
ಮುಂಬೈ[ಫೆ.04]: ಮಹಾರಾಷ್ಟ್ರ ಮುಖ್ಯಮಂತ್ರಿ, ಶಿವಸೇನೆ ಮುಖಂಡ ಉದ್ಧವ್ ಠಾಕ್ರೆ ಅವರು ಬೆಳಗಾವಿಯನ್ನು ‘ಕರ್ನಾಟಕ ಆಕ್ರಮಿತ ಮಹಾರಾಷ್ಟ್ರ’ ಎಂದು ಕರೆಯುವ ಮೂಲಕ, ಕನ್ನಡಿಗರ ಭಾವನೆ ಕೆರಳಿಸುವ ಮನೋಭಾವ ಮುಂದುವರಿಸಿದ್ದಾರೆ.
ಶಿವಸೇನೆ ಮುಖವಾಣಿ ‘ಸಾಮ್ನಾ’ಗೆ ಸಂದರ್ಶನ ನೀಡಿರುವ ಅವರು, ‘ನಮ್ಮ ಸರ್ಕಾರವು ‘ಕರ್ನಾಟಕ ಆಕ್ರಮಿತ ಮಹಾರಾಷ್ಟ್ರ’ದ ವಿವಾದ ಬಗೆಹರಿಸಲಿದೆ’ ಎಂದರು.
‘ಮಹಾರಾಷ್ಟ್ರವು ಕರ್ನಾಟಕದ ಮರಾಠಿ ಭಾಷಿಕ ಪ್ರದೇಶಗಳು ತನ್ನಲ್ಲಿ ವಿಲೀನ ಆಗಬೇಕು ಎಂದು ಬಯಸುತ್ತದೆ. ಈ ವಿಷಯ ಕೋರ್ಟ್ನಲ್ಲಿದೆ. ಆದರೆ ಈ ವಿಷಯದಲ್ಲಿ ತಟಸ್ಥ ಧೋರಣೆ ತಾಳುವುದನ್ನು ಬಿಟ್ಟು ಕರ್ನಾಟಕ ಸರ್ಕಾರಕ್ಕೆ ಕೇಂದ್ರ ಸರ್ಕಾರ ಬೆಂಬಲ ನೀಡುತ್ತಿದೆ’ ಎಂದು ಆರೋಪಿಸಿದರು.
ಕಳೆದ ಡಿಸೆಂಬರ್ನಲ್ಲಿ ಕೂಡ ಬೆಳಗಾವಿಯನ್ನು ಉದ್ಧವ್ ‘ಕರ್ನಾಟಕ ಆಕ್ರಮಿತ ಕಾಶ್ಮೀರ’ ಎಂದು ಕರೆದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದ್ದರು. ‘ಪಾಕಿಸ್ತಾನ ಆಕ್ರಮಿತ ಕಾಶ್ಮೀರ’ ಪದಬಳಕೆಯಿಂದ ಸ್ಫೂರ್ತಿ ಪಡೆದು ಅವರು ಈ ಮಾತು ಆಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ