
ನವದೆಹಲಿ(ಫೆ.13): ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ(ಆರ್ಟಿಕಲ್ 370) ರದ್ದು ಮಾಡಿದ ಕೇಂದ್ರ ನಿರ್ಧಾರವನ್ನು ಕಾಂಗ್ರೆಸ್ ಪದೇ ಪದೇ ಟೀಕಿಸಿದೆ. ಇದೀಗ ಲೋಕಸಭೆಯಲ್ಲಿ ಕಾಂಗ್ರೆಸ್ ಪ್ರಶ್ನೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಉತ್ತರ ನೀಡಿದ್ದಾರೆ. ಆರ್ಟಿಕಲ್ 370 ರದ್ದು ಮಾಡುವಾಗ ನೀಡಿದ ಭರವಸೆಗಳು ಏನಾದವು ಎಂದು ಕೇಳಿದೆ. ಇದಕ್ಕೆ ಅಂಕಿ ಅಂಶಗಳ ಮೂಲಕ ಉತ್ತರ ನೀಡಿದ್ದಾರೆ.
'ಈ ಬಾರಿ ಮೋದಿ ವಿಕಾಸ, ಮಮತಾ ವಿನಾಶ ಸಮರ
ಜಮ್ಮು ಕಾಶ್ಮೀರಕ್ಕೆ ಕೇಂದ್ರ ಸರ್ಕಾರದ ನೀಡಿದ ಅನುದಾನ ಹಾಗೂ ಹಲವು ಯೋಜನೆಗಳ ಕುರಿತು ಮಾಹಿತಿ ನೀಡಿದ್ದಾರೆ. ಇದೇ ವೇಳೆ ಕಳೆದ 17 ತಿಂಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಏನು ಅಭಿವೃದ್ಧಿಯಾಗಿದೆ ಎಂದು ಪ್ರಶ್ನೆ ಕೇಳುವ ಕಾಂಗ್ರೆಸ್ ಕಳೆದ 70 ವರ್ಷದಲ್ಲಿ ಏನು ಮಾಡಿದ್ದೀರಿ ಅನ್ನೋದು ಹೇಳಿ ಎಂದು ಸವಾಲು ಹಾಕಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿ ಕೇಂದ್ರ ಸರ್ಕಾರದ ಮೊದಲ ಆದ್ಯತೆಯಾಗಿದೆ. ರಾಜಕೀಯ ಮಾಡಲು ಹಲುವ ವಿಷಯಗಳಿವೆ. ಆದರೆ ದೇಶದ ಭದ್ರತೆ, ಅಭಿವೃದ್ಧಿ ವಿಚಾರದಲ್ಲಿ ಇಲ್ಲ ಸಲ್ಲದ ರಾಜಕೀಯ ಎಳೆದು ತಂದು ಮುಗ್ದ ನಾಗರೀಕರನ್ನು ಕತ್ತಲಲ್ಲಿ ಇಡಬೇಡಿ ಎಂದು ವಿಪಕ್ಷಗಳಿಗೆ ಶಾ ತಿರುಗೇಟು ನೀಡಿದರು.
ಇನ್ನು ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರ ಪುನರ್ ರಚನೆ ತಿದ್ದುಪಡಿ ಮಸೂದೆ ಮಂಡಿಸಿದೆ. ದ್ವನಿ ಮತದ ಮೂಲಕ ಜಮ್ಮು ಮತ್ತು ಕಾಶ್ಮೀರ ಪುನರ್ ರಚನೆ ಮಸೂದೆ ಅಂಗೀಕಾರಗೊಂಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ