
ಕೊಲ್ಕತ್ತಾ(ಏ.04): ತಮಗೆ ಅನುಕೂಲವಲ್ಲದ ಆದೇಶ ನೀಡಿದ ಕಾರಣ ನ್ಯಾಯಾಧೀಶರಿಗೆ ಕೊರೋನಾ ಸೋಕು ತಗುಲಲಿ ಎಂದು ವಕೀಲರೊಬ್ಬರು ಶಾಪ ಹಾಕಿದ ಘಟನೆ ಕೋಲ್ಕತಾದಲ್ಲಿ ನಡೆದಿದೆ.
ಕೊರೋನಾ ಸೋಂಕು ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಕಲ್ಕತ್ತಾ ಹೈಕೋರ್ಟ್ ಮಾಚ್ರ್ 15ರಿಂದ ತುರ್ತು ವಿಷಯಗಳನ್ನು ಮಾತ್ರ ಆಲಿಸುತ್ತಿದೆ. ವಿಜಯ್ ಅಧಿಕಾರಿ ಎಂಬ ವಕೀಲ ‘ಸಾಲ ಮರುಪಾವತಿಸದ ಕಾರಣ ರಾಷ್ಟ್ರೀಕೃತ ಬ್ಯಾಂಕ್ವೊಂದು ತಮ್ಮ ಕಕ್ಷೀದಾರರ ಬಸ್ ಹರಾಜು ಹಾಕುತ್ತಿದೆ. ಈ ಪ್ರಕ್ರಿಯೆಗೆ ತಡೆ ನೀಡಬೇಕು’ ಎಂದು ಕೋರಿ ಅರ್ಜಿ ಸಲ್ಲಿಸಿ, ತುರ್ತು ವಿಚಾರಣೆಗೆ ಮನವಿ ಮಾಡಿದ್ದರು. ಆದರೆ ಕೋರ್ಟ್ ತುರ್ತು ವಿಚಾರಣೆಗೆ ನಿರಾಕರಿಸಿದ ಕಾರಣ ವಕೀಲರು ಈ ರೀತಿ ಶಾಪ ಹಾಕಿದ್ದಾರೆ.
"
ವಕೀಲರ ವರ್ತನೆ ಕಂಡ ನ್ಯಾಯಾಧೀಶ ದೀಪಕ್ ದತ್ತಾ ನ್ಯಾಯಾಲಯದ ಘನತೆ ಎತ್ತಿಹಿಡಿಯುವ ರೀತಿ ವರ್ತಿಸಿ ಎಂದು ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ