ಬ್ಯಾಂಕುಗಳಿಗಿನ್ನು ವಾರಕ್ಕೆ 2 ದಿನ ರಜೆ : ಉದ್ಯೋಗಿಗಳಿಗೆ ಐದೇ ದಿನ ಕೆಲಸ?

Published : Jul 25, 2023, 12:33 PM IST
ಬ್ಯಾಂಕುಗಳಿಗಿನ್ನು ವಾರಕ್ಕೆ 2 ದಿನ ರಜೆ : ಉದ್ಯೋಗಿಗಳಿಗೆ ಐದೇ ದಿನ ಕೆಲಸ?

ಸಾರಾಂಶ

 ಭಾರತದಲ್ಲಿರುವ ಬ್ಯಾಂಕುಗಳು ಇನ್ನು ಮುಂದೆ ವಾರಕ್ಕೆ ಐದು ದಿನ ಮಾತ್ರವೇ ಕಾರ್ಯನಿರ್ವಹಿಸುವ ಸಾಧ್ಯತೆ ದಟ್ಟವಾಗಿದೆ. 

ನವದೆಹಲಿ: ಭಾರತದಲ್ಲಿರುವ ಬ್ಯಾಂಕುಗಳು ಇನ್ನು ಮುಂದೆ ವಾರಕ್ಕೆ ಐದು ದಿನ ಮಾತ್ರವೇ ಕಾರ್ಯನಿರ್ವಹಿಸುವ ಸಾಧ್ಯತೆ ದಟ್ಟವಾಗಿದೆ. ಬ್ಯಾಂಕ್‌ ನೌಕರರಿಗೆ ವಾರಕ್ಕೆ ಎರಡು ದಿನ ರಜೆ ನೀಡುವ ಕುರಿತು ಜು.28ರ ಶುಕ್ರವಾರ ಭಾರತೀಯ ಬ್ಯಾಂಕಿಂಗ್‌ ಸಂಘ (ಐಬಿಎ) ಹಾಗೂ ಬ್ಯಾಂಕ್‌ ನೌಕರರ ಒಕ್ಕೂಟಗಳ ಸಂಯುಕ್ತ ವೇದಿಕೆ (ಯುಎಫ್‌ಬಿಯು) ಮಧ್ಯೆ ಮಹತ್ವದ ಸಭೆ ನಡೆಯಲಿದ್ದು, ಅಂದು ಅಂತಿಮ ನಿರ್ಧಾರ ಹೊರಬೀಳುವ ಸಂಭವವಿದೆ.

ಹಾಲಿ ಭಾನುವಾರ ಎಲ್ಲ ಬ್ಯಾಂಕುಗಳಿಗೂ ರಜೆ ಇದೆ. ಇದರ ಜತೆಗೆ 2ನೇ ಹಾಗೂ 4ನೇ ಶನಿವಾರದಂದು ಕೂಡ ರಜೆ ಸಿಗುತ್ತಿದೆ. ತಿಂಗಳಲ್ಲಿ 2 ಶನಿವಾರ ಬ್ಯಾಂಕಿಂಗ್‌ ಸೇವೆ ಲಭ್ಯವಿದೆ. ಇನ್ನು ಮುಂದೆ ಅದು ಕೂಡ ಇರುವುದಿಲ್ಲ. ಅದರ ಬದಲಿಗೆ ವಾರದ ಐದು ದಿನ ಹೆಚ್ಚುವರಿಯಾಗಿ 40 ನಿಮಿಷ ಕೆಲಸ ಮಾಡಬೇಕಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಬ್ಯಾಂಕುಗಳಲ್ಲಿ ಐದು ದಿನ ಕಾರ್ಯನಿರ್ವಹಣಾ ಅವಧಿ ಪರಿಚಯಿಸುವ ವಿಚಾರ ಪರಿಶೀಲನೆಯಲ್ಲಿದೆ ಎಂದು ಬ್ಯಾಂಕಿಂಗ್‌ ಸಂಘ ಮಾಹಿತಿ ನೀಡಿದೆ. ಈ ಪ್ರಕ್ರಿಯೆಯನ್ನು ವಿಳಂಬ ಮಾಡದೆ ಜಾರಿಗೆ ತರಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ ಎಂದು ಬ್ಯಾಂಕ್‌ ನೌಕರರ ಸಂಯುಕ್ತ ವೇದಿಕೆ ತಿಳಿಸಿದೆ.

ಬೆಂಗಳೂರಿನ ನ್ಯಾಷನಲ್ ಕೋ-ಆಪರೇಟಿವ್ ಬ್ಯಾಂಕ್ ದಿವಾಳಿ, ಸಂಕಷ್ಟಕ್ಕೆ ಸಿಲುಕಿದ ಗ್ರಾಹಕರು!

5 ದಿನ ಕರ್ತವ್ಯಾವಧಿ ಮಾತ್ರವಲ್ಲದೆ, ವೇತನ ಹೆಚ್ಚಳ ಹಾಗೂ ನಿವೃತ್ತ ನೌಕರರಿಗೆ ಸಮೂಹ ಆರೋಗ್ಯ ವಿಮಾ ಪಾಲಿಸಿಯ ಅಗತ್ಯ ಕುರಿತಂತೆಯೂ ಜು.28ರ ಸಭೆಯಲ್ಲಿ ಚರ್ಚೆಯಾಗಲಿದೆ. ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ)ದಲ್ಲಿ ಕೇಂದ್ರ ಸರ್ಕಾರ ವಾರಕ್ಕೆ ಐದು ದಿನದ ಕಾರ್ಯನಿರ್ವಹಣಾ ಅವಧಿಯನ್ನು ಜಾರಿಗೊಳಿಸಿದೆ. ಆ ಬಳಿಕ ಬ್ಯಾಂಕಿಂಗ್‌ ವಲಯದಲ್ಲೂ ಅದೇ ಪದ್ಧತಿ ಪರಿಚಯಿಸಬೇಕು ಎಂಬ ಕೂಗು ಆರಂಭವಾಗಿತ್ತು. ಇದಕ್ಕೆ ತನ್ನ ಯಾವುದೇ ಆಕ್ಷೇಪ ಇಲ್ಲ ಎಂದು ಕೇಂದ್ರ ಹಣಕಾಸು ಸಚಿವಾಲಯ ಈ ಹಿಂದೆಯೇ ಹೇಳಿತ್ತು.

ಕಳೆದ ಹಣಕಾಸು ವರ್ಷದಲ್ಲಿ ಬ್ಯಾಂಕ್‌ಗಳಿಂದ 2.09 ಲಕ್ಷ ಕೋಟಿ ಬ್ಯಾಡ್‌ ಲೋನ್‌ ರೈಟ್‌ ಆಫ್‌!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!