ಮಮತಾ ಸರ್ಕಾರಕ್ಕೆ ಮತ್ತೊಂದು ಶಾಕ್, ರಾಜೀನಾಮೆ ಸಲ್ಲಿಸಿದ ಸಚಿವ!

Published : Jan 05, 2021, 05:21 PM IST
ಮಮತಾ ಸರ್ಕಾರಕ್ಕೆ ಮತ್ತೊಂದು ಶಾಕ್, ರಾಜೀನಾಮೆ ಸಲ್ಲಿಸಿದ ಸಚಿವ!

ಸಾರಾಂಶ

ಮಮತಾಗೆ ಮತ್ತೊಂದು ಶಾಕ್| ಟಿಎಂಸಿಗೆ ರಾಜೀನಾಮೆ ನಿಡಿದ ಸಚಿವ| ಕಾರಣ ಇನ್ನೂ ನಿಗೂಢ

ಕೋಲ್ಕತ್ತಾ(ಜ.05): ಟಿಎಂಸಿ ಶಾಸಕ ಹಾಗೂ ಸಚಿವ ಲಕ್ಷ್ಮೀ ರತನ್ ಶುಕ್ಲಾ ಪಶ್ಚಿಮ ಬಂಗಾಳದ ಮಮತಾ ಸರ್ಕಾರದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈಗಾಗಲೇ ಪಕ್ಷದ ಅನೇಕ ಶಾಸಕರು ಪಕ್ಷ ಬಿಟ್ಟು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಹೀಗಿರುವಾಗಲೇ 39 ವರ್ಷದ ಶುಕ್ಲಾ ಕ್ರೀಡಾ ಸಚಿವ ಸ್ಥಾನದಿಂದ ಕೆಳಗಿಳಿದಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಹೀಗಿರುವಾಗ ಮಮತಾ ನೇತೃತ್ವದ ಟಿಎಂಸಿಗೆ ಬಿಜೆಪಿಯು ಪ್ರಬಲ ಸ್ಪರ್ಧೆಯೊಡ್ಡಿದೆ. ಸುವೇಂದು ಅಧಿಕಾರಿಯಂತಹ ಹಿರಿಯ ನಾಯಕರು ಬಿಜೆಪಿ ಸೇರಿರುವುದರಿಂದ ದೀದೀಗೆ ಮತ್ತಷ್ಟು ಕಠಿಣ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಬಿಜೆಪಿ ಹಿರಿಯ ನಾಯಕ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಚುನಾವಣೆ ವೇಳೆಗೆ ದೀದೀ ಏಕಾಂಗಿಯಾಗುತ್ತಾರೆಂದು ಭವಿಷ್ಯ ನುಡಿದಿದ್ದಾರೆ.

ಇನ್ನು ಸುದ್ದಿ ಸಂಸ್ಥಡ ಪಿಟಿಐ ಟಿಎಂಸಿ ನಾಯಕ ಹಾಗೂ ಪಶ್ಚಿಮ ಬಂಗಾಳದ ಸಚಿವ ಲಕ್ಷ್ಮೀ ರತನ್ ಶುಕ್ಲಾ ರಾಜೀನಾಮೆ ನೀಡಿದ್ದಾರೆಂದು ವರದಿ ಮಾಡಿದೆ. ಇದರ ಒಂದು ಪ್ರತಿ ರಾಜ್ಯಪಾಲ ಜಗದೀಪ್ ದನ್ಖಡೆಗೂ ನೀಡಿದ್ದಾರೆನ್ನಲಾಗಿದೆ. ಕ್ರಿಕೆಟರ್ ಆಗಿದ್ದ ಲಕ್ಷ್ಮೀಯವರ ರಾಜೀನಾಮೆಗೂ ಮೊದಲು ಟಿಎಂಸಿಯ ಪ್ರಭಾವಿ ನಾಯಕರಾಗಿದ್ದ ಸುವೇಂಧು ರಾಜೀನಾಮೆ ನಿಡಿ ಬಿಜೆಪಿ ಸೇರ್ಪಡೆಯಾಗಿದ್ದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಾರ್‌ನಲ್ಲಿ ಜೋಡಿ 'ಸರಸ' ಸೆರೆಹಿಡಿದ ಟೋಲ್‌ ಮ್ಯಾನೇಜರ್‌, ಸಿಸಿಟಿವಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್‌!
ವಿಶ್ವದ ಟಾಪ್ 10 ಬೊಟಾನಿಕಲ್ ಗಾರ್ಡನ್ ಲಿಸ್ಟ್‌ನಲ್ಲಿ ನಂ.1 ನಮ್ಮ ಲಾಲ್‌ಬಾಗ್