ಇಂದು ಭಾರತ್ ಬಂದ್: ಸಂಪೂರ್ಣ ಸ್ತಬ್ಧ ಇಲ್ಲ? ಕಾರಣ ಇಲ್ಲಿದೆ

Published : Dec 08, 2020, 07:37 AM ISTUpdated : Dec 08, 2020, 01:09 PM IST
ಇಂದು ಭಾರತ್ ಬಂದ್: ಸಂಪೂರ್ಣ ಸ್ತಬ್ಧ ಇಲ್ಲ? ಕಾರಣ ಇಲ್ಲಿದೆ

ಸಾರಾಂಶ

ಇಂದು ಭಾರತ್ ಬಂದ್| ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ರೈತರಿಂದ ಬಂದ್‌ಗೆ ಕರೆ| ಬಂದ್ ಯಶಸ್ವಿಯಾಗೋದು ಡೌಟ್

ನವದೆಹಲಿ(ಡಿ.08): ಕೇಂದ್ರ ಸರ್ಕಾರ ಸಪ್ಟೆಂಬರ್‌ನಲ್ಲಿ ಅಂಗೀಕರಿಸಿದ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಕಳೆದ ಹನ್ನೆರಡು ದಿನಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು, ಸಂಘಟನೆಗಳು ಮಂಗಳವಾರ ಬಂದ್ ನಡೆಸಲು ಕರೆ ನೀಡಿವೆ.

ಹಳೇ ನಿಯಮದಿಂದ ಭವ್ಯ ಭಾರತ ನಿರ್ಮಾಣ ಸಾಧ್ಯವಿಲ್ಲ; ಪರೋಕ್ಷ ಸೂಚನೆ ನೀಡಿದ ಮೋದಿ!

ಈ ರೈತ ಹೋರಾಟಕ್ಕೆ ಹದಿನೆಂಟು ರಾಜಕೀಯ ಪಕ್ಷಗಳು, ದೆಶವ್ಯಾಪಿ ವಿವಿಧ ಸಂಘಟನೆಗಳು ವ್ಯಾಪಕ ಬೆಂಬಲ ನೀಡಿವೆ. ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಬಂದ್ ನಡೆಯಲಿದೆ. ಆದರೆ ವಿವಿಧ ಕಾರಣಗಳಿಂದ ಈ ಬಂಷದ್ ಸಂಪೂರ್ಣ ಸ್ತಬ್ಧವಾಗುವ ಬಗ್ಗೆ ಅನುಮಾನವಿದೆ ಎಂದು ವಿಶ್ಲೇಷಿಸಲಾಗಿದೆ. 

ಯಾಕೆ ಬಂದ್ ಸಾಧ್ಯತೆ ಇಲ್ಲ?

* ಜನರಿಗೆ ತೊಂದರೆಯಾಗಬಾರದೆಂಬ ಕಾರಣ ನೀಡಿ ದಿಲ್ಲಿಯ ರೈತ ಸಂಘಟನೆಗಳೇ ಕೇವಲ ನಾಲ್ಕು ತಾಸುಗಳ ಬಂದ್‌ಗೆ ಕರೆ ನೀಡಿವೆ.

* ಬ್ಯಾಂಕ್, ಸರ್ಕಾರಿ ಕಚೇರಿ, ಅಂಗಡಿ ಮುಂಗಟ್ಟು, ಸಾರಿಗೆ ಮತ್ತಿತರ ಪ್ರಮುಖ ಕ್ಷೇತ್ರಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ. 

ಭಾರತ್ ಬಂದ್: ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಮಹತ್ವದ ಸೂಚನೆ ಜಾರಿ!

* ಬಂದ್‌ಗೆ ಬೆಂಬಲ ನೀಡಿರುವ ಕಾರ್ಮಿಕ, ಸಾರಿಗೆ ಸಂಘಟನೆಗಳಲ್ಲೇ ಒಡಕಿದೆ. ಕೆಲವು ಸಂಣಘಟನೆಗಳು ಸಹಕರಿಸಲ್ಲ ಎಂದಿವೆ.

* ಸಾಮಾನ್ಯವಾಗಿ ಹೋರಾಟಕ್ಕೆ ಬರುವ ಸಂಘ- ಸಂಸ್ಥೆಗಳು ನೈತಿಕ ಬೆಂಬಲ ನೀಡಿದ್ದು, ಪ್ರತಿಭಟನೆಯಷ್ಟೇ ನಡೆಯುವ ಸಾಧ್ಯತೆ ಇದೆ.

ಬಿಜೆಪಿ ಆಡಳಿತವಿರುವ ಅನೇಕ ರಾಜ್ಯಗಳಲ್ಲಿ ಬಂದ್ ವಿಫಲಸಾಧ್ಯತೆ. ಜೊತೆಗೆ ಕೇಂದ್ರದಿಂದಲೂ ಬಂದ್ ಆಗದಂತೆ ಪ್ರಯತ್ನ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕರ್ನಾಟಕ ಸಂಸದರ ಬಗ್ಗೆ ಪ್ರಧಾನಿ ಮೋದಿ ಅಸಮಾಧಾನ, ತೀವ್ರ ಕ್ಲಾಸ್, ಆ 45 ನಿಮಿಷ ಸಭೆಯಲ್ಲಿ ಹೇಳಿದ್ದೇನು?
ಚೈನೀಸ್ ಮಾಂಜಾಗೆ ಮತ್ತೊಂದು ಬಲಿ: ಮಗಳನ್ನು ಶಾಲೆಗೆ ಬಿಟ್ಟು ವಾಪಸಾಗುತ್ತಿದ್ದ ತಂದೆ ಸಾವು