ಬೆಂಗಳೂರಲ್ಲಿ ಅಮಿತ್‌ ಶಾ ಟೀಕಿಸಿದ್ದ ಕೇಸಿನಲ್ಲಿ ರಾಹುಲ್‌ಗೆ ಬೇಲ್‌

Published : Feb 21, 2024, 04:46 AM IST
ಬೆಂಗಳೂರಲ್ಲಿ ಅಮಿತ್‌ ಶಾ ಟೀಕಿಸಿದ್ದ ಕೇಸಿನಲ್ಲಿ ರಾಹುಲ್‌ಗೆ ಬೇಲ್‌

ಸಾರಾಂಶ

2018ರ ಚುನಾವಣೆಯ ಸಮಯದಲ್ಲಿ ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ರಾಹುಲ್‌, ‘ಬಿಜೆಪಿ ತನ್ನನ್ನು ತಾನು ಅತ್ಯಂತ ಪ್ರಾಮಾಣಿಕ ಪಕ್ಷ ಎಂದು ಕರೆದುಕೊಳ್ಳುತ್ತದೆ. ಆದರೆ ಕೊಲೆ ಪ್ರಕರಣದ ಆರೋಪಿಯನ್ನು ತನ್ನ ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮಾಡಿಕೊಂಡಿದೆ ಎಂದು ಹೇಳಿದ್ದರು. ರಾಹುಲ್‌ರ ಈ ಹೇಳಿಕೆ ವಿರುದ್ಧ ಬಿಜೆಪಿ ನಾಯಕ ವಿಜಯ್‌ ಮಿಶ್ರಾ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ್ದರು.

ಬೆಂಗಳೂರು(ಫೆ.21):  2018ರ ಕರ್ನಾಟಕ ವಿಧಾನಸಭೆ ಚುನಾವಣೆ ಸಮಯದಲ್ಲಿ ಬಿಜೆಪಿ ನಾಯಕ ಅಮಿತ್‌ ಶಾ ವಿರುದ್ಧ ನೀಡಿದ ಹೇಳಿಕೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿಗೆ ಸ್ಥಳೀಯ ನ್ಯಾಯಾಲಯ ಜಾಮೀನು ನೀಡಿದೆ.

ಪ್ರಸ್ತುತ ಉತ್ತರ ಪ್ರದೇಶದಲ್ಲಿ ಭಾರತ್‌ ಜೋಡೋ ನ್ಯಾಯ ಯಾತ್ರೆಯಲ್ಲಿ ಭಾಗಿಯಾಗಿರುವ ರಾಹುಲ್, ವಿಚಾರಣೆಗಾಗಿ ಸುಲ್ತಾನ್‌ಪುರ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಯೋಗೇಶ್‌ ಯಾದವ್‌, 25 ಸಾವಿರ ರು.ಗಳ 2 ಬಾಂಡ್‌ ನೀಡುವಂತೆ ತಿಳಿಸಿ ರಾಹುಲ್‌ ಗಾಂಧಿ ಅವರಿಗೆ ಜಾಮೀನು ನೀಡಿದರು.

ಪ್ರಾಣಪ್ರತಿಷ್ಠೆಯಲ್ಲಿ ಒಬಿಸಿ-ದಲಿತರಿರಲಿಲ್ಲ, ಐಶ್ವರ್ಯ ರೈಗೆ ಆಹ್ವಾನ; ಮೋದಿ ವಿರುದ್ಧ ರಾಹುಲ್ ಕೆಂಡ!

ಏನಿದು ಪ್ರಕರಣ?:

2018ರ ಚುನಾವಣೆಯ ಸಮಯದಲ್ಲಿ ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ರಾಹುಲ್‌, ‘ಬಿಜೆಪಿ ತನ್ನನ್ನು ತಾನು ಅತ್ಯಂತ ಪ್ರಾಮಾಣಿಕ ಪಕ್ಷ ಎಂದು ಕರೆದುಕೊಳ್ಳುತ್ತದೆ. ಆದರೆ ಕೊಲೆ ಪ್ರಕರಣದ ಆರೋಪಿಯನ್ನು ತನ್ನ ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮಾಡಿಕೊಂಡಿದೆ ಎಂದು ಹೇಳಿದ್ದರು. ರಾಹುಲ್‌ರ ಈ ಹೇಳಿಕೆ ವಿರುದ್ಧ ಬಿಜೆಪಿ ನಾಯಕ ವಿಜಯ್‌ ಮಿಶ್ರಾ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ್ದರು.
2019ರ ಲೋಕಸಭಾ ಚುನಾವಣೆ ವೇಳೆ ಕರ್ನಾಟಕದ ಕೋಲಾರದಲ್ಲಿ ಮೋದಿ ಸಮುದಾಯದ ವಿರುದ್ಧ ನೀಡಿದ ಹೇಳಿಕೆ ಕೇಸಲ್ಲಿ ರಾಹುಲ್‌ಗೆ ಗುಜರಾತ್‌ ಕೋರ್ಟ್‌ 2 ವರ್ಷ ಜೈಲುಶಿಕ್ಷೆ ವಿಧಿಸಿ ಬಳಿಕ ಅದನ್ನು ಅಮಾನತಿನಲ್ಲಿ ಇಟ್ಟಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Maharashtra Municipal Corporation Results: ಬಿಎಂಸಿಯಲ್ಲಿ ಬಹುಮತದ ಗಡಿ ದಾಟಿದ ಮಹಾಯುತಿ, ಠಾಕ್ರೆ ಸರ್ಕಾರ್‌ ಅಧಿಕಾರ ಅಂತ್ಯ!
ಅಳಿಯನಿಗೆ ರಾಜ ಮರ್ಯಾದೆ: 158 ಬಗೆಯ ಭಕ್ಷ್ಯ ಸಿದ್ಧಪಡಿಸಿ ಬಡಿಸಿದ ಆಂಧ್ರದ ಕುಟುಂಬ