
ನವದೆಹಲಿ(ಜೂ.29): ‘ಭಾರತವು ಸದಾಕಾಲ ಶಾಂತಿಪ್ರಿಯ ರಾಷ್ಟ್ರವಾಗಿದ್ದು, ಯಾವುದೇ ಕಾರಣಕ್ಕೂ ಯಾರೊಂದಿಗೂ ಸಹ ಕಾಲುಕೆರೆದು ಕಾದಾಟಕ್ಕೆ ಹೋಗಲ್ಲ. ಆದರೆ ತಮ್ಮ ಮೇಲೆ ದಾಳಿಗೆ ಮುಂದಾದವರಿಗೆ ತಕ್ಕ ತಿರುಗೇಟು ನೀಡಲು ನಮ್ಮ ಸೈನ್ಯ ಸರ್ವ ಸನ್ನದ್ಧವಾಗಿರಲಿದೆ’ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುಡುಗಿದ್ದಾರೆ.
ತನ್ಮೂಲಕ 3 ದಿನಗಳ ಪ್ರವಾಸದ 2ನೇ ದಿನವಾದ ಸೋಮವಾರ ಪೂರ್ವ ಲಡಾಖ್ ಮುಂಚೂಣಿ ಗಡಿಗೆ ಭೇಟಿ ನೀಡಿದ ರಾಜನಾಥ್ ಅವರು, ಈ ಭಾಗದಲ್ಲಿ ಸದಾಕಾಲ ಭಾರತದ ವಿರುದ್ಧ ತಂಟೆ ತೆಗೆಯುವ ಚೀನಾಕ್ಕೆ ನೇರ ಸಂದೇಶ ರವಾನಿಸಿದ್ದಾರೆ.
ಸೈನಿಕರನ್ನು ಉದ್ದೇಶಿಸಿ ಮಾತನಾಡಿದ ಸಿಂಗ್ ಅವರು, ‘ನೆರೆಯ ರಾಷ್ಟ್ರಗಳ ಜೊತೆಗಿನ ಗಡಿ ಬಿಕ್ಕಟ್ಟುಗಳನ್ನು ಮಾತುಕತೆ ಮುಖಾಂತರ ಬಗೆಹರಿಸಿಕೊಳ್ಳಲು ಭಾರತ ಸಿದ್ಧವಿದೆ. ಆದರೆ ದೇಶದ ಸುರಕ್ಷತೆ ಮತ್ತು ಭದ್ರತೆ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಾಗಲ್ಲ’ ಎಂದರು.
ಚೀನಾ ಗಡಿಗೆ 50 ಸಾವಿರ ಯೋಧರ ಕಳಿಸಿದ ಭಾರತ!
ಇನ್ನು ಕಳೆದ ವರ್ಷದ ಜೂನ್ನಲ್ಲಿ ಗಲ್ವಾನ್ ಗಡಿಯಲ್ಲಿ ಚೀನಾ ಯೋಧರ ಜತೆಗಿನ ಗುದ್ದಾಟದಲ್ಲಿ ಮಡಿದ 20 ಯೋಧರಿಗೆ ಗೌರವ ವಂದನೆ ಸಲ್ಲಿಸಿದ ಅವರು, ಯೋಧರ ಬಲಿದಾನವನ್ನು ದೇಶ ಎಂದಿಗೂ ಮರೆಯಲ್ಲ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ