ಆಯೋಧ್ಯೆ ರಾಮ ಮಂದಿರ ನಿರ್ಮಾಣ 3 ಸಾವಿರ ಕೋಟಿ ದೇಣಿಗೆ ಸಂಗ್ರಹ; 2023ಕ್ಕೆ ಸಾರ್ವಜನಿಕರಿಗೆ ಮುಕ್ತ!

Published : Aug 04, 2021, 08:26 PM IST
ಆಯೋಧ್ಯೆ ರಾಮ ಮಂದಿರ ನಿರ್ಮಾಣ 3 ಸಾವಿರ ಕೋಟಿ ದೇಣಿಗೆ ಸಂಗ್ರಹ; 2023ಕ್ಕೆ ಸಾರ್ವಜನಿಕರಿಗೆ ಮುಕ್ತ!

ಸಾರಾಂಶ

ಆಯೋಧ್ಯೆ ರಾಮ ಮಂದಿರ ಕಾಮಗಾರಿಗೆ ಮತ್ತಷ್ಟು ವೇಗ 2023ರ ಡಿಸೆಂಬರ್‌ನಲ್ಲಿ ಸಾರ್ವಜನಿಕರಿಗೆ ಮುಕ್ತ ರಾಮ ಮಂದಿರ ದೇಣಿಗೆ ಸೇರಿದಂತೆ ಹಲವು ಮಾಹಿತಿ ಬಹಿರಂಗ  

ಅಯೋಧ್ಯೆ(ಆ.04): ಶತಮಾನಗಳಿಂದ ಆಯೋಧ್ಯೆ ರಾಮ ಮಂದಿರದಲ್ಲಿ ಪೂಜೆ ಸಲ್ಲಿಸಲು ಕಾಯುತ್ತಿರುವ ಭಕ್ತರಿಗೆ ಸಿಹಿ ಸುದ್ದಿ ಸಿಕ್ಕಿದೆ. ರಾಮ ಮಂದಿರ ಕಾಮಗಾರಿ ಭರದಿಂದ ಸಾಗುತ್ತಿದ್ದು, 2023ರ ಡಿಸೆಂಬರ್ ತಿಂಗಳಲ್ಲಿ ರಾಮ ಮಂದಿರ ಸಾರ್ವಜನಿಕರಿಗೆ ಮುಕ್ತವಾಗಲಿದೆ ಎಂದು ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸ್ಪಷ್ಟಪಡಿಸಿದೆ.

ಅಯೋಧ್ಯೆ ರಾಮಮಂದಿರ ಕಾಮಗಾರಿ ವೀಕ್ಷಿಸಿದ ಪೇಜಾವರ ಸ್ವಾಮೀಜಿ

ರಾಮ ಮಂದಿರ, ಕಾಂಪ್ಲೆಕ್ಸ್, ಮ್ಯೂಸಿಯಂ ಸೇರಿದಂತೆ ಎಲ್ಲಾ ಕಾಮಗಾರಿಗಳು 2025ಕ್ಕೆ ಪೂರ್ಣಗೊಳ್ಳಲಿದೆ. 2023ರಿಂದ ಸಾರ್ವಜನಿಕರಿಗೆ ಪ್ರವೇಶಕ್ಕೆ ಅನುಮತಿ ನೀಡಲಾಗುವುದು ಎಂದು ಟ್ರಸ್ಟ್ ಹೇಳಿದೆ. 2020ರ ಆಗಸ್ಟ್ 5 ರಂದು ಪ್ರಧಾನಿ ನರೇಂದ್ರ ಮೋದಿ ರಾಮ ಮಂದಿರ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ್ದರು. ಬರೋಬ್ಬರಿ 1,000 ಕೋಟಿ ವೆಚ್ಚದಲ್ಲಿ ರಾಮ ಮಂದಿರ ನಿರ್ಮಾಣವಾಗಲಿದೆ. ಇನ್ನು ಕಾಂಪ್ಲೆಕ್ಸ್ , ವಸ್ತುಸಂಗ್ರಹಾಲಯ ಸೇರಿ ಇತರ ಕಟ್ಟಗಳ ವೆಚ್ಚ 1,000 ಕೋಟಿ ರೂಪಾಯಿ.

ಉಪ​ಗ್ರ​ಹ ಚಿತ್ರ​ದಲ್ಲಿ ಅಯೋಧ್ಯೆ ರಾಮಮಂದಿರ ನಿರ್ಮಾಣ ಸೆರೆ!

ದೇಶವ್ಯಾಪಿ ರಾಮ ಮಂದಿ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸಲಾಗಿದೆ. ದೇಣಿಗೆ ಮೂಲಕ 3,000 ಕೋಟಿ ರೂಪಾಯಿ ಸಂಗ್ರಹಿಸಲಾಗಿದೆ. ಇನ್ನುಳಿದ ಹಣದಲ್ಲಿ ಆಯೋಧ್ಯೆಯನ್ನು ದರಶರಥನ ಪಟ್ಟಣವನ್ನಾಗಿ ಪರಿವರ್ತಿಸಿ ಆಧುನೀಕರಣಗೊಳಿಸಲು ಟ್ರಸ್ಟ್ ಮುಂದಾಗಿದೆ.

ಮಂದಿರ ನಿರ್ಮಾಣದಲ್ಲಿ ಉಕ್ಕು ಅಥವಾ ಇಟ್ಟಿಗೆ ಬಳಸುತ್ತಿಲ್ಲ. ಕಲ್ಲಿನ ಕೆತ್ತನೆಗಳಿಂದ ಮಂದಿರ ನಿರ್ಮಾಣವಾಗಲಿದೆ. ಆದರೆ ಆಧುನಿಕ ತಂತ್ರಜ್ಞಾನದ ಮೂಲಕ ಮಂದಿರ ನಿರ್ಮಾಣವಾಗುತ್ತಿದೆ. ಸುಮಾರು ಎರಡೂವರೆ ಏಕರೆ ಪ್ರದೇಶದಲ್ಲಿ ರಾಮ ಮಂದಿರ ನಿರ್ಮಾಣವಾಗಲಿದದೆ.

ಭರದಿಂದ ಸಾಗಿದೆ ರಾಮಮಂದಿರ ನಿರ್ಮಾಣ, ಅಡಿಪಾಯದ ಚಿತ್ರಗಳು

ಇನ್ನು ಪ್ರವಾಹ, ಭೂಕಂಪ ಸೇರಿ ಪ್ರಾಕೃತಿ ವಿಕೋಪಗಳನ್ನು ತಡೆಯಬಲ್ಲ ಶಕ್ತಿ ಈ ಮಂದಿರಕ್ಕಿದೆ. ಸದ್ಯ ಮಂದಿರದ ಅಡಿಪಾಯ ಕಾರ್ಯ ಸಾಗುತ್ತಿದೆ. ತೀವ್ರ ಮಳೆ, ಕೊರೋನಾ ಕಾರಣ ನಿರ್ಮಾಣ ಕೊಂಚ ವಿಳಂಬವಾಗಿತ್ತು. ಇದೀಗ ಮತ್ತೆ ವೇಗ ಪಡೆದುಕೊಂಡಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!