
ನವದೆಹಲಿ (ಡಿ.27): ಹೊಸ ಮಾದರಿಯ ಕೊರೋನಾ ವೈರಸ್ನಿಂದ ಆತಂಕದ ಸ್ಥಿತಿ ನಿರ್ಮಾಣವಾಗಿರುವಾಗಲೇ, ಈ ಮಾರಕ ವೈರಾಣುವಿನಿಂದ ದೇಶದಲ್ಲಿ ಸಂಭವಿಸುತ್ತಿರುವ ಸಾವುಗಳ ಸಂಖ್ಯೆಯಲ್ಲಿ ಮತ್ತಷ್ಟುಇಳಿಕೆ ಕಂಡುಬಂದಿದೆ. ಶನಿವಾರ ಬೆಳಗ್ಗೆ 8ರವರೆಗಿನ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 251 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ದಿನವೊಂದರಲ್ಲಿ 300ಕ್ಕಿಂತ ಕಡಿಮೆ ಸಾವು ವರದಿಯಾಗುತ್ತಿರುವುದು 6 ತಿಂಗಳ ಬಳಿಕ ಇದೇ ಮೊದಲು.
251 ಹೊಸ ಸಾವಿನೊಂದಿಗೆ ಕೊರೋನಾ ವೈರಸ್ಗೆ ದೇಶದಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 1,47,343ಕ್ಕೆ ಹೆಚ್ಚಳವಾಗಿದೆ. ಇದೇ ವೇಳೆ, 22,273 ಮಂದಿಯಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ. ದೈನಂದಿನ ಸೋಂಕಿತರ ಸಂಖ್ಯೆ 25 ಸಾವಿರಕ್ಕಿಂತ ಕಡಿಮೆ ಇರುವುದು ಇದು ಸತತ 9ನೇ ದಿನ ಎಂಬುದು ಗಮನಾರ್ಹ. ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 1,01,69,118ಕ್ಕೆ ಏರಿಕೆಯಾಗಿದೆ.
ಬ್ರಿಟನ್ನಿಂದ ಬಂದು ಕಣ್ಮರೆಯಾದವರಿಗೆ ಪೊಲೀಸರ ಹುಡುಕಾಟ
ವೈರಸ್ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 97,40,108ಕ್ಕೆ ಏರಿಕೆಯಾಗಿದೆ. ಇದರಿಂದಾಗಿ ಗುಣಮುಖ ಪ್ರಮಾಣ ಶೇ.95.78ಕ್ಕೆ ಹೆಚ್ಚಳವಾಗಿದೆ. ಸಕ್ರಿಯ ಕೊರೋನಾಪೀಡಿತರ ಸಂಖ್ಯೆ 2,81,667ರಷ್ಟಿದೆ. ಈ ಮೂಲಕ ಸಕ್ರಿಯ ಕೊರೋನಾಪೀಡಿತರ ಸಂಖ್ಯೆ ಸತತ ಐದನೇ ದಿನವೂ 3 ಲಕ್ಷಕ್ಕಿಂತ ಕಡಿಮೆ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ