ಅಲೋಪತಿ ಬಗ್ಗೆ ಅಪಪ್ರಚಾರ ಮಾಡಿಲ್ಲ, ಕೋರ್ಟಿಗೆ ಪತಂಜಲಿ ಉತ್ಪನ್ನ ಬಗ್ಗೆ ಸ್ಪಷ್ಟನೆ ನೀಡುವೆ: ರಾಮದೇವ್‌

Published : Nov 23, 2023, 09:28 AM ISTUpdated : Nov 23, 2023, 09:34 AM IST
 ಅಲೋಪತಿ ಬಗ್ಗೆ ಅಪಪ್ರಚಾರ ಮಾಡಿಲ್ಲ, ಕೋರ್ಟಿಗೆ ಪತಂಜಲಿ ಉತ್ಪನ್ನ ಬಗ್ಗೆ ಸ್ಪಷ್ಟನೆ ನೀಡುವೆ: ರಾಮದೇವ್‌

ಸಾರಾಂಶ

ಕೋರ್ಟಿಗೆ ಪತಂಜಲಿ ಉತ್ಪನ್ನ ಬಗ್ಗೆ ಸ್ಪಷ್ಟನೆ ನೀಡುವೆ: ರಾಮದೇವ್‌- ಅಲೋಪತಿ ವಿರುದ್ಧ ಪ್ರಚಾರ ಮಾಡಿಲ್ಲ ಎಂದು ಬಾಬಾ ಸ್ಪಷ್ಟನೆ- ಅಯುರ್ವೇದದ ಬಗ್ಗೇ ಅಪಪ್ರಚಾರ.

ನವದೆಹಲಿ (ನ.24): ನಾವು ಅಲೋಪತಿ ವಿರುದ್ಧ ಪ್ರಚಾರ ಮಾಡಿಲ್ಲ. ಪತಂಜಲಿ ಆಯುರ್ವೇದ ಸಂಸ್ಥೆಯ ವಿರುದ್ಧ ಪಿತೂರಿ ನಡೆಸಿ ಅಪಪ್ರಚಾರ ನಡೆಸಲಾಗುತ್ತಿದೆ. ಈ ಬಗ್ಗೆ ನಾವು ಸುಪ್ರೀಂ ಕೋರ್ಟಿಗೆ ಸ್ಪಷ್ಟನೆ ನೀಡುತ್ತೇವೆ ಎಂದು ಸಂಸ್ಥೆಯ ಸ್ಥಾಪಕರಾದ ಯೋಗಗುರು ಬಾಬಾ ರಾಮ್‌ದೇವ್‌ ತಿಳಿಸಿದ್ದಾರೆ.

ಅಲೋಪತಿ ಬಗ್ಗೆ ಪತಂಜಲಿ ಆಯುರ್ವೇದ ಉತ್ಪನ್ನಗಳು ಅಪಪ್ರಚಾರ ನಿಲ್ಲಿಸದಿದ್ದರೆ 1 ಕೋಟಿ ರು. ದಂಡ ಹಾಕಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್‌ ಎಚ್ಚರಿಕೆ ನೀಡಿರುವ ಬಗ್ಗೆ ಪತಂಜಲಿ ಆಯುರ್ವೇದ ಸಂಸ್ಥೆಯ ಮುಖ್ಯಸ್ಥರಾದ ಆಚಾರ್ಯ ಬಾಲಕೃಷ್ಣ ಜೊತೆ ಪತ್ರಕರ್ತರೊಂದಿಗೆ ಮಾತನಾಡಿದ ಬಾಬಾ, ‘ನಾವು ಯಾರ ವಿರುದ್ಧವೂ ಅಪಪ್ರಚಾರ ಮಾಡಿಲ್ಲ. ಬದಲಾಗಿ ನಮ್ಮ ಮೇಲೆಯೇ ಹಲವರು ಅಪಪ್ರಚಾರ ಮಾಡುತ್ತಿದ್ದಾರೆ. ನಮ್ಮ ಸಂಸ್ಥೆಯ ಜಾಹೀರಾತುಗಳು ಸತ್ಯಾಂಶವನ್ನು ಹೊಂದಿದ್ದು, ಇದಕ್ಕೆ ಸೂಕ್ತ ವಿವರಣೆಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಿದ್ದೇವೆ. ಅವರ ಬಳಿ ಹಣ ಮತ್ತು ಸಂಖ್ಯಾಬಲವಿದ್ದರೆ ನಮ್ಮ ಬಳಿ ಗಿಡಮೂಲಿಕೆ ಮತ್ತು ಋಷಿಮುನಿಗಳ ಸೂತ್ರಗಳ ಬಲವಿದೆ’ ಎಂದರು.

ಪತಂಜಲಿ ಉತ್ಪನ್ನಗಳಿಗೆ ತಲಾ 1 ಕೋಟಿ ದಂಡ: ಸುಪ್ರೀಂ ಎಚ್ಚರಿಕೆ

ಸಂಸ್ಥೆಯ ಮುಖ್ಯಸ್ಥರಾದ ಆಚಾರ್ಯ ಬಾಲಕೃಷ್ಣ ಮಾತನಾಡಿ, ‘ನಮ್ಮ ಉತ್ಪನ್ನಗಳನ್ನು ಗಿಡಮೂಲಿಕೆಗಳಿಂದ ಮಾಡಲಾಗುತ್ತದೆ. ಅಲೋಪತಿಯವರ ಔಷಧಿಗಳನ್ನು ನಾವು ಗೌರವಿಸುತ್ತೇವೆ. ಹಾಗೆಯೇ ನಮ್ಮ ಔಷಧಿಗಳನ್ನೂ ಅವರು ಗೌರವಿಸಬೇಕೆಂದು ಬಯಸುತ್ತೇವೆ. ತಮ್ಮ ಉತ್ಪನ್ನಗಳ ಜಾಹೀರಾತುಗಳಲ್ಲಿರುವುದು ಸತ್ಯಾಂಶ ಮಾತ್ರವೇ ಆಗಿದ್ದು, ಅದನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಲಿದ್ದೇವೆ’ ಎಂದರು.

ಅಂಬಾನಿ, ಟಾಟಾ ಸೇರಿ ಯಾವ ಬಿಲಿಯನೇರ್‌ ಬಳಿಯೂ ಇಲ್ಲದ ಭಾರತದ ಅತ್ಯಂತ ದುಬಾರಿ ಕಾರು ಹೊಂದಿರುವ ಬೆಂಗಳೂರಿಗ

ಪತಂಜಲಿ ಉತ್ಪನ್ನವು ಕೆಲವು ರೋಗಗಳನ್ನು ನಿವಾರಿಸುತ್ತದೆ ಎಂದು ಸುಳ್ಳು ಜಾಹೀರಾತು ಕೊಡುವುದನ್ನು ನಿಲ್ಲಿಸದಿದ್ದರೆ ಮತ್ತು ಅಲೋಪತಿ ವಿರುದ್ಧ ಅಪಪ್ರಚಾರ ಮಾಡುವುದನ್ನು ಕೈಬಿಡದಿದ್ದರೆ 1 ಕೋಟಿ ರು. ದಂಡ ಹಾಕುವುದಾಗಿ ಸುಪ್ರೀಂ ಕೋರ್ಟ್‌ ಎಚ್ಚರಿಸಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಹೆಸರು ಸರ್ವಜ್ಞ: ಹಿರಿಯ ಆಟಗಾರನ ಸೋಲಿಸಿ ಜಾಗತಿಕ ಚೆಸ್ ಶ್ರೇಯಾಂಕ ಪ್ರವೇಶಿಸಿದ 3 ವರ್ಷದ ಪೋರ
ನಾನು ಮೋಸ ಮಾಡಿಲ್ಲ, ಗಾಸಿಪ್‌ ನಂಬಬೇಡಿ ಎಂದ Palash Muchhal; ಮದುವೆ ಕ್ಯಾನ್ಸಲ್‌ ಎಂದ Smriti Mandhana