ಚಂದ್ರನ ಮೇಲೆ ಇಟ್ಟಿಗೆ ತಯಾರಿ: ಬೆಂಗಳೂರು ವಿಜ್ಞಾನಿಗಳ ಸಂಶೋಧನೆ!

Published : Aug 15, 2020, 12:34 PM ISTUpdated : Aug 15, 2020, 01:16 PM IST
ಚಂದ್ರನ ಮೇಲೆ ಇಟ್ಟಿಗೆ ತಯಾರಿ: ಬೆಂಗಳೂರು ವಿಜ್ಞಾನಿಗಳ ಸಂಶೋಧನೆ!

ಸಾರಾಂಶ

ಚಂದ್ರನ ಮೇಲೆ ಇಟ್ಟಿಗೆ ತಯಾರಿಸುವ ಐಡಿಯಾ!| ಬೆಂಗಳೂರು ವಿಜ್ಞಾನಿಗಳ ಸಂಶೋಧನೆ| ಭವಿಷ್ಯದಲ್ಲಿ ಮಾನವ ವಸತಿಗೆ ಅನುಕೂಲ

 ಬೆಂಗಳೂರು(ಆ.15): ಚಂದ್ರ ಸೇರಿದಂತೆ ಇತರೆ ಗ್ರಹಗಳಲ್ಲಿ ಮಾನವರ ವಾಸಕ್ಕೆ ಪೂರಕ ವಾತಾವರಣ ಇದೆಯೇ ಎಂಬುದನ್ನು ಶೋಧಿಸಲು ವಿಶ್ವಾದ್ಯಂತ ವಿಜ್ಞಾನಿಗಳು ಸಂಶೋಧನೆಯಲ್ಲಿ ತೊಡಗಿರುವಾಗಲೇ, ಚಂದ್ರನ ಮೇಲೆ ‘ಇಟ್ಟಿಗೆ’ ತಯಾರಿಸಲು ಭಾರತೀಯ ವಿಜ್ಞಾನಿಗಳು ಹೊಸ ಮಾರ್ಗ ಶೋಧಿಸಿದ್ದಾರೆ.

ಚಂದ್ರನಲ್ಲಿ ಸಿಗುವ ಮಣ್ಣು, ಯೂರಿಯಾ ಬಳಸಿ ಭಾರ ತಡೆಯುವಂತಹ ಇಟ್ಟಿಗೆಯಂತಹ ರಚನೆ ಹೇಗೆ ಮಾಡಬಹುದು ಎಂಬುದನ್ನು ಬೆಂಗಳೂರಿನ ಭಾರತೀಯ ವಿಜ್ಞಾನ ಮಂದಿರ (ಐಐಎಸ್ಸಿ) ಹಾಗೂ ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ವಿಜ್ಞಾನಿಗಳು ಹುಡುಕಿದ್ದಾರೆ. ಈ ಮೂಲಕ ಭವಿಷ್ಯದಲ್ಲಿ ಚಂದ್ರನ ಮೇಲೆ ಮಾನವ ವಸತಿ ಕೈಗೊಳ್ಳುವ ಸ್ಥಿತಿ ಬಂದರೆ ಈ ಬಾಹ್ಯಾಕಾಶ ಇಟ್ಟಿಗೆಗಳನ್ನು ಬಳಸಿಕೊಂಡು, ಕಟ್ಟಡಗಳನ್ನು ವಿನ್ಯಾಸಗೊಳಿಸಬಹುದಾಗಿದೆ.

ಭೂಮಿಯಿಂದ ಬಾಹ್ಯಾಕಾಶಕ್ಕೆ ಅರ್ಧ ಕೆ.ಜಿ. ವಸ್ತು ಒಯ್ಯಲು 7.5 ಲಕ್ಷ ರು. ವೆಚ್ಚವಾಗುತ್ತದೆ. ಈ ಹಿನ್ನೆಲೆಯಲ್ಲಿ ಚಂದ್ರನಲ್ಲಿಯೇ ಇಟ್ಟಿಗೆಯಂತಹ ವಸ್ತು ತಯಾರಿಸುವ ಸಂಶೋಧನೆಯಿಂದ ಆ ಖರ್ಚು ಉಳಿಯುವ ಸಾಧ್ಯತೆ ಇರುತ್ತದೆ.

ಈ ಪ್ರಕ್ರಿಯೆಯ ಪ್ರಕಾರ, ಮಾನವರ ಮೂತ್ರದಿಂದ ಸಿಗುವ ಯೂರಿಯಾ, ಚಂದ್ರನ ಮಣ್ಣು ಬಳಸಿ ಇಟ್ಟಿಗೆ ತಯಾರಿಸಬಹುದಾಗಿದೆ. ಸಿಮೆಂಟ್‌ ಬದಲಿಗೆ ಗೋರಿಕಾಯಿಯನ್ನು ಅಂಟಿನ ರೂಪದಲ್ಲಿ ಬಳಸಬಹುದಾಗಿದೆ ಎಂದು ಐಐಎಸ್ಸಿ ಹೇಳಿಕೆ ನೀಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅಯೋಧ್ಯೆಯ ರಾಮಲಲ್ಲಾ ಪ್ರತ್ಯಕ್ಷನಾಗಿ ಆಶೀರ್ವದಿಸಿದರೆ ಹೇಗಿರತ್ತೆ? ರೋಮಾಂಚಕಾರಿ ವಿಡಿಯೋ ವೈರಲ್​
ಮೆಹೆಂದಿಯಾಗಿತ್ತು, ಆದರೆ ಮದುವೆಯಾಗಲ್ಲ: ಕೊನೆಗೂ Palash Muchhal ಜೊತೆಗಿನ ಸಂಬಂಧಕ್ಕೆ ತೆರೆ ಎಳೆದ Smriti Mandhana