
ನವದೆಹಲಿ(ಜೂ.24): ವೈದ್ಯರ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ ತಮ್ಮ ವಿರುದ್ಧ ದೇಶಾದ್ಯಂತ ದಾಖಲಾದ ಕೇಸ್ಗಳ ವಿರುದ್ಧ ಯೋಗಗುರು ಬಾಬಾ ರಾಮ್ದೇವ್ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.
ಜೊತೆಗೆ ತಮ್ಮ ವಿರುದ್ಧ ದೇಶಾದ್ಯಂತ ದಾಖಲಾಗಿರುವ ಎಲ್ಲಾ ಪ್ರಕರಣಗಳನ್ನು ಒಟ್ಟುಗೂಡಿಸಿ ದೆಹಲಿಗೆ ವರ್ಗಾಯಿಸಬೇಕು ಎಂದು ತಮ್ಮ ಅರ್ಜಿ ಮುಖಾಂತರ ಬಾಬಾ ರಾಮ್ದೇವ್ ಅವರು ಸುಪ್ರೀಂಗೆ ನಿವೇದಿಸಿಕೊಂಡಿದ್ದಾರೆ.
ಮತ್ತೆ ಪವಾರ್- ಪ್ರಶಾಂತ್ ಭೇಟಿ: 15 ದಿನದಲ್ಲಿ 3ನೇ ಸಲ ಸಮಾಲೋಚನೆ
ಕೊರೋನಾ 2ನೇ ಅಲೆ ಉತ್ತುಂಗಕ್ಕೆ ಮುಟ್ಟಿದ ವೇಳೆ ಬಾಬಾ ರಾಮ್ದೇವ್ ಅವರು ಕೊರೋನಾ ವಿರುದ್ಧ ವೈದ್ಯಕೀಯ ಚಿಕಿತ್ಸೆಯ ಪರಿಣಾಮಕಾರಿಯ ಬಗ್ಗೆ ಪ್ರಶ್ನಿಸಿದ್ದರು. ಅದು ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು.
COVID-19 ಚಿಕಿತ್ಸೆಗಾಗಿ ವೈದ್ಯಕೀಯ ಕ್ಷೇತ್ರ ಬಳಸುತ್ತಿರುವ ಔಷಧಿಗಳ ಬಗ್ಗೆ "ಸುಳ್ಳು" ಮಾಹಿತಿಯನ್ನು ಹರಡಿದ ಆರೋಪದ ಮೇಲೆ ಕಳೆದ ವಾರ ಛತ್ತೀಸ್ಗಡ್ ಪೊಲೀಸರು ರಾಮ್ದೇವ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ