5ನೇ ತರಗತಿ ಬಾಲಕನಿಂದ 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ!

Published : Jan 14, 2025, 06:23 PM ISTUpdated : Jan 14, 2025, 06:38 PM IST
5ನೇ ತರಗತಿ ಬಾಲಕನಿಂದ 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ!

ಸಾರಾಂಶ

ನಾರಾಯಣಪುರದಲ್ಲಿ 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ. ಇಬ್ಬರು ಬಾಲಾಪರಾಧಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಲಕಿಯ ಆರೋಗ್ಯ ಸ್ಥಿರವಾಗಿದೆ.

ದೆಹಲಿ (ಜ.14) : ಛತ್ತೀಸ್‌ಗಢದ ನಾರಾಯಣಪುರದಲ್ಲಿ ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ. ಆಟ ಆಡಿಸುವ ನೆಪದಲ್ಲಿ ಕರೆದುಕೊಂಡು ಹೋಗಿ ಇಬ್ಬರು ಬಾಲಾಪರಾಧಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ 10 ಮತ್ತು 13 ವರ್ಷದ ಇಬ್ಬರು ಬಾಲಾಪರಾಧಿಗಳನ್ನು ಜನವರಿ 10ರಂದು ಕೋತ್ವಾಲಿ ಠಾಣಾ ವ್ಯಾಪ್ತಿಯಲ್ಲಿ ಬಂಧಿಸಲಾಗಿದೆ. ಭಾನುವಾರ ಬಾಲಕಿಯನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಬಾಲಕಿಯ ಆರೋಗ್ಯ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿಗಳಲ್ಲಿ ಒಬ್ಬನ ಕುಟುಂಬ ಬಾಲಕಿಯ ಕುಟುಂಬದ ಬಾಡಿಗೆದಾರರು ಮತ್ತು ಇನ್ನೊಬ್ಬ ಆಕೆಯ ನೆರೆಹೊರೆಯವನು ಎಂದು ತಿಳಿದುಬಂದಿದೆ.

ಆಟವಾಡುವ ನೆಪದಲ್ಲಿ ಕರೆದೊಯ್ದು ಕೃತ್ಯ: ಭಾನುವಾರ ಶಾಲೆಗೆ ರಜೆ ಇದ್ದ ಹಿನ್ನೆಲೆಯಲ್ಲಿ ಪೋಷಕರು ಮಕ್ಕಳನ್ನು ಆಟವಾಡುವುದಕ್ಕೆ ಹೊರಗೆ ಬಿಟ್ಟಿದ್ದಾರೆ. ಈ ವೇಳೆ 5ನೇ ಮತ್ತು 8ನೇ ತರಗತಿ ಓದುತ್ತಿದ್ದ ಇಬ್ಬರು ಬಾಲಕರು 4 ವರ್ಷದ ಬಾಲಕಿಯನ್ನು ಆಟವಾಡೋಣ ಬಾ ಎಂದು ಕರೆದುಕೊಂಡು ಹೋಗಿದ್ದಾರೆ. ಆರಂಭದಲ್ಲಿ ಮೈದಾನದಲ್ಲಿ ಆಟವಾಡುತ್ತಿದ್ದುದನ್ನು ಬಾಲಕಿಯ ಅಮ್ಮ ಕೂಡ ನೋಡಿದ್ದಾರೆ. ಇದಾದ ನಂತರ ಬಾಲಕಿಯನ್ನು ಹೊಲದ ಬಳಿ ಆಟವಾಡಲು ಹೋಗೋಣ ಬಾ ಎಂದು ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಬಾಲಕಿಯ ಮೇಲೆ ಇಬ್ಬರೂ ಬಾಲಕರು ಅತ್ಯಾಚಾರ ಮಾಡಿದ್ದಾರೆ.

ಇದನ್ನೂ ಓದಿ: Bengaluru: 6 ವರ್ಷದ ಬಾಲಕಿಯ ರೇಪ್‌ & ಮರ್ಡರ್‌, ದಾರುಣ ಘಟನೆಗೆ ಸಾಕ್ಷಿಯಾದ ರಾಜಧಾನಿ!

ಇನ್ನು ಬಾಲಕಿ ಅಳುತ್ತಾ ಮನೆಗೆ ಬಂದಾಗ ಆಕೆಯ ಗುಂಪ್ತಾಂಗದಲ್ಲಿ ನೋವು ಉಂಟಾಗಿದ್ದು, ಏನಾದರೂ ತಾಗಿ ಗಾಯವಾಗಿರಬಹುದು ಎಂದು ಕೂಡಲೆ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಇದಾದ ನಂತರ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದಾಗ ವೈದ್ಯರು ಬಾಲಕಿಯ ಪೋಷಕರ ಬಳಿ ಪ್ರಶ್ನೆ ಮಾಡಿದ್ದಾರೆ. ಈ ಘಟನೆ ಏನಾಗಿದೆ? ಹೇಗೆ ಆಗಿದೆ ಗೊತ್ತಿಲ್ಲವೆಂದು ಹೇಳಿದ್ದಾರೆ. ಆಗ ವೈದ್ಯರು ನಡೆಸಿದ ಪರೀಕ್ಷೆಯಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ದೃಢಪಟ್ಟಿದೆ. ನಂತರ, ಆಸ್ಪತ್ರೆಯವರೇ ಪೊಲೀಸರಿಗೆ ಬಾಲಕಿಯ ಮೇಲೆ ಅತ್ಯಾಚಾರ ನಡೆದ ವಿಚಾರದ ಬಗ್ಗೆ ಮಾಹಿತಿ ನೀಡಿದ್ದಾರೆ. ನಂತರ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿ ವೈದ್ಯರ ಪರೀಕ್ಷಾ ವರದಿಯ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಂತರ, ಆರೋಗ್ಯದಲ್ಲಿ ಸುಧಾರಿಸಿಕೊಂಡ ಬಾಲಕಿಯನ್ನು ವಿಚಾರಣೆ ಮಾಡಿದಾಗ ಘಟನೆಯ ಬಗ್ಗೆ ಹಾಗೂ ಅತ್ಯಾಚಾರ ಮಾಡಿದ ಬಾಲಕರ ಹೆಸರನ್ನು ಹೇಳಿದ್ದಾರೆ. ಆಗ ಪೊಲೀಸರು ಗ್ರಾಮಕ್ಕೆ ತೆರಳಿ ಇಬ್ಬರೂ ಬಾಲಕರನ್ನು ವಶಕ್ಕೆ ಪಡೆದಿದ್ದಾರೆ. ಪೋಕ್ಸೋ ಕೇಸ್ ಕೂಡ ದಾಖಲಿಸಿಕೊಂಡಿದ್ದು, ಬಾಲಕರನ್ನು ಬಾಲಾಪರಾಧಿಗಳು ಎಂದು ಪರಿಗಣಿಸಲಾಗಿದೆ. ಮುಂದೆ ಯಾವ ಕ್ರಮ ಆಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ಸಂಕ್ರಾಂತಿ ಹಬ್ಬಕ್ಕೆ ಮಗಳ ಮನೆಗೆ ಬಂದ ಅತ್ತೆಯನ್ನೇ ಹತ್ಯೆಗೈದ ಅಳಿಯ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ವಂದೇ ಮಾತರಂ ಚರ್ಚೆ ವೇಳೆ ಶಾ ವರ್ಸಸ್‌ ಖರ್ಗೆ
25 ಜನರು ಸಾವನ್ನಪ್ಪಿದ ಪಬ್‌ ಮಾಲೀಕರ ರೆಸಾರ್ಟ್‌ ಧ್ವಂಸ