ಬಜರಂಗದಳ ನಿಷೇಧ ವಿಚಾರ; ಖರ್ಗೆ ವಿರುದ್ಧ 100 ಕೋಟಿ ರು. ಮಾನಹಾನಿ ಕೇಸ್‌ !

Published : May 16, 2023, 01:16 AM IST
ಬಜರಂಗದಳ ನಿಷೇಧ ವಿಚಾರ; ಖರ್ಗೆ ವಿರುದ್ಧ 100 ಕೋಟಿ ರು. ಮಾನಹಾನಿ ಕೇಸ್‌ !

ಸಾರಾಂಶ

ಕರ್ನಾಟಕ ವಿಧಾನಸಭೆ ಚುನಾವಣೆಯ ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ನಿಷೇಧಿತ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾಗೆ ಹೋಲಿಸಲಾಗಿದೆ ಎಂದು ಆರೋಪಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ 100 ಕೋಟಿ ರು. ಮಾನಹಾನಿ ದಾವೆಯೊಂದನ್ನು ಹೂಡಲಾಗಿದೆ. ಈ ಹಿನ್ನೆಲೆಯಲ್ಲಿ ಖರ್ಗೆ ಅವರಿಗೆ ಸಂಗ್ರೂರ್‌ ಜಿಲ್ಲಾ ನ್ಯಾಯಾಲಯ ನೋಟಿಸ್‌ ಜಾರಿ ಮಾಡಿದ್ದು, ಜುಲೈ 10ರೊಳಗೆ ಉತ್ತರಿಸುವಂತೆ ನೋಟಿಸ್‌ ನೀಡಿದೆ.

ಸಂಗ್ರೂರ್‌ (ಪಂಜಾಬ್‌) (ಮೇ.16) : ಕರ್ನಾಟಕ ವಿಧಾನಸಭೆ ಚುನಾವಣೆಯ ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ನಿಷೇಧಿತ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾಗೆ ಹೋಲಿಸಲಾಗಿದೆ ಎಂದು ಆರೋಪಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ 100 ಕೋಟಿ ರು. ಮಾನಹಾನಿ ದಾವೆಯೊಂದನ್ನು ಹೂಡಲಾಗಿದೆ. ಈ ಹಿನ್ನೆಲೆಯಲ್ಲಿ ಖರ್ಗೆ ಅವರಿಗೆ ಸಂಗ್ರೂರ್‌ ಜಿಲ್ಲಾ ನ್ಯಾಯಾಲಯ(Sangrur District Court) ನೋಟಿಸ್‌ ಜಾರಿ ಮಾಡಿದ್ದು, ಜುಲೈ 10ರೊಳಗೆ ಉತ್ತರಿಸುವಂತೆ ನೋಟಿಸ್‌ ನೀಡಿದೆ.

ಹಿಂದೂ ಸುರಕ್ಷಾ ಪರಿಷದ್‌(Hindu Suraksha Parishad) ಎಂಬ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಹಿತೇಶ್‌ ಭಾರದ್ವಾಜ್‌(Hitesh bharadhwaj) ಎಂಬುವವರು ಈ ದಾವೆ ಹೂಡಿದ್ದಾರೆ. ಮೇ 12ರಂದೇ ಖರ್ಗೆಗೆ ಈ ಬಗ್ಗೆ ಕೋರ್ಟು, ನೋಟಿಸ್‌ ಜಾರಿ ಮಾಡಿದೆ.

ಬಜರಂಗದಳಕ್ಕೂ ಆಂಜನೇಯನಿಗೂ ಸಂಬಂಧವಿಲ್ಲ: ಎಚ್ ವಿಶ್ವನಾಥ್‌

‘ಬಜರಂಗದಳವು(Bajrangadala) ಹಿಂದೂ ಸುರಕ್ಷಾ ಪರಿಷದ್‌ನ ಒಂದು ಘಟಕವಾಗಿದೆ. ಈ ಸಂಘಟನೆಯ ವಿರುದ್ಧ ಕರ್ನಾಟಕ ಕಾಂಗ್ರೆಸ್‌ ಪ್ರಣಾಳಿಕೆಯ 10ನೇ ಪ್ಯಾರಾದಲ್ಲಿ ಮಾನಹಾನಿಕರ ಹೇಳಿಕೆಗಳನ್ನು ನೀಡಲಾಗಿದೆ. ಬಜರಂಗದಳವನ್ನು ನಿಷೇಧಿಸುವ ಘೋಷಣೆ ಮಾಡಿದ್ದಲ್ಲದೆ, ನಿಷೇಧಿತ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (ಪಿಎಫ್‌ಐ) ಸಂಘಟನೆಯ ಜತೆ ಹೋಲಿಸಲಾಗಿದೆ. ಇದರಿಂದ ಸಂಘಟನೆಯ ಗೌರವಕ್ಕೆ ಹಾಗೂ ಕೋಟ್ಯಂತರ ಜನರಿಂದ ಪೂಜಿಸಲ್ಪಡುವ ಹನುಮಂತನ ಭಕ್ತರ ಭಾವನೆಗೆ ಧಕ್ಕೆಯಾಗಿದೆ. ಇದಕ್ಕೆ ಪರಿಹಾರವಾಗಿ 100 ಕೋಟಿ ರು. ನೀಡಬೇಕು’ ಎಂದು ಅರ್ಜಿಯಲ್ಲಿ ಆಗ್ರಹಿಸಲಾಗಿದೆ.

‘ಬಜರಂಗದಳವು ಒಂದು ಸಮಾಜಸೇವಿ ಸಂಘಟನೆಯಾಗಿದ್ದು, ಸಮಾಜಕ್ಕೆ ಸಾಕಷ್ಟುಕೊಡುಗೆ ನೀಡಿದೆ’ ಎಂದು ಅರ್ಜಿದಾರರು ವಾದಿಸಿದ್ದಾರೆ.

ಬಜರಂಗದಳ ಬ್ಯಾನ್‌ ಮಾಡ್ತೇವೆ ಎಂದು ಕುಣಿತ್ತಿದ್ದ ಕಾಂಗ್ರೆಸ್ ವರಸೆ ಬದಲಿಸಿದೆ: ಓವೈಸಿ ಗರಂ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮೋದಿ ಅವರೇ ನನ್ನ ಗಂಡ ವಿಕ್ರಂನನ್ನು ಪಾಕಿಸ್ತಾನಕ್ಕೆ ಕಳುಹಿಸಿ: ಪಾಕ್ ಮಹಿಳೆಯ ಮನವಿ
ಕಾರವಾರ ಜೈಲಲ್ಲಿ ಡ್ರಗ್ಸ್‌ಗಾಗಿ ಜೈಲ‌ರ್ ಮೇಲೆ ಕೈದಿಗಳಿಂದ ಹಲ್ಲೆ: ಬೆಂಗಳೂರು ಜೈಲೊಳಗೆ ಸಿಗರೇಟ್ ಸಾಗಿಸಲೆತ್ನಿಸಿ ಸಿಕ್ಕಿಬಿದ್ದ ವಾರ್ಡನ್