10 ದಿನದಲ್ಲಿ ರಾಜೀನಾಮೆ ಕೊಡದಿದ್ರೆ ಸಿದ್ದಿಕಿ ಗತಿನೇ ಆಗತ್ತೆ- ಯೋಗಿಗೆ ಬಂದ ಬೆದರಿಕೆ ಹಿಂದೆ ಐಟಿ ಯುವತಿ!

Published : Nov 03, 2024, 04:45 PM IST
10 ದಿನದಲ್ಲಿ ರಾಜೀನಾಮೆ ಕೊಡದಿದ್ರೆ ಸಿದ್ದಿಕಿ ಗತಿನೇ ಆಗತ್ತೆ- ಯೋಗಿಗೆ ಬಂದ ಬೆದರಿಕೆ ಹಿಂದೆ ಐಟಿ ಯುವತಿ!

ಸಾರಾಂಶ

10 ದಿನದಲ್ಲಿ ರಾಜೀನಾಮೆ ಕೊಡದಿದ್ರೆ ಸಿದ್ದಿಕಿ ಗತಿನೇ ಆಗತ್ತೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಬೆದರಿಕೆ ಬಂದಿದೆ. ಆದರೆ  ಇದರ ಹಿಂದಿರೋದು ಈ ಯುವತಿ! ಯಾರೀಕೆ?   

ನಟ ಸಲ್ಮಾನ್​ ಖಾನ್​ ಮತ್ತು ಅಂಡರ್​ವರ್ಲ್ಡ್​ ಡಾನ್​ ದಾವೂದ್​ ಇಬ್ರಾಹಿಂ ಜೊತೆ ನಿಕಟ ಸಂಪರ್ಕ ಹೊಂದಿದ್ದಾರೆ ಎನ್ನುವ ಕಾರಣಕ್ಕೆ ಇತ್ತೀಚೆಗಷ್ಟೇ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಅವರನ್ನು ಹತ್ಯೆ ಮಾಡಲಾಗಿದ್ದು, ಈ ಹತ್ಯೆಯ ಆರೋಪವನ್ನು ಲಾರೆನ್ಸ್​ ಬಿಷ್ಣೋಯಿ ಗ್ಯಾಂಗ್​ ಹೊತ್ತುಕೊಂಡಿದೆ. ಆದರೆ ಇದೀಗ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಕೊಲೆ ಬೆದರಿಕೆ ಬಂದಿದ್ದು, 10 ದಿನಗಳಲ್ಲಿ ರಾಜೀನಾಮೆ ಕೊಡದಿದ್ರೆ ಬಾಬಾ ಸಿದ್ದಿಕಿಗೆ ಆದ ಗತಿಯೇ ಆಗುತ್ತದೆ ಎಂದು ಬೆದರಿಕೆಯಲ್ಲಿ ತಿಳಿಸಲಾಗಿದೆ! ನಿನ್ನೆ ಅಂದ್ರೆ ಶನಿವಾರ ಟ್ರಾಫಿಕ್ ಕಂಟ್ರೋಲ್ ಸೆಲ್‌ಗೆ  ಈ ಸಂದೇಶ ಬಂದಿತ್ತು.  10 ದಿನಗಳಲ್ಲಿ ರಾಜೀನಾಮೆ ಕೊಡದಿದ್ರೆ ಕೊಲೆ ಮಾಡುವುದಾಗಿ ಹೇಳಲಾಗಿತ್ತು.  

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಪ್ರಚಾರಕ್ಕಾಗಿ ಯೋಗಿ ಆದಿತ್ಯನಾಥ್ ಅವರು ಮಹಾರಾಷ್ಟ್ರಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ನಡುವಲ್ಲೇ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ಪ್ರಕರಣವನ್ನು ಮುಂಬೈ ಪೊಲೀಸರು ಗಂಭೀರವಾಗಿ ಪರಿಗಣಿಸಿ ತನಿಖೆಯನ್ನು ಚುರುಕುಗೊಳಿಸಿದ್ದರು. ಅಪರಿಚಿತ ಸಂಖ್ಯೆಯನ್ನು ಬೆನ್ನಟ್ಟಿ ಹೋದ ಪೊಲೀಸರ ಕೈಗೆ ಸಿಕ್ಕಿದ್ದು 24 ವರ್ಷದ ಯುವತಿ! ಹೆಸರು  ಫಾತಿಮಾ ಖಾನ್. ಈಕೆಯನ್ನು ಸದ್ಯ ಬಂಧಿಸಲಾಗಿದೆ.  ಫಾತಿಮಾ   ಮಹಾರಾಷ್ಟ್ರದ ನೆರೆಯ ಥಾಣೆ ಜಿಲ್ಲೆಯ ಉಲ್ಹಾಸ್‌ನಗರ ಪ್ರದೇಶದಲ್ಲಿ ವಾಸಿಸುತ್ತಿದ್ದಾಳೆ. ಕುತೂಹಲದ ವಿಷಯ ಎಂದರೆ ಈಕೆ ಮಾಹಿತಿ ತಂತ್ರಜ್ಞಾನದಲ್ಲಿ (ಐಟಿ) ಬಿಎಸ್ಸಿ ಪದವಿ ಪಡೆದಿದ್ದಾಳೆ!  

ಸಲ್ಮಾನ್​ ಖಾನ್​ ತಂದಿಟ್ಟ ಸಂಕಷ್ಟ? ಆಪ್ತ ಬಾಬಾ ಸಿದ್ಧಿಕಿ ಅಂತ್ಯಕ್ರಿಯೆಯೂ ಶಾರುಖ್​ಗೆ ಹೋಗಲಾಗದ ಸ್ಥಿತಿ...

ಈಕೆಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಸದ್ಯದ ವರದಿಯ ಪ್ರಕಾರ, ಫಾತಿಮಾ ಖಾನ್​  ಮಾನಸಿಕ ಅಸ್ವಸ್ಥಳು ಎಂದು ಹೇಳಲಾಗುತ್ತಿದೆ. ಆದರೆ ಇದರ ಹಿಂದಿರುವ ಕೈವಾಡ ಏನು, ಏಕೆ ಕರೆ ಮಾಡಿದ್ದು ಎಂಬಿತ್ಯಾದಿಯ ಬಗ್ಗೆ ವಿವರವಾದ ತನಿಖೆ ನಡೆಸಲಾಗುತ್ತಿದೆ. ಬೆದರಿಕೆ ಹಿನ್ನೆಲೆಯಲ್ಲಿ  ಸಿಎಂ ಯೋಗಿ ಆದಿತ್ಯನಾಥ್ ಅವರ ಭದ್ರತೆಯನ್ನು ಹೆಚ್ಚಿಸಲಾಗಿದೆ. 
 
ಸದ್ಯದ ಸ್ಥಿತಿಯಲ್ಲಿ ಕೊಲೆ ಬೆದರಿಕೆ ಸಂದೇಶಗಳು ಮುಂಬೈ ಪೊಲೀಸರ ನಿದ್ದೆಗೆಡಿಸಿವೆ. ಕಳೆದ ಹಲವು ವಾರಗಳಿಂದ ಇಂಥ ಬೆದರಿಕೆ ಹೆಚ್ಚಾಗುತ್ತಿದೆ.  ಇವರಲ್ಲಿ ಹೆಚ್ಚಿನವರು ಸಲ್ಮಾನ್ ಖಾನ್ ಅವರನ್ನು ಗುರಿಯಾಗಿಟ್ಟುಕೊಂಡು ಬೆದರಿಕೆ ಹಾಕುತ್ತಿದ್ದಾರೆ.  ಸದ್ಯ ಯೋಗಿ ಅವರಿಗೆ ಬೆದರಿಕೆ ಹಾಕಿರುವ ಯುವತಿ ಮಾನಸಿಕ ಅಸ್ವಸ್ಥಳಂತೆ ಕಾಣಿಸಿಕೊಳ್ಳುತ್ತಿದ್ದರೂ,  ಪ್ರಕರಣವನ್ನು ಹಗುರವಾಗಿ ಪರಿಗಣಿಸುವಂತಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಈಕೆಯ ಈ ಬೆದರಿಕೆ ಹಾಕುವುದರ ಹಿಂದೆ ಯಾರಾದರೂ ಇದ್ದಾರೆಯೇ, ಆಕೆಯ ಸ್ನೇಹಿತರಲ್ಲಿ ಯಾರಾದರೂ ಅನುಮಾನಾಸ್ಪದ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆಯೇ ಎಂಬಿತ್ಯಾದಿ ವಿಚಾರಗಳ ಬಗ್ಗೆ ತನಿಖೆ ನಡೆಸಲಾಗುತ್ತದೆ ಎಂಬ ಮಾಹಿತಿ ನೀಡಿದ್ದಾರೆ.  ಸದ್ಯಕ್ಕೆ ಫಾತೀಮಾಳನ್ನು ಮುಂಬೈಗೆ ಕರೆತರಲಾಗಿದೆ.  ಆಕೆಯ ಮಾನಸಿನ ಸಮತೋಲದ ಪರೀಕ್ಷೆ ನಡೆಸಲಾಗುತ್ತಿದೆ! 

ಬಾಬಾ ಸಿದ್ದಿಕಿ ಹತ್ಯೆಗೂ ಮುನ್ನ ಸೋಷಿಯಲ್​ ಮೀಡಿಯಾದಲ್ಲಿ ಕೆಜಿಎಫ್​-2 ಡೈಲಾಗ್​ ಬರೆದಿದ್ದ ಆರೋಪಿ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

22 ಕಾರ್ಮಿಕರ ಸಾಗಿಸುತ್ತಿದ್ದ ಟ್ರಕ್ ಭೀಕರ ಅಪಘಾತದಲ್ಲಿ 17 ಸಾವು, 4 ದಿನ ಬಳಿಕ ಘಟನೆ ಬೆಳಕಿಗೆ
ಪ್ರತಿಷ್ಠಿತ ಶಾಲೆಯ ಮೇಲೆ ಐಟಿ ರೈಡ್: ಕೋಟಿ ಕೋಟಿ ಹಣ ಪತ್ತೆ: ಹಣ ಎಣಿಸುವ ಯಂತ್ರ ತರಿಸಿದ ಅಧಿಕಾರಿಗಳು