ತಡವಾಗಿ ಬಂದ ವರ, ಬೇರೊಬ್ಬನೊಂದಿಗೆ ಮದುವೆಯಾದ ಯುವತಿ!

Web Desk   | Asianet News
Published : Dec 11, 2019, 01:30 PM ISTUpdated : Dec 11, 2019, 01:33 PM IST
ತಡವಾಗಿ ಬಂದ ವರ, ಬೇರೊಬ್ಬನೊಂದಿಗೆ ಮದುವೆಯಾದ ಯುವತಿ!

ಸಾರಾಂಶ

ಮದುವೆ ಮಂಟಪಕ್ಕೆ ತಡವಾಗಿ ಬಂದ ವರ| ವರದಕ್ಷಿಣೆಗೆ ಬೇಡಿಕೆ| ಬೇರೊಬ್ಬನೊಂದಿಗೆ ಮದುವೆಯಾಗಿ, ವರನಿಗೆ ಬುದ್ಧಿ ಕಲಿಸಿದ ವಧು

ಲಕ್ನೋ[ಡಿ.11]: ಉತ್ತರ ಪ್ರದೇಶದಲ್ಲಿ ವರನೊಬ್ಬ ಮದುವೆ ಮಂಟಪಕ್ಕೆ ಬರುವುದು ತಡವಾಯಿತೆಂದು, ಮಧುಮಗಳು ಮದುವೆಯಾಗಲು ನಿರಾಕರಿಸಿದ್ದಾಳೆ. ಈ ಘಟನೆ ವಾರದ ಹಿಂದೆ ನಡೆದಿದ್ದು, ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ವರನನ್ನು ರಿಜೆಕ್ಟ್ ಮಾಡಿದ ಯುವತಿ, ಮದುವೆ ಕಾರ್ಯಕ್ರಮ ನಡೆಯಬೇಕಿದ್ದ ಮರುದಿನ ಸ್ಥಳೀಯ ವ್ಯಕ್ತಿಯೊಂದಿಗೆ ಮದುವೆಯಾಗಿದ್ದಾಳೆ. ಮಾಧ್ಯಮಗಳ ವರದಿಯನ್ವಯ ಈ ಯುವತಿ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮದುವೆಯಾಗಿದ್ದಳು. ಬಳಿಕ ಖಾಸಗಿ ಆರತಕ್ಷತೆ ಕಾರ್ಯಕ್ರಮವನ್ನು ಏರ್ಪಡಿಸಿದ್ದರು. ಆದರೆ ಈ ಕಾರ್ಯಕ್ರಮಕ್ಕೆ ವರ ಬರಲು ತಡ ಮಾಡಿದ್ದರಿಂದ ಆಕೆ ಬೇರೊಬ್ಬ ಯುವಕನೊಂದಿಗೆ ಮದುವೆಯಾಗಿದ್ದಾಳೆ.

ಒಂದೇ ಮಂಟಪದಲ್ಲಿ ಅಕ್ಕ, ತಂಗಿಯನ್ನು ಮದುವೆಯಾದ: ಕೊಟ್ಟ ಕಾರಣ ಮಾತ್ರ ವಿಚಿತ್ರ!

ಧಾಮ್ಪುರದಿಂದ ವರ ಮಧ್ಯಾಹ್ನ 2 ಗಂಟೆಗೆ ನಡೆಯಲಿದ್ದ ಆರತಕ್ಷತೆ ಕಾರ್ಯಕ್ರಮಕ್ಕೆ ದಿಬ್ಬಣದೊಂದಿಗೆ ಹುಡುಗಿ ಮನೆಗೆ ಹೊರಟಿದ್ದ. ಆದರೆ ಮಧ್ಯಾಹ್ನ ತಲುಪಬೇಕಿದ್ದ ಆತ, ಮಧ್ಯರಾತ್ರಿ ತಲುಪಿದ್ದಾನೆ. ಅಲ್ಲದೇ ಎರಡೂ ಕುಟುಂಬದ ನಡುವೆ ವರದಕ್ಷಿಣೆ ವಿಚಾರವಾಗಿ ಜಗಳವೂ ಆಗಿದೆ. ಇದರಿಂದ ಮಧುಮಗಳು ಹಾಗೂ ಆಕೆಯ ಕುಟುಂಬ ಸದಸ್ಯರು ಚಿಂತೆಗೀಡಾಗಿದ್ದಾರೆ.

ವರದಕ್ಷಿಣೆ ವಿಚಾರವೆತ್ತಿದ್ದರಿಂದ ಕುಪಿತರಾದ ವಧುವಿನ ಕುಟುಂಬ ಸದಸ್ಯರು, ಮದುವೆ ಗಂಡು ಹಾಗೂ ಆತನ ಕುಟುಂಬ ಸದಸ್ಯರನ್ನು ಬಂಧಿಸಿದ್ದಾರೆ. ಅಲ್ಲದೇ ಅವರ ಬಳಿ ಇದ್ದ ಬೆಲೆಬಾಳುವ ವಸ್ತುಗಳನ್ನು ಕಸಿದುಕೊಂಡಿದ್ದಾರೆ. ಅಂತಿಮವಾಗಿ ಅವರನ್ನು ರಕ್ಷಿಸಲು ಪೊಲೀಸರು ಆಗಮಿಸಿದ್ದಾರೆ.

ಎರಡೂ ಕುಟುಂಬದವರು ಕೊನೆಗೆ ಒಪ್ಪಂದವೊಂದನ್ನು ಮಾಡಿ ಈ ವಿಚಾರವನ್ನು ಕೈ ಬಿಟ್ಟಿದ್ದಾರೆ. ಆದರೆ ಮಧುಮಗಳು ವರನ ಜೊತೆ ಹೋಗಲು ಹಿಂದೇಟು ಹಾಕಿದ್ದಾಳೆ. ಅಲ್ಲದೇ ಮರುದಿನ ಬೇರೊಬ್ಬ ಯುವಕನೊಂದಿಗೆ ಮದುವೆಯಾಗಿದ್ದಾಳೆ.

ಆ್ಯನಿವರ್ಸರಿಗೆ ಓಲ್ಡ್‌ ಫೋಟೋ ರಿವೀಲ್; ಯಶ್‌ಗೆ ರಾಧಿಕಾ ಸ್ಪೆಷಲ್‌ ವಿಶ್!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?