
ನವದೆಹಲಿ (ಆ.14): ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾ। ಸೂರ್ಯಕಾಂತ್ ಅವರನ್ನು ಘಟಿಕೋತ್ಸವಕ್ಕೆ ಅತಿಥಿಯಾಗಿ ಆಹ್ವಾನಿಸಿದ್ದನ್ನು ವಿರೋಧಿಸಿ ಪ್ರತಿಭಟನೆ ನಡೆದಿದ್ದ ಹೈದರಾಬಾದ್ನ ಎನ್ಎಎಲ್ಎಸ್ಎಆರ್ ವಿಶ್ವವಿದ್ಯಾಲಯದಿಂದ 2026ರಲ್ಲಿ ಪದವಿ ಪಡೆದ ಯಾರೊಬ್ಬರನ್ನೂ ನೋಂದಣಿ ಮಾಡಿಕೊಳ್ಳದಂತೆ ಭಾರತದ ವಕೀಲರ ಪರಿಷತ್ತು ಎಲ್ಲಾ ರಾಜ್ಯ ವಕೀಲರ ಪರಿಷತ್ತುಗಳಿಗೆ ನಿರ್ದೇಶಿಸಿದೆ. ಮುಂದಿನ ಆದೇಶದ ವರೆಗೆ ಈ ನಿರ್ಬಂಧ ಜಾರಿಯಲ್ಲಿರಲಿದೆ.
ಸಿಜೆಪಿ ಆಯೋಜಿತ ಸಂಸತ್ ಚಲೋ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯದ ವಿಡಿಯೋ ನೋಡಲು ಸಮಯವಿಲ್ಲ ಎಂದ ಸಿಜೆಐ ಅವರನ್ನು ಘಟಿಕೋತ್ಸವಕ್ಕೆ ಕರೆಯಬಾರದು ಎಂದು ವಿವಿಯ ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದರು. ಇದರ ಬೆನ್ನಲ್ಲೇ, ಆ ಪ್ರತಿಭಟನೆ ಬಗ್ಗೆ 3 ದಿನದಲ್ಲಿ ವರದಿ ಕೊಡುವಂತೆ ಕುಲಪತಿಗೆ ಬಾರ್ ಕೌನ್ಸಿಲ್ ಆದೇಶಿಸಿದೆ ಹಾಗೂ ಆ.19ರಂದು ಅದರ ವಿಚಾರಣೆ ನಡೆಸುವುದಾಗಿ ತಿಳಿಸಿದೆ. ಜತೆಗೆ ಪ್ರತಿಭಟನೆಗೆ ಕರೆ ನೀಡಿದವರು, ಭಾಗಿಯಾದವರು ಯಾರು? ಯಾವುದಾದರೂ ವಿದ್ಯಾರ್ಥಿ ಸಂಘಟನೆ ಭಾಗಿಯಾಗಿತ್ತೇ? ಅಧ್ಯಾಪಕರು ಕೂಡ ಭಾಗಿಯಾಗಿದ್ದರೆ? ಎಂಬೆಲ್ಲಾ ಪ್ರಶ್ನೆಗಳಿಗೆ ಉತ್ತರ ಕೇಳಿದೆ. ಅಂತಿಮ ನಿರ್ಧಾರವನ್ನು ವಕೀಲರ ಕಾಯಿದೆ, 1961ರ ಅನ್ವಯ ಕೈಗೊಳ್ಳಲಾಗುವುದು ಎಂದು ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ