ಕುಂಭಮೇಳ ಎಫೆಕ್ಟ್: ಬೆಂಗ್ಳೂರು-ಪ್ರಯಾಗ್‌ರಾಜ್‌ ವಿಮಾನ ದರ ಶೇ.89 ಏರಿಕೆ!

Published : Jan 16, 2025, 07:59 AM IST
ಕುಂಭಮೇಳ ಎಫೆಕ್ಟ್: ಬೆಂಗ್ಳೂರು-ಪ್ರಯಾಗ್‌ರಾಜ್‌ ವಿಮಾನ ದರ ಶೇ.89 ಏರಿಕೆ!

ಸಾರಾಂಶ

ರೈಲುಗಳ ಬುಕ್ಕಿಂಗ್‌ನಲ್ಲಿಯೂ ಹೆಚ್ಚಳವಾಗಿದೆ. ಪ್ರಯಾಗ್‌ರಾಜ್‌ಗೆ ಸಂಚರಿಸುವ ವಿಮಾನಗಳ ಬುಕ್ಕಿಂಗ್‌ನಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಅಂಕಿ ಅಂಶದ ಪ್ರಕಾರ, ಬೆಂಗಳೂರು ಮತ್ತು ಪ್ರಯಾಗ್‌ರಾಜ್ ನಡುವಿನ ದರದಲ್ಲಿ ಶೇ.89ರಷ್ಟು ಹೆಚ್ಚಳವಾಗಿದ್ದು, 11,158 ರು. ಆಗಿದೆ. ದೆಹಲಿಯಿಂದ ಪ್ರಯಾಗ್‌ರಾಜ್‌ಗೆ ತೆರಳುವ ವಿಮಾನದ ದರದಲ್ಲಿ ಶೇ.21ರಷ್ಟು ಏರಿಕೆಯಾಗಿ 5,748ರು.ಕ್ಕೆ ತಲುಪಿದೆ. 

ನವದೆಹಲಿ(ಡಿ.16):  ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ 12 ವರ್ಷಗಳಿ ಗೊಮ್ಮೆ ನಡೆಯುವ ಮಹಾ ಕುಂಭ ಮೇಳದ ಸಂಭ್ರಮ ಮನೆ ಮಾಡಿದ್ದು, ಕೋಟ್ಯಂತರ ಭಕ್ತರು ಮಹಾಕುಂಭನಗರಕ್ಕೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ದೇಶದ ಬೇರೆ ಬೇರೆ ಪ್ರಮುಖ ನಗರಗಳಿಂದ ಪ್ರಯಾಗ್‌ರಾಜ್‌ಗೆ ಸಂಚರಿಸುವ ವಿಮಾನಗಳ ದರದಲ್ಲಿ ಹಲವು ಪಟ್ಟು ಏರಿಕೆಯಾಗಿದೆ. 

ರೈಲುಗಳ ಬುಕ್ಕಿಂಗ್‌ನಲ್ಲಿಯೂ ಹೆಚ್ಚಳವಾಗಿದೆ. ಪ್ರಯಾಗ್‌ರಾಜ್‌ಗೆ ಸಂಚರಿಸುವ ವಿಮಾನಗಳ ಬುಕ್ಕಿಂಗ್‌ನಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಅಂಕಿ ಅಂಶದ ಪ್ರಕಾರ, ಬೆಂಗಳೂರು ಮತ್ತು ಪ್ರಯಾಗ್‌ರಾಜ್ ನಡುವಿನ ದರದಲ್ಲಿ ಶೇ.89ರಷ್ಟು ಹೆಚ್ಚಳವಾಗಿದ್ದು, 11,158 ರು. ಆಗಿದೆ. ದೆಹಲಿಯಿಂದ ಪ್ರಯಾಗ್‌ರಾಜ್‌ಗೆ ತೆರಳುವ ವಿಮಾನದ ದರದಲ್ಲಿ ಶೇ.21ರಷ್ಟು ಏರಿಕೆಯಾಗಿ 5,748ರು.ಕ್ಕೆ ತಲುಪಿದೆ. 

ಸಾವಿಗೂ ಮುನ್ನ ಸ್ಟೀವ್ ಜಾಬ್ಸ್ ಕುಂಭಮೇಳಾಗೆ ಹೋಗುವ ಆಸೆ ವ್ಯಕ್ತಪಡಿಸಿದ್ದ ಪತ್ರ ₹4.32 ಕೋಟಿಗೆ ಮಾರಾಟ!

ಮುಂಬೈ ಪ್ರಯಾಗ್‌ರಾಜ್ ನಡುವಿನ ವಿಮಾನ ದರ ಶೇ.13ರಷ್ಟು ಏರಿಕೆಯಾಗಿದ್ದು, 6,381ರು.ಗೆ ತಲುಪಿದೆ. ಈ ಹಿಂದೆ ಭೋಪಾಲ್ ಮತ್ತು ಪ್ರಯಾಗ್‌ರಾಜ್ 2,977 ರು. ಇತ್ತು. ಸದ್ಯದ ದರ 17,796 ರು. ಇದೆ. 

ಇನ್ನು ಅಹಮದಾಬಾದ್- ಪ್ರಯಾಗ್‌ರಾಜ್ ನಡುವಿನ ದರ ಶೇ.41ರಷ್ಟು ಏರಿಕೆಯೊಂದಿಗೆ 10,364 ರು.ಗೆ ತಲುಪಿದೆ. ಮಾತ್ರವಲ್ಲದೇ ಮಹಾಕುಂಭ ನಡೆಯುತ್ತಿರುವ ಪ್ರಯಾಗ್‌ರಾಜ್‌ಗೆ ಸಮೀಪದಲ್ಲಿರುವ ಲಖನೌ, ವಾರಾಣಾಸಿಗೆ ವಿಮಾನ ಪ್ರಯಾಣ ಶೇ.3ರಿಂದ 21ರಷ್ಟು ಏರಿಕೆಯಾಗಿದೆ. ಈ ನಡುವೆ ಫೆ.26ರವರೆಗೆ ಪ್ರಯಾಗ್‌ರಾಜ್ ರೈಲುಗಳ ಬುಕ್ಕಿಂಗ್‌ನಲ್ಲಿ ಜಿಗಿತ ಕಂಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮೋದಿ ಅವರೇ ನನ್ನ ಗಂಡ ವಿಕ್ರಂನನ್ನು ಪಾಕಿಸ್ತಾನಕ್ಕೆ ಕಳುಹಿಸಿ: ಪಾಕ್ ಮಹಿಳೆಯ ಮನವಿ
ಕಾರವಾರ ಜೈಲಲ್ಲಿ ಡ್ರಗ್ಸ್‌ಗಾಗಿ ಜೈಲ‌ರ್ ಮೇಲೆ ಕೈದಿಗಳಿಂದ ಹಲ್ಲೆ: ಬೆಂಗಳೂರು ಜೈಲೊಳಗೆ ಸಿಗರೇಟ್ ಸಾಗಿಸಲೆತ್ನಿಸಿ ಸಿಕ್ಕಿಬಿದ್ದ ವಾರ್ಡನ್