ಬಾಬ್ರಿ ಧ್ವಂಸ: ಅಡ್ವಾಣಿ ಕೇಸಿನ ತೀರ್ಪು ಇಂದು!

Published : Sep 30, 2020, 07:50 AM ISTUpdated : Sep 30, 2020, 06:18 PM IST
ಬಾಬ್ರಿ ಧ್ವಂಸ: ಅಡ್ವಾಣಿ ಕೇಸಿನ ತೀರ್ಪು ಇಂದು!

ಸಾರಾಂಶ

ಬಾಬ್ರಿ ಧ್ವಂಸ: ಅಡ್ವಾಣಿ ಕೇಸಿನ ತೀರ್ಪು ಇಂದು| ಜೋಶಿ, ಉಮಾಭಾರತಿಯೂ ಆರೋಪಿಗಳು| 28 ವರ್ಷ ಬಳಿಕ ಸಿಬಿಐ ಕೋರ್ಟ್‌ ತೀರ್ಪು| ಆರೋಪ ಸಾಬೀತಾದರೆ 5 ವರ್ಷದವರೆಗೆ ಜೈಲು| ಮೇಲ್ಮನವಿ ಸಲ್ಲಿಸಲೂ ಇದೆ ಅವಕಾಶ

ಲಖನೌ(ಸೆ.30): 1992ರಲ್ಲಿ ಧ್ವಂಸಗೊಂಡಿದ್ದ ಅಯೋಧ್ಯೆ ಬಾಬ್ರಿ ಮಸೀದಿ ಪ್ರಕರಣದ ತೀರ್ಪು ಬುಧವಾರ ಪ್ರಕಟವಾಗಲಿದೆ. ಇದರೊಂದಿಗೆ ಬಿಜೆಪಿ ಮುಖಂಡರಾದ ಎಲ್‌.ಕೆ. ಅಡ್ವಾಣಿ (92), ಮುರಳಿಮನೋಹರ ಜೋಶಿ (86), ಉಮಾಭಾರತಿ ಸೇರಿ 32 ಆರೋಪಿಗಳ ಹಣೆಬರಹ, ಘಟನೆ ನಡೆದ 28 ವರ್ಷ ಬಳಿಕ ನಿರ್ಧಾರವಾಗಲಿದೆ.

ಎಲ್ಲ 32 ಆರೋಪಿಗಳೂ ಖುದ್ದು ಹಾಜರಿರಬೇಕು ಎಂದು ಈಗಾಗಲೇ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಸ್‌.ಕೆ. ಯಾದವ್‌ ಸೂಚಿಸಿದ್ದಾರೆ. ಆದರೆ ಅನಾರೋಗ್ಯ, ಕೋವಿಡ್‌, ಕೋವಿಡ್‌ನಿಂದ ಈಗಷ್ಟೇ ಚೇತರಿಸಿಕೊಂಡಿರುವ ಕಾರಣ ಅಡ್ವಾಣಿ, ಜೋಶಿ, ಉಮಾಭಾರತಿ, ಕಲ್ಯಾಣ್‌ಸಿಂಗ್‌, ಚಂಪತ್‌ರಾಯ್‌ ಬುಧವಾರ ತೀರ್ಪು ಪ್ರಕಟದ ವೇಳೆ ನ್ಯಾಯಾಲಯದಲ್ಲಿ ಹಾಜರಿರುವುದಿಲ್ಲ.

ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಕಲ್ಯಾಣ ಸಿಂಗ್‌, ವಿನಯ ಕಟಿಯಾರ್‌, ಸಾಧ್ವಿ ಋುತಾಂಬರಾ, ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಚಂಪತ್‌ ರಾಯ್‌ ಅವರು ಪ್ರಕರಣದ ಇತರ ಆರೋಪಿಗಳಲ್ಲಿ ಸೇರಿದ್ದಾರೆ. ಆರೋಪ ರುಜುವಾತಾದರೆ ಗರಿಷ್ಠ 5 ವರ್ಷ ಜೈಲು ಸಜೆ ಆಗುವ ಸಾಧ್ಯತೆ ಇದೆ. ಆದರೂ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಅವಕಾಶ ಇದ್ದೇ ಇದೆ.

ಪ್ರಕರಣದ ವಿಚಾರಣೆ ಅಂತ್ಯಕ್ಕೆ ಸೆಪ್ಟೆಂಬರ್‌ 30ರ ಗಡುವನ್ನು ಸುಪ್ರೀಂಕೋರ್ಟ್‌ ವಿಧಿಸಿತ್ತು. ಆ ಪ್ರಕಾರ ಸೆಪ್ಟೆಂಬರ್‌ 30ಕ್ಕೆ ತೀರ್ಪು ಪ್ರಕಟವಾಗುತ್ತಿದೆ. ಪ್ರಕರಣದ ವಿಚಾರಣೆ ನಡೆಸಿದ್ದ ಸಿಬಿಐ, 351 ಸಾಕ್ಷಿಗಳ ವಿಚಾರಣೆ ನಡೆಸಿ ಹಾಗೂ 600 ದಾಖಲೆಗಳನ್ನು ಪರಿಶೀಲಿಸಿ 48 ಆರೋಪಿಗಳ ವಿರುದ್ಧ ಚಾಜ್‌ರ್‍ಶೀಟ್‌ ಸಲ್ಲಿಸಿತ್ತು. ಈ ಪೈಕಿ ಈಗಾಗಲೇ 16 ಮಂದಿ ತೀರಿಹೋಗಿದ್ದಾರೆ.

ಕರಸೇವೆಯ ಹೆಸರಿನಲ್ಲಿ ಜಮಾಯಿಸಿದ್ದ ಬಲಪಂಥೀಯ ಕಾರ್ಯಕರ್ತರನ್ನು ಹುರಿದುಂಬಿಸಿ 1992ರ ಡಿ.6ರಂದು ಅಂದಿನ ವಿವಾದಿತ ರಾಮಜನ್ಮಭೂಮಿಯಲ್ಲಿದ್ದ ಮಸೀದಿ ಧ್ವಂಸಗೊಳಿಸಲು ಸಂಚು ರೂಪಿಸಲಾಗಿತ್ತು ಎಂಬುದು ಸಿಬಿಐ ದೋಷಾರೋಪ. ಆದರೆ ಇದನ್ನು ಅಡ್ವಾಣಿ ಸೇರಿದಂತೆ ಆಪಾದಿತರು ನಿರಾಕರಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮುಸ್ಲಿಂ ಲೀಗ್‌, ಜಿನ್ನಾಗೆ ಮಣಿದ ನೆಹರು, ವಂದೇ ಮಾತರಂ ಅನ್ನು ಹರಿದು ಹಾಕಿದ್ದು ಕಾಂಗ್ರೆಸ್‌: ಮೋದಿ ವಾಗ್ದಾಳಿ
ಮದುವೆಯಾದ್ರೆ ಸಿಗುತ್ತೆ 2.5 ಲಕ್ಷ ರೂಪಾಯಿ; ಶೇ.99 ಜನರಿಗೆ ಈ ವಿಷಯವೇ ಗೊತ್ತಿಲ್ಲ