ಸನಾತನ ಧರ್ಮವನ್ನು ಡೆಂಗ್ಯು, ಮಲೇರಿಯಾಗೆ ಹೋಲಿಸಿದ್ದ ಉದಯನಿಧಿ, ಬೆಂಗಳೂರು ಕೋರ್ಟ್‌ನಿಂದ ಸಮನ್ಸ್‌!

Published : Feb 02, 2024, 05:32 PM IST
ಸನಾತನ ಧರ್ಮವನ್ನು ಡೆಂಗ್ಯು, ಮಲೇರಿಯಾಗೆ ಹೋಲಿಸಿದ್ದ ಉದಯನಿಧಿ, ಬೆಂಗಳೂರು ಕೋರ್ಟ್‌ನಿಂದ ಸಮನ್ಸ್‌!

ಸಾರಾಂಶ

ಸನಾತನ ಧರ್ಮದ ವಿರುದ್ಧ ಉದಯನಿಧಿ ಸ್ಟ್ಯಾಲಿನ್‌ ನೀಡಿದ್ದ ಹೇಳಿಕೆಯ ಕುರಿತು ಬೆಂಗಳೂರು ಕೋರ್ಟ್‌ ಸಮನ್ಸ್‌ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.

ಬೆಂಗಳೂರು (ಫೆ.2): ಸನಾತನ ಧರ್ಮ ಡೆಂಗ್ಯೂ ಹಾಗೂ ಮಲೇರಿಯಾ ಇದ್ದಂತೆ ಅದನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು ಎಂದು ಹೇಳಿಕೆ ನೀಡಿದ್ದ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟ್ಯಾಲಿನ್‌ ಅವರ ಪುತ್ರ ಹಾಗೂ ತಮಿಳುನಾಡು ಕ್ರೀಡಾ ಸಚಿವ ಉದಯನಿಧಿ ಸ್ಟ್ಯಾಲಿನ್‌ಗೆ ಬೆಂಗಳೂರು ಕೋರ್ಟ್‌ ಶಾಕ್‌ ನೀಡಿದೆ. ಉದಯನಿಧಿ ಸ್ಟ್ಯಾಲಿನ್‌ ನೀಡಿದ್ದ ಹೇಳಿಕೆಯ ಕುರಿತು ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಈ ಹಂತದಲ್ಲಿ ಅವರ ವಿರುದ್ಧ ಬೆಂಗಳೂರಿನಲ್ಲೂ ಕೇಸ್‌ ದಾಖಲಾಗಿತ್ತು. ಶುಕ್ರವಾರ  ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ಅರ್ಜಿಯ ವಿಚಾರಣೆ ನಡೆಸಿದ್ದಲ್ಲದೆ, ಉದಯನಿಧಿ ಸ್ಟ್ಯಾಲಿನ್‌ಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ಜಾರಿ ಮಾಡಿದೆ. ಮಾರ್ಚ್‌ 4 ರಂದು ಅವರು ಖುದ್ದಾಗಿ ಕೋರ್ಟ್‌ಗೆ ಬಂದು ವಿಚಾರಣೆಗೆ ಹಾಜರಾಗಬೇಕು ಎಂದು ಹೇಳಿದೆ. ಇದೇ ವಿಚಾರದಲ್ಲಿ ಅವರಿಗೆ ಸಮನ್ಸ್ ಜಾರಿ ಮಾಡಿದೆ.

ಸ್ಟ್ಯಾಲಿನ್‌ ಅವರು ನೀಡಿದ್ದ ಹೇಳಿಕೆಯ ಕುರಿತು ಬೆಂಗಳೂರಿನ ಪರಮೇಶ್ ಎಂಬುವವರು ಖಾಸಗಿ ದೂರು ಸಲ್ಲಿಕೆ ಮಾಡಿದ್ದರು. ವಿಚಾರಣೆ ನಡೆಸಿದ 42 ನೇ ಎಸಿಎಂಎಂ ಕೋರ್ಟ್ ಶುಕ್ರವಾರ ಈ ಆದೇಶ ನೀಡಿದೆ. ವಿಶೇಷ ನ್ಯಾಯಾಲಯದ ನ್ಯಾಯಾಧೀಶೆಯಾಗಿರುವ ಜೆ.ಪ್ರೀತ್ ಅವರಿಂದ ಅದೇಶ ಪ್ರಕವಾಗಿದೆ. ಕಳೆದ ಸೆ.4ರಂದು ಚನ್ನೈನಲ್ಲಿ ಉದಯನಿಧಿ ಸ್ಟ್ಯಾಲಿನ್‌ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಸನಾತನ ಧರ್ಮವನ್ನು ಸಾಂಕ್ರಾಮಿಕ ರೋಗಕ್ಕೆ ಹೋಲಿಸುವ ಮೂಲಕ ದೊಡ್ಡ ವಿವಾದ ಸೃಷ್ಟಿಸಿದ್ದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಾರ್‌ನಲ್ಲಿ ಜೋಡಿ 'ಸರಸ' ಸೆರೆಹಿಡಿದ ಟೋಲ್‌ ಮ್ಯಾನೇಜರ್‌, ಸಿಸಿಟಿವಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್‌!
ವಿಶ್ವದ ಟಾಪ್ 10 ಬೊಟಾನಿಕಲ್ ಗಾರ್ಡನ್ ಲಿಸ್ಟ್‌ನಲ್ಲಿ ನಂ.1 ನಮ್ಮ ಲಾಲ್‌ಬಾಗ್