ಕಾಂಗ್ರೆಸ್ ಆಡಳಿತದ ಹಿಮಾಚಲದಲ್ಲಿಯೂ ಇಂದು ರಜೆ: ಮನೆ ಮನೆಗಳಲ್ಲಿ ದೀಪ ಬೆಳಗಲೂ ಸಿಎಂ ಸುಖು ಕರೆ

Published : Jan 22, 2024, 07:42 AM IST
ಕಾಂಗ್ರೆಸ್ ಆಡಳಿತದ ಹಿಮಾಚಲದಲ್ಲಿಯೂ ಇಂದು ರಜೆ: ಮನೆ ಮನೆಗಳಲ್ಲಿ ದೀಪ ಬೆಳಗಲೂ ಸಿಎಂ ಸುಖು ಕರೆ

ಸಾರಾಂಶ

ರಾಮಮಂದಿರದಲ್ಲಿ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶ ಸರ್ಕಾರ ಜ.22ರ ಸೋಮವಾರ ಸಾರ್ವತ್ರಿಕ ರಜೆ ಘೋಷಿಸಿದೆ.

ಶಿಮ್ಲಾ: ರಾಮಮಂದಿರದಲ್ಲಿ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶ ಸರ್ಕಾರ ಜ.22ರ ಸೋಮವಾರ ಸಾರ್ವತ್ರಿಕ ರಜೆ ಘೋಷಿಸಿದೆ.

ಕಾಂಗ್ರೆಸ್‌ ಆಡಳಿತದ ರಾಜ್ಯವೊಂದು ರಾಮ ಮಂದಿರದ ಉದ್ಘಾಟನೆಗೆ ರಜೆ ಘೋಷಣೆ ಮಾಡಿದ ಮೊದಲ ಪ್ರಕರಣ ಇದಾಗಿದೆ. ಭಾನುವಾರ ರಾಜ್ಯದ ರಾಮಮಂದಿರಕ್ಕೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಸುಖವಿಂದ‌ರ್ ಸಿಂಗ್ ಸುಖು, 'ರಾಮ ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದ ವ್ಯಕ್ತಿಯಲ್ಲ. ಆತ ಎಲ್ಲರಿಗೂ ಮಾದರಿ ವ್ಯಕ್ತಿ' ಎಂದರು. ಜೊತೆಗೆ 'ಎಲ್ಲಾ ನಾಗರಿಕರಿಗೂ ಮನೆಗಳಲ್ಲೂ ದೀಪ ಬೆಳಗುವಂತೆ' ಕರೆ ನೀಡಿದರು.

ರಜೆ ಪ್ರಶ್ನಿಸಿದ್ದ ವಿದ್ಯಾರ್ಥಿಗಳಿಗೆ ತಪರಾಕಿ: ಸೋಮವಾರ ರಜೆ ನೀಡಿದ್ದನ್ನು ಪ್ರಶ್ನಿಸಿ ಮಹಾರಾಷ್ಟ್ರ, ಗುಜರಾತ್‌ನ ನಾಲ್ವರು ವಿದ್ಯಾರ್ಥಿಗಳು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಬಾಂಬೆ ಹೈಕೋರ್ಟ್ ವಜಾ ಮಾಡಿದೆ. ಇದೊಂದು ರಾಜಕೀಯ ಪ್ರೇರಿತ ಮತ್ತು ದುರುದ್ದೇಶ ಹೊಂದಿದ ಅರ್ಜಿಯಾಗಿದೆ. ಬೇರೆಯವರು ಅರ್ಜಿ ಸಲ್ಲಿಸಿದ್ದರೆ ದಂಡ ಹಾಕುತ್ತಿದ್ದೆವು ಎಂದು ಎಚ್ಚರಿಸಿದೆ.

ಶತಮಾನದ ಕನಸು ಇಂದು ನನಸು: ಅಯೋಧ್ಯೆಯಲ್ಲಿ ರಾಮಾವತಾರಕ್ಕೆ ಕ್ಷಣಗಣನೆ

ರಾಹುಲ್ ಪಾದಯಾತ್ರೆ ವೇಳೆ ಮೋದಿ, ಜೈ ಶ್ರೀರಾಮ್ ಘೋಷಣೆ: ಸಿಟ್ಟಿಗೆದ್ದು ...

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Kali Dance Controversy: ಕಾಳಿ ವೇಷ ಧರಿಸಿ ಕೆಟ್ಟ ಡ್ಯಾನ್ಸ್ ಪ್ರದರ್ಶನ, ಆಕ್ರೋಶಕ್ಕೆ ಬೆದರಿ ಕ್ಷಮೆ ಕೇಳಿದ ಕೋಲ್ಕತ್ತಾ ಕಲಾತಂಡ
ಪಶ್ಚಿಮ ಬಂಗಾಳದ ಮಾಜಿ ಉಪಸಭಾಪತಿ ಆಶಿಶ್ ಬ್ಯಾನರ್ಜಿ ಟಿಎಂಸಿ ಪಕ್ಷದ ಕಚೇರಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!