ರಾಮಲಲ್ಲಾ ವಿಗ್ರಹ ಆಯ್ಕೆ ಘೋಷಣೆ ಜ.17ಕ್ಕೆ, 11 ಟ್ರಸ್ಟಿಗಳಿಂದ ಮತದಾನ ಮೂಲಕ ವಿಗ್ರಹ ಆಯ್ಕೆ

Published : Jan 03, 2024, 09:07 AM IST
ರಾಮಲಲ್ಲಾ ವಿಗ್ರಹ ಆಯ್ಕೆ ಘೋಷಣೆ ಜ.17ಕ್ಕೆ, 11 ಟ್ರಸ್ಟಿಗಳಿಂದ ಮತದಾನ ಮೂಲಕ ವಿಗ್ರಹ ಆಯ್ಕೆ

ಸಾರಾಂಶ

ರಾಮಲಲ್ಲಾ ವಿಗ್ರಹ ಆಯ್ಕೆ ಘೋಷಣೆ 17ಕ್ಕೆ. ಡಿ.29ಕ್ಕೆ 11 ಟ್ರಸ್ಟಿಗಳಿಂದ ಮತದಾನ ಮೂಲಕ ವಿಗ್ರಹ ಆಯ್ಕೆ. ಮೊನ್ನೆ ಮತದಾನದ ಲಿಖಿತ ಮಾಹಿತಿ ಟ್ರಸ್ಟ್‌ ಅಧ್ಯಕ್ಷರಿಗೆ ಹಸ್ತಾಂತರ. ಅಂತಿಮ ಆಯ್ಕೆ ಯಾವುದು ಎಂದು ಇನ್ನೂ ಘೋಷಿಸಿಲ್ಲ. ಜ.17ಕ್ಕೆ ರಾಮಲಲ್ಲಾ ಮೂರ್ತಿ ಅನಾವರಣ 

ಅಯೋಧ್ಯೆ (ಜ.3): ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪಿಸಲಾಗುವ ರಾಮ ಲಲ್ಲಾ ವಿಗ್ರಹವನ್ನು ಡಿ.29ರಂದೇ ಆಯ್ಕೆ ಮಾಡಲಾಗಿದೆ. ಆದರೆ ಮೂವರು ಶಿಲ್ಪಿಗಳು ಕೆತ್ತಿದ ವಿಗ್ರಹದಲ್ಲಿ ಯಾವುದನ್ನು ಆಯ್ಕೆ ಮಾಡಲಾಗಿದೆ ಎಂಬುದನ್ನು ಘೋಷಿಸಿಲ್ಲ. ಜ.17ರಂದು ವಿಗ್ರಹವನ್ನು ಅಯೋಧ್ಯೆಯಲ್ಲಿ ‘ನಗರ ಯಾತ್ರೆ’ಗೆ ಕರೆದೊಯ್ದಾಗಲೇ ಯಾವ ವಿಗ್ರಹ ಆಯ್ಕೆಯಾಗಿದೆ ಎಂಬುದು ಜನರಿಗೆ ತಿಳಿಯಲಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್‌ ಸ್ಪಷ್ಟಪಡಿಸಿದ್ದಾರೆ.

ಎಂಬಿಎ ಓದಿ ಕುಲ ಕಸುಬಿಗೆ ಮರಳಿದ ಅರುಣ್ ಯೋಗಿರಾಜ್ ಬದುಕು ಸಾರ್ಥಕ, ಕಲೆ ...

ಶ್ರೀರಾಮ ಮಂದಿರಕ್ಕೆ ಮೂರ್ತಿಯನ್ನು ಕೆತ್ತನೆ ಮಾಡಿರುವ ದೇಶದ ಮೂವರು ಶಿಲ್ಪಿಗಳ ಪೈಕಿ ಕರ್ನಾಟಕ ಶಿಲ್ಪಿ ಅರುಣ್‌ ಯೋಗಿರಾಜ್‌ ಕೆತ್ತನೆ ಮಾಡಿರುವ ವಿಗ್ರಹವನ್ನೇ ಆಯ್ಕೆ ಮಾಡಲಾಗಿದೆ ಎಂಬ ದಟ್ಟ ವದಂತಿಗಳ ಬೆನ್ನಲ್ಲೇ ಮಂದಿರ ಟ್ರಸ್ಟ್‌ನ ಈ ಹೇಳಿಕೆ ಬಂದಿದೆ.

ಸುದ್ದಿಗಾರರ ಜತೆ ಮಾತನಾಡಿದ ಚಂಪತ್‌ ರಾಯ್‌ ‘ಡಿ.29ರಂದು ಅಯೋಧ್ಯೆ ಟ್ರಸ್ಟ್‌ನ ಎಲ್ಲ 11 ಸದಸ್ಯರು ಮತದಾನದ ಮೂಲಕ ವಿಗ್ರಹವನ್ನು ಆಯ್ಕೆ ಮಾಡಿದ್ದಾರೆ. ಮತದಾನದ ಲಿಖಿತ ಮಾಹಿತಿಯನ್ನು ಸೋಮವಾರ ಟ್ರಸ್ಟ್‌ನ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ್ ದಾಸ್‌ರಿಗೆ ನೀಡಲಾಗಿದೆ’ ಎಂದರು.

ಹೊಸ ವರ್ಷದ ದಿನ ತಮ್ಮ ಸಂಬಂಧವನ್ನು ದೃಢಪಡಿಸಿದ ಸಮಂತಾ ಮಾಜಿ ಬಾಯ್‌ಫ್ರೆ ...

ಆದರೆ, ಜ.17ರವರೆಗೆ ರಾಮನ ಮೂರ್ತಿಯ ಯಾವುದೇ ಚಿತ್ರ ಹಾಗೂ ವಿಡಿಯೋವನ್ನು ಬಹಿರಂಗ ಮಾಡುವುದಿಲ್ಲ. ಯಾವುದೇ ಇತರ ಮಾಹಿತಿಯನ್ನೂ ಬಹಿರಂಗಪಡಿಸುವುದಿಲ್ಲ ಎಂದು ಇದೇ ವೇಳೆ ವಿಎಚ್‌ಪಿ ರಾಷ್ಟ್ರೀಯ ವಕ್ತಾರ ವಿನೋದ್‌ ಬನ್ಸಲ್‌ ಸ್ಪಷ್ಟಪಡಿಸಿದರು.

ಇನ್ನು ಜ.17ರಂದು ನಡೆಯಲಿರುವ ‘ನಗರ ಯಾತ್ರೆ’ ವೇಳೆ ರಾಮ ಲಲ್ಲಾ ವಿಗ್ರಹಕ್ಕೆ ಕಣ್ಣು ಕಟ್ಟಲಾಗುತ್ತದೆ. . ಶಿಲ್ಪಿಗಳು ಮತ್ತು ಆಯ್ಕೆ ಮಾಡಿದ 11 ಜನರನ್ನು ಬಿಟ್ಟು ರಾಮ ಲಲ್ಲಾರನ್ನು ಯಾರೂ ನೋಡಿಲ್ಲ’ ಎಂದು ಬನ್ಸಲ್‌ ನುಡಿದರು. ಇನ್ನೊಬ್ಬ ಟ್ರಸ್ಟ್ ಸದಸ್ಯ ಮಾತನಾಡಿ, ‘ಪ್ರಾಣಪ್ರತಿಷ್ಠಾಪನೆ ದಿನವೇ ವಿಗ್ರಹವನ್ನು ಸಾರ್ವಜನಿಕಗೊಳಿಸುವುದು ಸೂಕ್ತ’ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮನೆ ಮುಂದೆ ದನ ಸೆಗಣಿ ಹಾಕಿದ್ದಕ್ಕೆ ಯುವಕನ ಕೊಲೆ
ಗಂಡ ಉಳಿಯಲಿಲ್ಲ, ಎಗ್ಸಾಂ ಬರೆಯಲಿಲ್ಲ, ಕ್ಯಾನ್ಸಲ್ ಆಗಿದ್ದು ಬರೀ ಫ್ಲೈಟ್ ಅಲ್ಲ ನೂರಾರು ಮಂದಿ ಕನಸು