ಬಾಬ್ರಿ ಧ್ವಂಸ: ಅಡ್ವಾಣಿ ಸೇರಿ 32 ಜನರ ಖುಲಾಸೆ ಪ್ರಶ್ನಿಸಿ ಸುಪ್ರೀಂಗೆ ಮನವಿ

Published : Dec 08, 2022, 09:29 AM IST
ಬಾಬ್ರಿ ಧ್ವಂಸ: ಅಡ್ವಾಣಿ ಸೇರಿ 32 ಜನರ ಖುಲಾಸೆ ಪ್ರಶ್ನಿಸಿ ಸುಪ್ರೀಂಗೆ ಮನವಿ

ಸಾರಾಂಶ

1992ರಲ್ಲಿ ನಡೆದ ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬಿಜೆಪಿ ನಾಯಕ ಎಲ್‌.ಕೆ.ಅಡ್ವಾಣಿ ಸೇರಿದಂತೆ 32 ಜನರನ್ನು ಖುಲಾಸೆಗೊಳಿಸಿದ ಸಿಬಿಐ ಕೋರ್ಟ್‌ ಆದೇಶವನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಲು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ನಿರ್ಧರಿಸಿದೆ.

ಅಯೋಧ್ಯಾ: 1992ರಲ್ಲಿ ನಡೆದ ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬಿಜೆಪಿ ನಾಯಕ ಎಲ್‌.ಕೆ.ಅಡ್ವಾಣಿ ಸೇರಿದಂತೆ 32 ಜನರನ್ನು ಖುಲಾಸೆಗೊಳಿಸಿದ ಸಿಬಿಐ ಕೋರ್ಟ್‌ ಆದೇಶವನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಲು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ನಿರ್ಧರಿಸಿದೆ. ಖುಲಾಸೆಯನ್ನು ಈ ಹಿಂದೆ ಅಲಹಾಬಾದ್‌ ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತಾದರೂ, ಅರ್ಜಿದಾರರಿಗೆ ಪ್ರಕರಣದಲ್ಲಿ ಯಾವುದೇ ನಂಟಿಲ್ಲ ಎಂದು ಹೇಳಿ ಕೋರ್ಟ್ ಪುನರ್‌ಪರಿಶೀಲನಾ ಅರ್ಜಿ ವಜಾ ಮಾಡಿತ್ತು. ಅಯೋಧ್ಯೆ ಪ್ರಕರಣದ ತೀರ್ಪಿನ ವೇಳೆ ಮಸೀದಿ ಧ್ವಂಸವು ಒಂದು ಕ್ರಿಮಿನಲ್‌ ಅಪರಾಧ ಎಂದು ಸ್ವತಃ ನ್ಯಾಯಾಲಯವೇ ಹೇಳಿತ್ತು. ಹೀಗಾಗಿ ತೀರ್ಪನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಲು ನಿರ್ಧರಿಸಲಾಗಿದೆ ಎಂದು ಮಂಡಳಿ ಹೇಳಿದೆ.
 

LK Advani Birthday: ಬಿಜೆಪಿ ಭೀಷ್ಮನನ್ನು ಭೇಟಿಯಾದ ಪ್ರಧಾನಿ ಮೋದಿ

ಬಾಬ್ರಿ ಮಸೀದಿ ಧ್ವಂಸದ ವೇಳೆ ಸಿಎಂ ಆಗಿದ್ದ, ಹಿಂದುತ್ವದ ಪ್ರಖರ ಪ್ರತಿಪಾದಕ ಸಿಂಗ್‌!

ಅಯೋಧ್ಯೆ ಮಸೀದಿ ಶಂಕುಸ್ಥಾಪನೆಗೆ ಡೇಟ್ ಫಿಕ್ಸ್, ಇದು ಬಾಬ್ರಿ ಮಸೀದಿಗಿಂತಲೂ ದೊಡ್ಡದು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮೋದಿ ಅವರೇ ನನ್ನ ಗಂಡ ವಿಕ್ರಂನನ್ನು ಪಾಕಿಸ್ತಾನಕ್ಕೆ ಕಳುಹಿಸಿ: ಪಾಕ್ ಮಹಿಳೆಯ ಮನವಿ
ಕಾರವಾರ ಜೈಲಲ್ಲಿ ಡ್ರಗ್ಸ್‌ಗಾಗಿ ಜೈಲ‌ರ್ ಮೇಲೆ ಕೈದಿಗಳಿಂದ ಹಲ್ಲೆ: ಬೆಂಗಳೂರು ಜೈಲೊಳಗೆ ಸಿಗರೇಟ್ ಸಾಗಿಸಲೆತ್ನಿಸಿ ಸಿಕ್ಕಿಬಿದ್ದ ವಾರ್ಡನ್