ಟೆಂಡರ್‌ಗಳಿಂದ ಚೀನಾ ಕಂಪನಿ ಔಟ್, ಸೆಲೆಬ್ರಿಟಿಗಳಿಗೆ RSS ಅಂಗಸಂಸ್ಥೆ ಹೇಳಿದ್ದಿಷ್ಟು..!

Suvarna News   | Asianet News
Published : Jun 17, 2020, 12:40 PM ISTUpdated : Jun 17, 2020, 03:37 PM IST
ಟೆಂಡರ್‌ಗಳಿಂದ ಚೀನಾ ಕಂಪನಿ ಔಟ್, ಸೆಲೆಬ್ರಿಟಿಗಳಿಗೆ RSS ಅಂಗಸಂಸ್ಥೆ ಹೇಳಿದ್ದಿಷ್ಟು..!

ಸಾರಾಂಶ

ಕೇಂದ್ರ ಸರ್ಕಾರ ಆಯೋಜಿಸುವ ಟೆಂಡರ್‌ಗಳಲ್ಲಿ ಚೀನಾ ಕಂಪನಿಗಳನ್ನು ಬಹಿಷ್ಕರಿಸಬೇಕು. ಈ ಮೂಲಕ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಬೇಕು ಎಂದು ಆರ್‌ಎಸ್‌ಎಸ್‌ ಅಂಗಸಂಸ್ಥೆ ಸ್ವದೇಶಿ ಜಾಗರಣ ಮಂಚ್ ಕೇಂದ್ರಕ್ಕೆ ಮನವಿ ಮಾಡಿದೆ.

ನವದೆಹಲಿ(ಜೂ.17): ಕೇಂದ್ರ ಸರ್ಕಾರ ಆಯೋಜಿಸುವ ಟೆಂಡರ್‌ಗಳಲ್ಲಿ ಚೀನಾ ಕಂಪನಿಗಳನ್ನು ಬಹಿಷ್ಕರಿಸಬೇಕು. ಈ ಮೂಲಕ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಬೇಕು ಎಂದು ಆರ್‌ಎಸ್‌ಎಸ್‌ ಅಂಗಸಂಸ್ಥೆ ಸ್ವದೇಶಿ ಜಾಗರಣ ಮಂಚ್ ಕೇಂದ್ರಕ್ಕೆ ಮನವಿ ಮಾಡಿದೆ.

ಗಲ್ವಾನ್ ಕಣಿವೆಯಲ್ಲಿ ಭಾರತದ ಸೈನಿಕರ ಮೇಲಿನ ಚೀನಾದ ದಾಳಿಯ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ಭಾರತೀಯರಲ್ಲಿ ಚೀನಾ ಉತ್ಪನ್ನಗಳನ್ನು ಬಹಿಷ್ಕರಿಸಲು ತಿಳಿಸುವ ಮೂಲಕ ಹುತಾತ್ಮ ಯೋಧರಿಗೆ ಗೌರ ಸಲ್ಲಿಸಬೇಕು ಎಂದಿದೆ.

ಗಡಿ ಸಂಘರ್ಷ: ಭಾರತ ಸೇನೆ ಕೊಟ್ಟ ಎದುರೇಟಿಗೆ 43 ಚೀನಾ ಸೈನಿಕರು ಮಟಾಶ್

ಸಂಸ್ಥೆಯ ಕೋಕನ್ವೀನರ್ ಅಶ್ವಾನಿ ಮಹಾಜನ್ ಮಾತನಾಡಿ, ಜನರು ಚೀನಾ ನಿರ್ಮಿತ ವಸ್ತುಗಳನ್ನು ತೊರೆಯಬೇಕು ಎಂದಿದ್ದಾರೆ. ಇದೇ ಸಂದರ್ಭದಲ್ಲಿ ಚೀನಾ ಪತ್ಪನ್ನಗಳನ್ನು ಪ್ರಮೋಟ್ ಮಾಡದಂತೆ ಕ್ರಿಕಟರ್ಸ್, ನಟ ನಟಿಯರು ಹಾಗೂ ಇತರ ಸೆಲೆಬ್ರಿಟಿಗಳಿಗೆ ಮನವಿ ಮಾಡಿದ್ದಾರೆ.

ಕೇಂದ್ರ ಸರ್ಕಾರ ಆಯೋಜಿಸುವ ಟೆಂಟರ್‌ಗಳಿಗೆ ಚೈನೀಸ್ ಕಂಪನಿಗಳನ್ನು ಭಾಗವಹಿಸಲು ಬಿಡಬಾರದು, ಯಾವುದೇ ಚೀನಾ ವಸ್ತುಗಳನ್ನು ಸಂಗ್ರಹಿಸಲು ಬಿಡಬಾರದು ಎಂದಿದ್ದಾರೆ. ಕರ್ನಲ್ ಸೇರಿದಂತೆ 20 ಜನ ಯೋಧರು ಸೋಮವಾರ ಚೀನಾ ಸೈನಿಕರ ಜೊತೆ ನಡೆದ ಕಲಹದಲ್ಲಿ ಹುತಾತ್ಮರಾಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದೇಶದ ಮೊದಲ ಹೈಡ್ರೋಜನ್‌ ಚಾಲಿತ ವಾಟರ್‌ ಟ್ಯಾಕ್ಸಿ ವಾರಾಣಸಿಯಲ್ಲಿ ಶುರು
ಆರೋಪ ಸಾಬೀತು : ಪಾಕ್‌ ಐಎಸ್‌ಐ ಮಾಜಿ ಮುಖ್ಯಸ್ಥ ಹಮೀದ್‌ಗೆ 14 ವರ್ಷ ಜೈಲು