ತನ್ನದೇ ಎಂಜಲಿನಿಂದ ಗ್ರಾಹಕನ ಮುಖಕ್ಕೆ ಮಸಾಜ್ ಮಾಡಿದ ಕ್ಷೌರಿಕ!

Published : Jun 16, 2024, 04:26 PM IST
ತನ್ನದೇ ಎಂಜಲಿನಿಂದ ಗ್ರಾಹಕನ ಮುಖಕ್ಕೆ ಮಸಾಜ್ ಮಾಡಿದ ಕ್ಷೌರಿಕ!

ಸಾರಾಂಶ

ಲಕ್ನೋದಲ್ಲಿ ಒಂದು ಶಾಕಿಂಗ್ ಘಟನೆ ನಡೆದಿದೆ. ಕ್ಷೌರಿಕನೊಬ್ಬ ತನ್ನ ಸಲೂನ್‌ ಅಂಗಡಿಗೆ ಬಂದ ಗ್ರಾಹಕನ ಮುಖಕ್ಕೆ ತನ್ನದೇ ಎಂಜಿಲಿನಿಂದ ಮಸಾಜ್ ಮಾಡಿದ್ದಾನೆ.

ಮಧ್ಯಪ್ರದೇಶ (ಜೂ.16): ಲಕ್ನೋದಲ್ಲಿ ಒಂದು ಶಾಕಿಂಗ್ ಘಟನೆ ನಡೆದಿದೆ. ಕ್ಷೌರಿಕನೊಬ್ಬ ತನ್ನ ಸಲೂನ್‌ ಅಂಗಡಿಗೆ ಬಂದ ಗ್ರಾಹಕನ ಮುಖಕ್ಕೆ ತನ್ನದೇ ಎಂಜಿಲಿನಿಂದ ಮಸಾಜ್ ಮಾಡಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು,  ವೈರಲ್ ಆಗಿದೆ.

ಕ್ಯಾಂಟೀನ್‌ನಲ್ಲಿ ಕೆಲಸ ಮಾಡುವ  ಉನ್ನಾವೋ ನಿವಾಸಿ  ಪಂಡಿತ್ ಆಶಿಶ್ ಕುಮಾರ್ ಎಂಬಾತ ಜೂನ್ 11 ರಂದು, ಕ್ಷೌರ ಮಸಾಜ್ ಮಾಡಲು ಸಲೂನ್‌ಗೆ ಹೋಗಿದ್ದರು. ಸಲೂನ್‌ನ ಸಿಸಿಟಿವಿ ದೃಶ್ಯಗಳಲ್ಲಿ ಆರೋಪಿ ಜೈದ್ ಅಂಗೈಗೆ ಉಗುಳುವುದು ಮತ್ತು ಎಂಜಲನ್ನು ಪಂಡಿತ್ ಗೆ ಉಜ್ಜುವುದು ಸೆರೆಯಾಗಿದೆ. ಕ್ಷೌರದ ಸಮಯದಲ್ಲಿ ಪಂಡಿತ್ ಕುಮಾರ್ ಗೆ ಇದ್ಯಾವುದೂ ಗಮನಕ್ಕೆ ಬಂದಿಲ್ಲ.

ಬೆಳಗಾವಿಯಲ್ಲಿ ಭ್ರೂಣ ಹತ್ಯೆ ಗ್ಯಾಂಗ್‌, ನಕಲಿ ವೈದ್ಯನ ಫಾರ್ಮ್ ಹೌಸ್‌ನಲ್ಲಿ ಹೂತಿಟ್ಟ ಭ್ರೂಣಗಳು ವಶಕ್ಕೆ

ನಂತರ ಝೈದ್ ನ ಕೃತ್ಯದ ಬಗ್ಗೆ ಅನುಮಾನಗೊಂಡ ಕುಮಾರ್ ಸಲೂನ್ ನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಪರಿಶೀಲಿಸಿದ್ದಾರೆ. ಕ್ಷೌರಿಕ ತನ್ನ ಕೈಗೆ ಉಗುಳುವುದು ಮತ್ತು ಮುಖಕ್ಕೆ ಮಸಾಜ್ ಮಾಡಲು ಉಗುಳನ್ನು ಬಳಸುವುದನ್ನು ಕಂಡು ಗಾಬರಿಗೊಂಡು ಪೊಲೀಸರಿಗೆ ದೂರು ನೀಡಿದ್ದಾರೆ. 

ರೋಗಿಗಳ ಆರೈಕೆ ಮಾಡದೆ ತುಮಕೂರಿನ ಮಧುಗಿರಿ ಸರ್ಕಾರಿ ಆಸ್ಪತ್ರೆಯೊಳಗೆ ಕ್ರಿಕೆಟ್‌ ಆಡಿದ ಸಿಬ್ಬಂದಿ!

ನಂತರ, ಗ್ರಾಹಕರ ದೂರಿನ ಆಧಾರದ ಮೇಲೆ ಲಕ್ನೋ ಪೊಲೀಸರು ಜೈದ್‌ನನ್ನು ಬಂಧಿಸಿದ್ದು, ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ. ಯಾವ ಕಾರಣಕ್ಕೆ ಜೈದ್ ಈ ಕೃತ್ಯ ಎಸಗಿದ್ದಾನೆ ಎಂಬುದನ್ನು ಪರಿಶೀಲಿಸುತ್ತಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!