೆಯಲ್ಲಿ ಮಾತನಾಡಿದ ಶಾ, ‘ಜಗತ್ತಿನ ಯಾವುದೇ ದೇಶದಲ್ಲಿ ಬಹುಸಂಖ್ಯಾತ ಸಮುದಾಯವು ತನ್ನ ನಂಬಿಕೆಗೆ ಸಂಬಂಧಿಸಿದ ವಿಷಯಕ್ಕಾಗಿ ಇಷ್ಟು ದಿನ ಕಾಯಲಿಲ್ಲ’ ಎಂದು ಅಭಿಪ್ರಾಯಪಟ್ಟರು.

‘ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಜನತೆಯ ಹೋರಾಟ 1528ರಲ್ಲಿ ಪ್ರಾರಂಭವಾಯಿತು ಮತ್ತು ಅದಕ್ಕಾಗಿ ಕಾನೂನು ಹೋರಾಟ 1858ರಲ್ಲಿ ಪ್ರಾರಂಭವಾಯಿತು. 300 ವರ್ಷದ ಈ ಹೋರಾಟ ಜನವರಿ 22ರಂದು ಕೊನೆಗೊಂಡಿತು, ಇದು ಭಾರತದ ನಂಬಿಕೆಯನ್ನು ಪುನರುಜ್ಜೀವನಗೊಳಿಸಿತು ಮತ್ತು ಶ್ರೇಷ್ಠ ಭಾರತದ ಪಯಣಕ್ಕೆ ನಾಂದಿ ಹಾಡಿತು. ರಾಮ ಮಂದಿರದ ಕುರಿತ ಸುಪ್ರೀಂ ಕೋರ್ಟ್ ತೀರ್ಪು ಭಾರತದ ಜಾತ್ಯತೀತ ಗುಣವನ್ನು ಜಗತ್ತಿಗೆ ತೋರಿಸಿತು’ ಎಂದರು.

ಬಿಜೆಪಿಯಲ್ಲಿ ಈಶ್ವರಪ್ಪ ಆಟಕ್ಕುಂಟು ಲೆಕ್ಕಕ್ಕಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ ಲೇವಡಿ

ಇದೇ ವೇಳೆ, ಪ್ರಧಾನಿ ನರೇಂದ್ರ ಮೋದಿ ಅವರು ರಾಮನ ಪ್ರಾಣಪ್ರತಿಷ್ಠಾಪನೆಗಾಗಿ 11 ದಿನ ಉಪವಾಸ ವ್ರತ ಆಚರಿಸಿದ್ದನ್ನು ಪ್ರಸ್ತಾಪಿಸಿದ ಶಾ, ‘ಮೋದಿ ಅವರ ಧಾರ್ಮಿಕ ಶಿಸ್ತು ಪ್ರಶಂಸಾರ್ಹವಾಗಿದೆ’ ಎಂದು ಹೊಗಳಿದರು. ಮಂದಿರ ಟೀಕಾಕಾರರನ್ನು ತರಾಟೆಗೆ ತೆಗೆದುಕೊಂಡ ಶಾ, ‘ಟೀಕಾಕಾರರು ಬಿಜೆಪಿ ಭರವಸೆಗಳ ಬಗ್ಗೆ ಅಪಹಾಸ್ಯ ಮಾಡುತ್ತಿದ್ದರು. ಆದರೆ ಮೋದಿ ಸರ್ಕಾರವು ತ್ರಿವಳಿ ತಲಾಖ್ ನಿಷೇಧಿಸಿತು ಮತ್ತು ಇತರ ಅನೇಕ ವಚನಗಳನ್ನು ಪೂರೈಸಿತು. ಬಿಜೆಪಿ ಮತ್ತು ಪಕ್ಷದ ನಾಯಕ ಮೋದಿ ಅವರು ಏನು ಹೇಳುತ್ತಾರೋ ಅದನ್ನೆಲ್ಲ ಮಾಡಿ ತೋರಿಸುತ್ತಾರೆ’ ಎಂದರು.

ರಾಮಾಯಣದಿಂದ ನಮ್ಮ ಸಂಸ್ಕೃತಿ ಬೇರ್ಪಡಿಸಲಾಗದು: ಭಾರತದ ಸಂಸ್ಕೃತಿಯನ್ನು ರಾಮಾಯಣದಿಂದ ಬೇರ್ಪಡಿಸಲು ಸಾಧ್ಯವಿಲ್ಲ. ರಾಮ ಮಂದಿರವು ಸಾಂಸ್ಕೃತಿಕ ಪುನರುಜ್ಜೀವನದ ಸಂಕೇತವಾಗಿದೆ. ಜ.22ರ ದಿನಾಂಕವು ಭವ್ಯ ಭಾರತದ ಪ್ರಯಾಣದ ಆರಂಭವನ್ನು ಸೂಚಿಸುತ್ತದೆ. ಈ ದಿನವು ಭಾರತ ಮಾತೆಯು ವಿಶ್ವಗುರು ಆಗುವ ಹಾದಿಯಲ್ಲಿ ನಮ್ಮನ್ನು ಕರೆದೊಯ್ಯಲು ದಾರಿ ಮಾಡಿಕೊಡುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಅಲ್ಲದೆ, ಜನವರಿ 22 ರಂದು ಪ್ರಾರಂಭವಾದ ಪ್ರಯಾಣವನ್ನು ಮುಂದುವರಿಸಲಾಗುವುದು ಮತ್ತು ಸಾರ್ವತ್ರಿಕ ಚುನಾವಣೆಯ ನಂತರ 2024 ರಲ್ಲಿ ಮೋದಿ ಸರ್ಕಾರವು ಮತ್ತೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾನೂನು ಪಾಲನೆ, ಸಾಮರಸ್ಯ: ಕಾನೂನು ಮತ್ತು ಸಾಂವಿಧಾನಿಕ ಆದೇಶದ ನಂತರ ರಾಮಮಂದಿರವನ್ನು ನಿರ್ಮಿಸಲಾಗಿದೆ. ಬಿಜೆಪಿ ಈ ವಿಚಾರದಲ್ಲಿ ತಾಳ್ಮೆ ಅನುರಿಸಿದೆ. ಅಯೋಧ್ಯೆಯಲ್ಲಿ ರಾಮಮಂದಿರವನ್ನು ಸಾಮರಸ್ಯ ವಾತಾವರಣದಲ್ಲಿ ನಿರ್ಮಿಸಲಾಗಿದೆ. ಪ್ರಾಣಪ್ರತಿಷ್ಠಾಪನೆ ವೇಳೆ ಯಾವುದೇ ರಾಜಕೀಯ ಘೋಷಣೆ ಕೂಗಲಿಲ್ಲ. ಐಕ್ಯತೆಯ ಸಂದೇಶವನ್ನು ಸ್ವೀಕರಿಸಿ ಮತ್ತು ಮುಂದುವರಿಯಿರಿ ಎಂದು ನಾನು ಕೇಳಿಕೊಳ್ಳುತ್ತೇನೆ ಎಂದರು.

ಬೊಮ್ಮಾಯಿಯದು ದೇಶ ಕಂಡ ಅತಿಭ್ರಷ್ಟ ಸರ್ಕಾರ: ಸಚಿವ ರಾಮಲಿಂಗಾರೆಡ್ಡಿ

ಅಡ್ವಾಣಿ ಯಾತ್ರೆ ಸ್ಮರಣೆ: ಬಿಜೆಪಿ ಹಿರಿಯ ನಾಯಕ ಎಲ್‌.ಕೆ. ಅಡ್ವಾಣಿ ಅವರ ‘ರಥಯಾತ್ರೆ’ಯ ಕೊಡುಗೆಯನ್ನು ಸ್ಮರಿಸಿದ ಅವರು, ‘ಇದು ಜನರಲ್ಲಿ ಜಾಗೃತಿ ಮೂಡಿಸಿತು ಮತ್ತು ಮೋದಿ ಅವರು ತಮ್ಮ ಅಧಿಕಾರಾವಧಿಯಲ್ಲಿ ಅಂತಿಮವಾಗಿ ಅವರ ಆಕಾಂಕ್ಷೆಗಳನ್ನು ಈಡೇರಿಸಿದರು’ ಎಂದು ಕೊಂಡಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿನಿಮೀಯ ಶೈಲಿಯಲ್ಲಿ ಹಿಮಾಲಯದ ಮೈನಸ್ ತಾಪಮಾನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ಸ್ಮಗ್ಲರ್‌ ಬಂಧನ
India Latest News Live: Gold Silver Price Today - ಚಿನ್ನದ ದರದಲ್ಲಿ ಏರಿಕೆನಾ? ಇಳಿಕೆನಾ?