ಉಸಿರಾಡಲಾಗದೇ ಒದ್ದಾಟ, ಕೊರೋನಾಗೆ ಜಿಲ್ಲಾಧಿಕಾರಿ ಬಲಿ!

Published : Jul 15, 2020, 12:22 PM ISTUpdated : Jul 15, 2020, 12:45 PM IST
ಉಸಿರಾಡಲಾಗದೇ ಒದ್ದಾಟ, ಕೊರೋನಾಗೆ ಜಿಲ್ಲಾಧಿಕಾರಿ ಬಲಿ!

ಸಾರಾಂಶ

ಮಾರಕ ಕೊರೋನಾಗೆ ವಾರಿಯರ್ ಬಲಿ| ಉಸಿರಾಟದ ಸಮಸ್ಯೆ ಯುವ ಐಎಎಸ್‌ ಅಧಿಕಾರಿ ಸಾವು| ಕೊರೋನಾದಿಂದ ಕೊನೆಯುಸಿರೆಳೆದ ಪಶ್ಚಿಮ ಬಂಗಾಳದ ಮೊದಲ ಜಿಲ್ಲಾಧಿಕಾರಿ

ಕೋಲ್ಕತ್ತಾ(ಜು.15): ಮಾರಕ ಕೊರೋನಾಗೆ ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿ ಐಎಎಸ್ ಅಧಿಕಾರಿ ಬಲಿಯಾಗಿದ್ದಾರೆ. 

ಹೂಗ್ಲಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ 33 ವರ್ಷದ ದೇಬದತ್ತ ರೇ ಉಸಿರಾಟದ ಸಮಸ್ಯೆಯಿಂದ ಸೋಮವಾರ ಸಾವನ್ನಪ್ಪಿದ್ದಾರೆ. ಕೊರೋನಾ ಪಾಸಿಟಿವ್ ಬಂದಿದ್ದರಿಂದ ಅವರು ಹೋಂ ಕ್ವಾರಂಟೈನ್‌ನಲ್ಲಿದ್ದರು. ಆದರೆ ಭಾನುವಾರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದಾರೆ. 

33 ವರ್ಷದ ರೇ ಅವರು 2010ರ ಐಎಎಸ್‌ ಅಧಿಕಾರಿ. ರೇ ಅವರು ಪಶ್ಚಿಮ ಬಂಗಾಳ ಮತ್ತು ವಿವಿಧ ರಾಜ್ಯಗಳಿಂದ ಶ್ರಮಿಕ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಡಂಕಣಿಗೆ ಆಗಮಿಸಿದ ವಲಸೆ ಕಾರ್ಮಿಕರಿಗೆ ಸೌಲಭ್ಯ ಕಲ್ಪಿಸುವ ಕಾರ್ಯದಲ್ಲಿ ನಿರತರಾಗಿದ್ದರು. ಕೊರೊನಾ ವಾರಿಯರ್‌ ಆಗಿ ಕೆಲಸ ಮಾಡುತ್ತಿದ್ದಾಗ ಸೋಂಕು ತಗುಲಿತ್ತು.

15 ವರ್ಷದಲ್ಲಿ 6 ಕೋಟಿ ಭಾರತೀಯರು ಅಪೌಷ್ಠಿಕತೆಯಿಂದ ಮುಕ್ತ!

ದೇಬದತ್ತ ರೇ ಪತಿ ಮತ್ತು ನಾಲ್ಕು ವರ್ಷದ ಪುತ್ರಿಯನ್ನು ಅಗಲಿದ್ದಾರೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟ್ವೀಟ್‌ ಮಾಡಿ ಸಂತಾಪ ಸೂಚಿಸಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮುಸ್ಲಿಂ ಲೀಗ್‌, ಜಿನ್ನಾಗೆ ಮಣಿದ ನೆಹರು, ವಂದೇ ಮಾತರಂ ಅನ್ನು ಹರಿದು ಹಾಕಿದ್ದು ಕಾಂಗ್ರೆಸ್‌: ಮೋದಿ ವಾಗ್ದಾಳಿ
ಮದುವೆಯಾದ್ರೆ ಸಿಗುತ್ತೆ 2.5 ಲಕ್ಷ ರೂಪಾಯಿ; ಶೇ.99 ಜನರಿಗೆ ಈ ವಿಷಯವೇ ಗೊತ್ತಿಲ್ಲ