ಕೈ ಬನಿಯನ್‌ ಪ್ರೊಟೆಸ್ಟ್‌ನಿಂದ ಇಂಡಿಯಾ ಕೂಟದಲ್ಲಿ ಒಡಕು!

Kannadaprabha News   | Kannada Prabha
Published : Feb 24, 2026, 04:47 AM IST
MARGARET ALVA

ಸಾರಾಂಶ

ಕಳೆದ ವಾರ ದೆಹಲಿಯಲ್ಲಿ ನಡೆದ ಎಐ ಇಂಪ್ಯಾಕ್ಟ್‌ ಶೃಂಗಸಭೆಯಲ್ಲಿ ಶರ್ಟ್‌ ಬಿಚ್ಚಿ, ಬನಿಯನ್‌ ಮೂಲಕ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರ ನಡೆಗೆ ಇಂಡಿಯಾ ಕೂಟದಲ್ಲೇ ಅಪಸ್ವರ ಎದ್ದಿದ್ದು, ಮೈತ್ರಿಕೂಟದಲ್ಲಿ ಬಿರುಕು ಮೂಡುವ ಆತಂಕ ಸೃಷ್ಟಿಯಾಗಿದೆ.

ನವದೆಹಲಿ: ಕಳೆದ ವಾರ ದೆಹಲಿಯಲ್ಲಿ ನಡೆದ ಎಐ ಇಂಪ್ಯಾಕ್ಟ್‌ ಶೃಂಗಸಭೆಯಲ್ಲಿ ಶರ್ಟ್‌ ಬಿಚ್ಚಿ, ಬನಿಯನ್‌ ಮೂಲಕ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರ ನಡೆಗೆ ಇಂಡಿಯಾ ಕೂಟದಲ್ಲೇ ಅಪಸ್ವರ ಎದ್ದಿದ್ದು, ಮೈತ್ರಿಕೂಟದಲ್ಲಿ ಬಿರುಕು ಮೂಡುವ ಆತಂಕ ಸೃಷ್ಟಿಯಾಗಿದೆ.

ಮಾರ್ಗರೇಟ್ ಆಳ್ವಾ ಕಾರ್ಯಕರ್ತರ ನಡೆಯನ್ನು ಖಂಡಿಸಿದರು

ಖುದ್ದು ಕಾಂಗ್ರೆಸ್‌ ಹಿರಿಯ ನಾಯಕಿ ಹಾಗೂ ಕೇಂದ್ರದ ಮಾಜಿ ಸಚಿವೆ ಮಾರ್ಗರೇಟ್ ಆಳ್ವಾ ಕಾರ್ಯಕರ್ತರ ನಡೆಯನ್ನು ಖಂಡಿಸಿದ್ದು, ‘ಅಂತಾರಾಷ್ಟ್ರೀಯ ಕಾರ್ಯಕ್ರಮಗಳ ವಿರುದ್ಧ ಪ್ರತಿಭಟನೆಗಳ ವಿಷಯಕ್ಕೆ ಬಂದಾಗ ಶಿಸ್ತು ಮತ್ತು ಜವಾಬ್ದಾರಿ ಪ್ರಜ್ಞೆಯನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯ’ ಎಂದಿದ್ದಾರೆ. ಶಿವಸೇನೆಯ (ಯುಬಿಟಿ) ಅರವಿಂದ್ ಸಾವಂತ್‌ ಮತ್ತು ಆದಿತ್ಯ ಠಾಕ್ರೆ ಯುವ ಕಾಂಗ್ರೆಸ್ಸಿಗರ ವರ್ತನೆಯನ್ನು ಖಂಡಿಸಿ ಹೇಳಿಕೆ ನೀಡಿದ್ದರೆ, ಪಶ್ಚಿಮ ಬಂಗಾಳದ ಐಟಿ ಸಚಿವ ಬಾಬುಲ್‌ ಸುಪ್ರಿಯೊ ಕೂಡ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಇನ್ನು, ಸಮಾಜವಾದಿ ಪಕ್ಷ ಮತ್ತು ಆರ್‌ಜೆಡಿ ಈ ಮೊದಲೇ ಕಾಂಗ್ರೆಸ್ ನಡೆ ವಿರೋಧಿಸಿವೆ.

ಮತ್ತೆ ಮೂವರು ವಶಕ್ಕೆ:

ಬನಿಯನ್‌ ಪ್ರತಿಭಟನೆಗೆ ಸಂಬಂಧಿಸಿ ಇನ್ನೂ 3 ಯುವ ಕಾಂಗ್ರೆಸ್ಸಿಗರನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ 7ಕ್ಕೇರಿದೆ. ಯುವ ಕಾಂಗ್ರೆಸ್ ಅಧ್ಯಕ್ಷ ಉದಯ ಭಾನು ಚಿಬ್‌ ಅವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

India Latest News Live: ಮೋದಿಜಿ ನಿಮಗೆ ನಾಚಿಕೆ ಆಗ್ಬೇಕು: ಎಪ್‌ಸ್ಟೀನ್‌ ಫೈಲ್‌, ಟ್ರೇಡ್‌ ಡೀಲ್‌ ಪ್ರಶ್ನಿಸಿ ರಾಗಾ ತಿರುಗೇಟು
ರಾಷ್ಟ್ರಪತಿ ಭವನದ ಲೂಟನ್ಸ್‌ ಮೂರ್ತಿಯ ಜಾಗಕ್ಕೆ ರಾಜಾಜಿ