ಬಂಗಾಳ ಬಿಜೆಪಿ ಸಂಸದ, ಶಾಸಕನ ಮೇಲೆ ತೀವ್ರ ಹಲ್ಲೆ

Kannadaprabha News   | Kannada Prabha
Published : Oct 07, 2025, 03:42 AM IST
crime scene

ಸಾರಾಂಶ

ಪಶ್ಚಿಮ ಬಂಗಾಳದ ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ವೇಳೆ ದುಷ್ಕರ್ಮಿಗಳು ಬಿಜೆಪಿ ಸಂಸದ ಖಗೇನ್‌ ಮುರ್ಮು ಹಾಗೂ ಶಾಸಕ ಶಂಕರ್‌ ಘೋಷ್‌ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಾಗರಕಟಾ ಪ್ರದೇಶದಲ್ಲಿ ಸೋಮವಾರ ನಡೆದಿದೆ.

ಕೋಲ್ಕತಾ: ಪಶ್ಚಿಮ ಬಂಗಾಳದ ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ವೇಳೆ ದುಷ್ಕರ್ಮಿಗಳು ಬಿಜೆಪಿ ಸಂಸದ ಖಗೇನ್‌ ಮುರ್ಮು ಹಾಗೂ ಶಾಸಕ ಶಂಕರ್‌ ಘೋಷ್‌ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಾಗರಕಟಾ ಪ್ರದೇಶದಲ್ಲಿ ಸೋಮವಾರ ನಡೆದಿದೆ.

ಮುರ್ಮು ಅವರ ಮುಖದಿಂದ ರಕ್ತ ಸುರಿಯುತ್ತಿರುವ ವಿಡಿಯೋವನ್ನು ಶಾಸಕ ಘೋಷ್‌ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದು, ‘ದುಷ್ಕರ್ಮಿಗಳು ನಮ್ಮನ್ನು ನೂಕಿ, ಹಲ್ಲೆ ನಡೆಸಿದರು. ವಾಹನವನ್ನು ಧ್ವಂಸಗೊಳಿಸಿದರು. ನಂತರ ಕಲ್ಲುತೂರಾಟ ನಡೆಸಿದರು. ಹಲ್ಲೆಯಿಂದ ಮುರ್ಮು ಅವರಿಗೆ ಗಂಭೀರ ಗಾಯವಾಗಿದೆ’ ಆರೋಪಿಸಿದ್ದಾರೆ. ತಕ್ಷಣ ಮುರ್ಮು ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಈ ದಾಳಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದ್ದು, ಪರಿಹಾರ ಕಾರ್ಯಕ್ಕೆ ಅಡ್ಡಿಪಡಿಸಲು ಆಡಳಿತಾರೂಢ ಟಿಎಂಸಿ ಹಿಂಸಾಚಾರವನ್ನು ಸಂಘಟಿಸುತ್ತಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.

ಬಿಜೆಪಿಗರ ಮೇಲಿನ ದಾಳಿಗೆ ಮೋದಿ ಕಿಡಿ

ನವದೆಹಲಿ: ‘ಪಶ್ಚಿಮ ಬಂಗಾಳದಲ್ಲಿ ಪ್ರವಾಹ ಮತ್ತು ಭೂಕುಸಿತ ಪೀಡಿತ ಜನರ ಭೇಟಿಗೆ ಹೋಗುತ್ತಿದ್ದ ನಮ್ಮ ಪಕ್ಷದ ಸಹೋದ್ಯೋಗಿಗಳ ಮೇಲೆ ನಡೆದ ದಾಳಿ ಖಂಡನೀಯ’ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ.ಟ್ವೀಟ್‌ ಮಾಡಿರುವ ಆವರು, ’ನಮ್ಮ ಸಂಸತ್ ಸದಸ್ಯರು ಹಾಗೂ ಶಾಸಕರ ಮೇಲೆ ದಾಳಿ ನಡೆದಿದೆ. ಇದು ಖಂಡನೀಯ. ಇದು ತೃಣಮೂಲ ಕಾಂಗ್ರೆಸ್‌ನ ಅಸಂವೇದನಾಶೀಲತೆ ಮತ್ತು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ದಯನೀಯ ಸ್ಥಿತಿಯ ಸ್ಪಷ್ಟ ಪ್ರತಿಬಿಂಬವಾಗಿದೆ’ ಎಂದಿದ್ದಾರೆ.

‘ಈ ಕಠಿಣ ಪರಿಸ್ಥಿತಿಯಲ್ಲಿ ಪಶ್ಚಿಮ ಬಂಗಾಳ ಸರ್ಕಾರ ಮತ್ತು ತೃಣಮೂಲ ಕಾಂಗ್ರೆಸ್ ಹಿಂಸಾಚಾರದಲ್ಲಿ ತೊಡಗುವುದನ್ನು ಬಿಟ್ಟು ಜನರಿಗೆ ಸಹಾಯ ಮಾಡುವತ್ತ ಹೆಚ್ಚು ಗಮನಹರಿಸಬೇಕು ಎಂಬುದು ನನ್ನ ಹೃತ್ಪೂರ್ವಕ ಆಶಯ. ಬಿಜೆಪಿ ಕಾರ್ಯಕರ್ತರು ಸಾರ್ವಜನಿಕರೊಂದಿಗೆ ನಿಂತು ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಗಳಲ್ಲಿ ಸಹಾಯ ಮಾಡುವುದನ್ನು ಮುಂದುವರಿಸಬೇಕೆಂದು ನಾನು ಮನವಿ ಮಾಡುತ್ತೇನೆ’ ಎಂದೂ ಮೋದಿ ಕರೆ ನಿಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಭಾರತದ 2 ಬಿಲಿಯನ್ ಡಾಲರ್ ಪರಮಾಣು ಜಲಾಂತರ್ಗಾಮಿ ಒಪ್ಪಂದ ಅಂತಿಮಗೊಳಿಸಿದ ಪುಟಿನ್ ಭೇಟಿ
ಸೆಂಟ್ರಲ್ ಮೆಟ್ರೋ ಮತ್ತು ಹೈಕೋರ್ಟ್ ನಿಲ್ದಾಣಗಳ ನಡುವೆ ನೀಲಿ ಮಾರ್ಗದ ಸುರಂಗದಲ್ಲಿ ಹಠಾತ್ ನಿಂತ ಮೆಟ್ರೋ ರೈಲು