ಕ್ಷಮೆ ಕೇಳಿ ಹೇಳಿಕೆ ಹಿಂಪಡೆದ ಯೋಗಗುರು ಬಾಬಾ ರಾಮ್‌ದೇವ್

Published : May 23, 2021, 11:07 PM IST
ಕ್ಷಮೆ ಕೇಳಿ ಹೇಳಿಕೆ ಹಿಂಪಡೆದ ಯೋಗಗುರು ಬಾಬಾ ರಾಮ್‌ದೇವ್

ಸಾರಾಂಶ

* ವಿವಾದಿತ  ಹೇಳಿಕೆ ಹಿಂದಕ್ಕೆ ಪಡೆದು ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್ * ಅಲೋಪಥಿಯಿಂದ ಪ್ರಯೋಜನ ಇಲ್ಲ ಎಂಬ ಅರ್ಥದಲ್ಲಿ ಮಾತನಾಡಿದ್ದರು * ರಾಮ್ ದೇವ್ ವಿರುದ್ಧ ಪ್ರಕರಣ ದಾಖಲಿಸಲು ಭಾರತೀಯ ವೈದ್ಯಕೀಯ ಸಂಘ (ಐಎಂಎ)  ಒತ್ತಾಯಿಸಿತ್ತು

ನವದೆಹಲಿ (ಮೇ 23) ಅಲೋಪಥಿ ಬಗ್ಗೆ ಬಾಬಾ ರಾಮ್ ದೇವ್ ವಿವಾದಾತ್ಮಕ  ಹೇಳಿಕೆ ನೀಡಿದ್ದು ದೊಡ್ಡ ಸುದ್ದಿಯಾಗಿತ್ತು.  ಇದೀಗ ಯೋಗ ಗುರು ತಮ್ಮ ಹೇಳಿಕೆ ಹಿಂದಕ್ಕೆ ಪಡೆದಿದ್ದು ಕ್ಷಮೆಯಾಚಿಸಿದ್ದಾರೆ.

ಬಾಬಾ ರಾಮ್ ದೇವ್ ಗೆ ಪತ್ರ ಬರೆದಿದ್ದ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಹೇಳಿಕೆ ಹಿಂದಕ್ಕೆ ಪಡೆದುಕೊಳ್ಳಲು ತಿಳಿಸಿದ್ದರು.  ಇದಕ್ಕೆ ಉತ್ತರಿಸಿದ ರಾಮ್ ದೇವ್ ಹೇಳಿಕೆ ಹಿಂದಕ್ಕೆ ಪಡೆದುಕೊಂಡಿದ್ದು ಈ ವಿವಾದವನ್ನು ಇಲ್ಲಿಗೆ ಅಂತ್ಯ ಮಾಡಬೇಕು ಎಂದು ಕೇಳಿಕೊಂಡಿದ್ದಾರೆ.

ಅಲೋಪಥಿ ವೈದ್ಯ ಪದ್ಧತಿಯ ಬಗ್ಗೆ ತಿಳಿವಳಿಕೆ ಇಲ್ಲದೇ ಹೇಳಿಕೆ ನೀಡುತ್ತಿರುವ ಯೋಗ ಗುರು ಬಾಬಾ ರಾಮ್ ದೇವ್ ವಿರುದ್ಧ  ಕ್ರಮ ತೆಗೆದುಕೊಳ್ಳಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯವನ್ನು ಭಾರತೀಯ ವೈದ್ಯಕೀಯ ಸಂಘ (ಐಎಂಎ)  ಒತ್ತಾಯಿಸಿತ್ತು.

'ಅಲೋಪಥಿ ಸರಿ ಇಲ್ಲ ಎಂದಿದ್ದ ರಾಮ್ ದೇವ್'

ಬಾಬಾ ರಾಮ್ ದೇವ್ ವಿರುದ್ಧ ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಬೇಕು, ಬಾಬಾ ರಾಮ್ ದೇವ್ ಅಲೋಪಥಿ ಬಗ್ಗೆ ತಿಳಿವಳಿಕೆ ಇಲ್ಲದೇ ನೀಡುತ್ತಿರುವ ಹೇಳಿಕೆಗಳು ಜನರ ದಿಕ್ಕು ತಪ್ಪಿಸುತ್ತಿವೆ ಎಂದು ಸಂಘ ಆರೋಪಿಸಿತ್ತು.

ಅಲೋಪಥಿ ಔಷಧಗಳನ್ನು ತೆಗೆದುಕೊಂಡ ಲಕ್ಷಾಂತರ ಮಂದಿ ಸಾವನ್ನಪ್ಪಿದ್ದಾರೆ, ಡಿಸಿಜೈ ಅನುಮೋದನೆ ನೀಡಿರುವ ಔಷಧಗಳಾದ ಫ್ಯಾವಿಫ್ಲೂ ಹಾಗೂ ಇನ್ನಿತರ ಔಷಧಗಳು ಕೋವಿಡ್-19 ಚಿಕಿತ್ಸೆಯಲ್ಲಿ ವಿಫಲಗೊಂಡಿವೆ ಎಂಬ ಅರ್ಥದಲ್ಲಿ  ಯೋಗಗುರು ಮಾತನಾಡಿದ್ದರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!