
ಲಖನೌ(ಆ.08): ಚೀನಾ ಗಡಿಯಲ್ಲಿ ಉದ್ವಿಗ್ನ ಸ್ಥಿತಿ ನೆಲೆಸಿರುವ ಹಿನ್ನೆಲೆಯಲ್ಲಿ ಸದಾ ಯುದ್ಧ ಸನ್ನದ್ಧ ಸ್ಥಿತಿಯಲ್ಲಿ ಇರುವಂತೆ ಸೇನಾ ಮುಖ್ಯಸ್ಥ ಎಂ.ಎಂ.ನರವಣೆ ಅವರು ಹಿರಿಯ ಕಮಾಂಡರ್ಗಳಿಗೆ ಸೂಚನೆ ನೀಡಿದ್ದಾರೆ.
ಶುಕ್ರವಾರ ಇಲ್ಲಿನ ಸೆಂಟ್ರಲ್ ಕಮಾಂಡ್ ಕೇಂದ್ರ ಕಚೇರಿಗೆ ಭೇಟಿ ನೀಡಿ, ಸೇನೆಯ ಸನ್ನದ್ಧ ಸ್ಥಿತಿಯನ್ನು ಪರಿಶೀಲಿಸಿದ ಅವರು ಇಂಥದ್ದೊಂದು ಸೂಚನೆ ನೀಡಿದ್ದಾರೆ. ಇದೇ ವೇಳೆ ಸೆಂಟ್ರಲ್ ಕಮಾಂಡ್ನ ಸನ್ನದ್ಧ ಸ್ಥಿತಿಯ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಲಡಾಖ್ನಲ್ಲಿ ಹಾಲಿ ಸ್ಥಿತಿ ಕಾಪಾಡುವ ಚೀನಾ ಕುತಂತ್ರಕ್ಕೆ ಭಾರತದ ಬ್ರೇಕ್!
ಇತ್ತೀಚಿನ ದಿನಗಳಲ್ಲಿ ಲಡಾಖ್ ಗಡಿಯಲ್ಲಿ ಚೀನಾದ ಕ್ಯಾತೆ ಹೆಚ್ಚಾಗಿರುವ ಬೆನ್ನಲ್ಲೇ, ಅಲ್ಲಿ ಭಾರತೀಯ ಸೇನೆ ತನ್ನ ಸೇನಾ ಜಮಾವಣೆ ಹೆಚ್ಚಿಸಿದೆ. ಜೊತೆಗೆ ಅಲ್ಲಿ ಇನ್ನಷ್ಟುದಿನ ಸಂಘರ್ಷ ಮುಂದುವರೆಯುವ ಸುಳಿವು ಸಿಕ್ಕಿರುವ ಹಿನ್ನೆಲೆಯಲ್ಲಿ ಸೇನಾ ಮುಖ್ಯಸ್ಥರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ