
ನವದೆಹಲಿ(ಜೂ.18): ಚೀನಾ ಜೊತೆಗೆ ಗಡಿಯಲ್ಲಿ ನಡೆದ ಸಂಘರ್ಷದಲ್ಲಿ ಭಾರತೀಯ ಸೇನೆಯ ಇಪ್ಪತ್ತು ಯೋಧರು ಹುತಾತ್ಮರಾದ ಬೆನ್ನಲ್ಲೇ ದೇಶಾದ್ಯಂತ ಚೀನಾ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಒಂದೆಡೆ ಚೀನಾ ವಸ್ತುಗಳನ್ನು ಬ್ಯಾನ್ ಮಾಡಿ ಎಂಬ ಕೂಗು ಎದ್ದಿದ್ದರೆ, ಮತ್ತೊಂದೆಡೆ ಚೀನಾ ಅಧ್ಯಕ್ಷರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ತಮ್ಮ ಸಿಟ್ಟು ಹೊರ ಹಾಕಲಾರಂಭಿಸಿದ್ದಾರೆ. ಹೀಗಿರುವಾಗ ಕೇಂದ್ರ ಸಚಿವ ರಾಮದಾಸ್ ಅಠಾವಳೆ ಭಾರತದಲ್ಲಿ ಚೈನೀಸ್ ಫುಡ್ ನೀಡುವ ಹೊಟೇಲ್ಗಳನ್ನು ಬಂದ್ ಮಾಡಬೇಕೆಂಬ ಧ್ವನಿ ಎತ್ತಿದ್ದಾರೆ.
ಹೌದು ಸುದ್ದಿಸಂಸ್ಥೆ ಎಎನ್ಐ ಈ ಬಗ್ಗೆ ಈ ಸಂಬಂಧ ಟ್ವೀಟ್ ಮಾಡಿದ್ದು, ಅಠಾವಳೆ ಚೈನೀಸ್ ಫುಡ್ ನಿರ್ಬಂಧಿಸುವಂತೆ ಆಗ್ರಹಿಸಿದ್ದಾರೆ.
ಇನ್ನು ಈ ಹಿಂದೆ ಟ್ವೀಟ್ ಮಾಡಿದ್ದ ಕೇಂದ್ರ ಸಚಿವ ಅಠಾವಳೆ 'ಚೀನಾ ಭಾರತಕ್ಕೆ ದ್ರೋಹ ಎಸಗಿದೆ. ಹೀಗಾಗಿ ಚೀನಾ ನಿರ್ಮಿತ ಎಲ್ಲಾ ಉತ್ಪನ್ನಗಳನ್ನು ಭಾರತದಲ್ಲಿ ನಿರ್ಬಂಧಿಸಬೇಕು. ಚೈನೀಸ್ ಫುಡ್ ಮಾರಾಟ ಮಾಡುವ ಭಾರತದಲ್ಲಿರುವ ಎಲ್ಲಾ ಹೋಟೆಲ್ ಹಾಗೂ ರೆಸ್ಟೋರೆಂಟ್ಗಳನ್ನು ಬಂದ್ ಮಾಡಬೇಕು' ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ