Wayanad landslide: ಸಂತ್ರಸ್ತರ ಪರಿಹಾರ ಹಣವನ್ನು EMI ರೀತಿಯಲ್ಲಿ ಸಾಲಕ್ಕೆ ಜಮೆ ಮಾಡಿದ ಬ್ಯಾಂಕ್‌!

Published : Aug 20, 2024, 08:34 AM IST
Wayanad  landslide: ಸಂತ್ರಸ್ತರ ಪರಿಹಾರ ಹಣವನ್ನು EMI ರೀತಿಯಲ್ಲಿ ಸಾಲಕ್ಕೆ ಜಮೆ ಮಾಡಿದ ಬ್ಯಾಂಕ್‌!

ಸಾರಾಂಶ

ಕಳೆದ ತಿಂಗಳ ಕೊನೆಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ನೂರಾರು ಜನರು ಸಾವಿ ಕಂಡಿದ್ದು, ಹಳ್ಳಿ ಹಳ್ಳಿಯೇ ನಿರ್ನಾಮವಾಗಿದೆ. ಅಪಾರ ಪ್ರಮಾಣದ ಕೃಷಿ ಭೂಮಿಯೂ ಕೊಚ್ಚಿ ಹೋಗಿದೆ.

ವಯನಾಡ್‌ (ಆ.20): ಭೀಕರ ಭೂಕುಸಿತದಿಂದಾಗಿ ತಮ್ಮವರೆಲ್ಲರನ್ನೂ ಕಳೆದುಕೊಂಡು ಕಂಗಾಲಾಗಿದ್ದ ವಯನಾಡ್‌ ಸಂತ್ರಸ್ತರಿಗೆ ಕೇರಳ ಸರ್ಕಾರ ಬಿಡುಗಡೆ ಮಾಡಿದ ಪರಿಹಾರ ಮೊತ್ತವನ್ನು ಗ್ರಾಮೀಣ ಬ್ಯಾಂಕ್‌ ಸಾಲದ ಮೊತ್ತಕ್ಕೆ ಕಡಿತ ಮಾಡಿಕೊಂಡಿರುವ ಘಟನೆ ನಡೆದಿದೆ. ಈ ಬೆಳವಣಿಗೆಯು ಸಂತ್ರಸ್ತರಿಗೆ ಭಾರಿ ಆಘಾತವನ್ನು ಉಂಟು ಮಾಡಿದೆ. ಕೇರಳ ಗ್ರಾಮೀಣ ಬ್ಯಾಂಕ್‌ನ ನಡವಳಿಕೆ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಕಲ್ಪೆಟ್ಟಾದ ಗ್ರಾಮೀಣ ಬ್ಯಾಂಕ್‌ ಮುಂದೆ ವಿವಿಧ ರಾಜಕೀಯ ಪಕ್ಷಗಳು ಸೋಮವಾರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿವೆ. ಇದೊಂದು ಕ್ರೂರ ನಡವಳಿಕೆ ಎಂದು ಕೇರಳ ಸಹಕಾರ ಸಚಿವ ವಿ.ಎನ್‌.ವಾಸವನ್‌ ಟೀಕಿಸಿದ್ದಾರೆ. ಈ ನಡುವೆ, ಪರಿಹಾರ ಮೊತ್ತವನ್ನು ಬ್ಯಾಂಕ್‌ ಖಾತೆಗಳಿಗೆ ಮರಳಿಸುವಂತೆ ವಯನಾಡ್‌ ಜಿಲ್ಲಾಧಿಕಾರಿ ಮೇಘಶ್ರೀ ಅವರು ಗ್ರಾಮೀಣ ಬ್ಯಾಂಕ್‌ಗೆ ಸೂಚನೆ ಕೊಟ್ಟಿದ್ದಾರೆ. ಮತ್ತೊಂದೆಡೆ, ದುರಂತ ಸಂಭವಿಸುವ ಮೊದಲಿನಿಂದಲೂ ಪ್ರತಿ ತಿಂಗಳು ಸಾಲಗಾರರ ಖಾತೆಯಿಂದ ಸಾಲದ ಕಂತು ಕಡಿತವಾಗುತ್ತಿತ್ತು. ಅದೇ ರೀತಿ ಈ ಬಾರಿಯೂ ಕಡಿತವಾಗಿದೆ ಎಂದು ಕೇರಳ ಗ್ರಾಮೀಣ ಬ್ಯಾಂಕ್‌ನ ಮುಖ್ಯಸ್ಥರು ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಏತನ್ಮಧ್ಯೆ, ಕೇರಳ ಗ್ರಾಮೀಣ ಬ್ಯಾಂಕ್‌ನ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಪಿಣರಾಯಿ ವಿಜನ್‌ ಅವರು, ಸಾಲ ಮರುಪಾವತಿ ಅವಧಿ ಮುಂದೂಡುವುದು ಅಥವಾ ಬಡ್ಡಿ ವಿನಾಯಿತಿ ನೀಡುವುದು ವಯನಾಡ್‌ ಭೂಕುಸಿತ ಸಂತ್ರಸ್ತರಿಗೆ ಪರಿಹಾರವೇ ಅಲ್ಲ. ಯಾರ್‍ಯಾರು ಸಾಲ ಪಡೆದಿದ್ದಾರೋ ಅವರ ಸಾಲವನ್ನೆಲ್ಲಾ ಮನ್ನಾ ಮಾಡಬೇಕು. ಏಕೆಂದರೆ, ಸಾಲಗಾರರ ಭೂಮಿ ಬಳಸಲು ಸಾಧ್ಯವೇ ಇಲ್ಲದಂತಾಗಿದೆ. ಸಾಲ ಮನ್ನಾ ಮಾಡಿದರೆ ಬ್ಯಾಂಕುಗಳಿಗೆ ಹೊರೆ ಏನೂ ಆಗುವುದಿಲ್ಲ ಎಂದು ರಾಜ್ಯ ಮಟ್ಟದ ಬ್ಯಾಂಕರುಗಳ ಸಭೆಯಲ್ಲಿ ತಾಕೀತು ಮಾಡಿದ್ದಾರೆ.

ವಯನಾಡ್‌ನ ಜನರ ರಕ್ಷಣೆಗೆ ನಿಂತ ಇವರನ್ನು ಬಿಪಿನ್‌ ರಾವತ್‌ ಕರೆದಿದ್ದು, 'ದಿ ಮೋಸ್ಟ್ ಫಿಯರ್‌ಲೆಸ್ ಮ್ಯಾನ್‌ ರಿಷಿ ರಾಜಲಕ್ಷ್ಮೀ!'

ಆಗಿದ್ದೇನು?: ವಯನಾಡ್‌ ಭೂಕುಸಿತದಿಂದಾಗಿ ಅಲ್ಲಿನ ಸಂತ್ರಸ್ತರ ಆಸ್ತಿಪಾಸ್ತಿ ಎಲ್ಲವೂ ನಷ್ಟವಾಗಿತ್ತು. ಜೀವನ ಮಾಡುವುದೇ ಕಷ್ಟವಾಗಿತ್ತು. ಈ ಹಿನ್ನೆಲೆಯಲ್ಲಿ ಕೇರಳ ಸರ್ಕಾರ ಸಂತ್ರಸ್ತರಿಗೆ 10 ಸಾವಿರ ರು. ಪರಿಹಾರವನ್ನು ಖಾತೆಗೆ ಜಮೆ ಮಾಡಿತ್ತು. ಆದರೆ ಆ ಹಣದಲ್ಲಿ ಕೇರಳ ಗ್ರಾಮೀಣ ಬ್ಯಾಂಕ್‌ ಇಎಂಐ ಕಡಿತ ಮಾಡಿಕೊಂಡಿದೆ. ಈ ಬ್ಯಾಂಕ್‌ನಲ್ಲಿ ಕೇಂದ್ರ ಸರ್ಕಾರ ಶೇ.50 ಪಾಲು ಹೊಂದಿದೆ. ಸರ್ಕಾರಿ ಸ್ವಾಮ್ಯದ ಕೆನರಾ ಬ್ಯಾಂಕ್‌ ಮೂಲಕ ಇನ್ನೂ ಶೇ.35ರಷ್ಟು ಪಾಲನ್ನು ಗಳಿಸಿದೆ. ಕೇರಳ ಸರ್ಕಾರ ಶೇ.15ರಷ್ಟು ಷೇರು ಹೊಂದಿದೆ.

 

Wayanad Landslide: ಆರೆಸ್ಸೆಸ್‌ನ ರಕ್ಷಣಾ ಕಾರ್ಯಕ್ಕೆ ಕ್ರಿಶ್ಚಿಯನ್‌ ಸಮುದಾಯದಿಂದ ಮೆಚ್ಚುಗೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
ತಮಿಳು ಚಿತ್ರದಲ್ಲಿ ಕನ್ನಡ ಹಾಡು ಬಳಸಿದ್ದಕ್ಕೆ ದಂಡ, ಒಟಿಟಿ ರಿಲೀಸ್‌ಗೂ ಮುನ್ನ 30 ಲಕ್ಷ ಠೇವಣಿ ಇಡಿ ಎಂದ ಕೋರ್ಟ್‌!